Monday, August 18, 2014

ಮೈಸೂರು ಹುಸೇನಿಯ ಕೈಚಳಕ ಸಾಂಜಿ ಕಲೆಯಲ್ಲಿ ಅರಳಿದ ಶ್ರೀಕೃಷ್ಣ

        ಸಾಂಝಿ ಎಂಬ ಚಿತ್ರಕಲೆ ನಮ್ಮ ದೇಶದ ಪುರಾತನ ಕಲಾ ಪ್ರಕಾರಗಳಲ್ಲೊಂದು. ಹಲವಾರು ಶತಮಾನಗಳ ಹಿಂದಿನಿಂದಲೂ ಈ ಕಲೆ ಸಂಪ್ರದಾಯದ ರೂಪದಲ್ಲಿ ಬಳಕೆಯಾಗುತ್ತಿದೆ. ಕಾಗದ ಕತ್ತರಿಯಲ್ಲಿ ಸಾಂಝಿ ಕಲೆಯನ್ನು ಮೂಡಿಸಿದವರೂ ಹಲವು ಮಂದಿ. ಅಂತವರಲ್ಲೊಬ್ಬರು ಮೈಸೂರಿನ ಎಸ್. ಎಫ್. ಹುಸೇನಿಯವರು.
ನಮ್ಮ ಪುರಾತನ ಅಪರೂಪದ ಜನಪದ ಕಲಾಪ್ರಕಾರಗಳಲ್ಲಿ ಸಾಂಝಿ(ಕಾಗದಕತ್ತರಿ) ಕಲೆಯೂ ಒಂದು. ಸಾಂಝಿಕಲಾವಿದ ಎಸ್.ಎಫ್.ಹುಸೇನಿ ಮೈಸೂರು ಇವರು ಶ್ರೀಕೃಷ್ಣ ವಿಭಿನ್ನ, ವಿಶೇಷ ಚಿತ್ರಗಳನ್ನು ಬಹುಕಲಾತ್ಮಕವಾಗಿ ಕಾಗದದಲ್ಲಿ ಕತ್ತರಿ ಹಾಗು ಕಟರ್ ಸಹಾಯದಿಂದ ಸೂಕ್ಷ ್ಮವಾಗಿ ರಚಿಸಿದ್ದಾರೆ. ಹಿಂದೆ ಉತ್ತರ ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿದ್ದ ಸಾಂಝಿ ಕಲೆ ಇದೀಗ ದೇಶ ವಿದೇಶಗಳಿಗೆ ವ್ಯಾಪಿಸಿದೆ. ಮೈಸೂರು ಹುಸೇನಿ ತಮ್ಮ ಕೈಚಳಕದಿಂದ ಸಾಂಝಿ ಕಲೆಯಲ್ಲಿ ಶ್ರೀಕೃಷ್ಣನನ್ನು ಮೂಡಿಸಿದ್ದಾರೆ.
ಆಧುನಿಕ ಜನರ ಜೀವನಶೈಲಿಬದಲಾಗುತ್ತಿರುವ ಇತ್ತೀಚಿನ ದಿನಗಳಲ್ಲಿ ಈ ವಿಶೇಷಕಲೆ ಇತ್ತೀಚೆಗೆ ಬಳಕೆಯಾಗದೆ ನಿಧಾನಗತಿಯಲ್ಲಿ ಜನಮಾನಸದಿಂದ ಕಣ್ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಅನೇಕ ಕಲಾವಿದರು ಸಾಂಝಿಕಲೆಯನ್ನು ಉಳಿಸುವ, ಜನಪ್ರಿಯಗೊಳಿಸುವ ಕೆಲಸವನ್ನು ದೇಶದಹಲವೆಡೆ ನೆಡೆಸುತ್ತಿದ್ದಾರೆ. ಅಂತಹವರಲ್ಲಿ ಎಸ್.ಎಫ್.ಹುಸೇನಿ ಮೈಸೂರು ಸಹ ಒಬ್ಬರು.
ಮೈಸೂರು ಹುಸೇನಿ ಎಂದೇ ಪರಿಚಿತರಾಗಿರುವ ಎಸ್.ಎಫ್. ಹುಸೇನಿ ಈ ಕಲೆಯ ಪ್ರಚಾರಕ್ಕೆ ರಾಜ್ಯಾದ್ಯಂತ ಸಂಚರಿಸುತ್ತಾ 22 ಜಿಲ್ಲೆಗಳಲ್ಲಿ ಆಸಕ್ತ ಮಕ್ಕಳಿಗೆ, ಮಹಿಳೆಯರಿಗೆ, ಮತ್ತು ಆಸಕ್ತರಿಗೆ ಸಾಂಝಿ ಕಲೆ ಕಾಯರ್ಾಗಾರ ತರಬೇತಿ ಪ್ರದರ್ಶನವನ್ನು ನಡೆಸುತ್ತಿದ್ದಾರೆ. ತಾವೇ ತಯಾರಿಸಿದ ವಿಶೇಷ ಸರಣಿ ಚಿತ್ರಗಳಾದ ಸಾಂಝಿಗಣಪ, ಸಾಂಝಿರಂಗೋಲಿ, ಸಾಂಝಿಮಾಸ್ಕ್, ಸಾಂಝಿಶಿವ, ಸಂಪ್ರಾದಾಯಕ, ಆಧುನಿಕ, ಜನಪದರೀತಿಯಲ್ಲಿ ಅನೇಕ ಕಲಾಕೃತಿಗಳನ್ನು ರಚಿಸಿ ಆಸಕ್ತರಿಗೆ ಈ ಕಲೆಯ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದಾರೆ.
ಹುಸೇನಿಯವರು ಸದಾ ಪ್ರಯೋಗಶೀಲ ಪ್ರಯತ್ನಗಳಿಗೆ, ನಿರಂತರ ಹೊಸತನಕ್ಕೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅವರು ಕೇವಲ ಒಂದೇ ಬಗೆಯ ಕಲಾಕೃತಿಗಳಿಗೆ ಸೀಮಿತವಾಗದೆ ಹಲವಾರು ಪ್ರಯೋಗಾತ್ಮಕ ಕೆಲಸಗಳಲ್ಲಿ ತೊಡಗಿದ್ದಾರೆ. ಅವರ ವಿಶಿಷ್ಟ ಬಗೆಯ ಏಕರೇಖಾಚಿತ್ರಗಳು, ಪ್ರಯೋಗಾತ್ಮಕ ಅಮೂರ್ತ ಛಾಯಾಚಿತ್ರಗಳು, ಕಾಗದ ಭಿತ್ತಿಶಿಲ್ಪಗಳು, ಮತ್ತು ಸಾಂಝಿಜನಪದ ಕಾಗದ ಕತ್ತರಿಕಲೆ ಕಲಾಕೃತಿಗಳು ಹುಸೇನಿ ಅವರ ಕಲಾಪ್ರತಿಭೆಗೆ ಕೈಗನ್ನಡಿಯಾಗಿವೆ. ಸಿಡಿಯನ್ನು ಬಳಸಿ ತೆಗೆದಿರುವ ಅಮೂರ್ತಛಾಯಾಚಿತ್ರಗಳು ಸುಮಾರು ಐದುಸಾವಿರಕ್ಕೂ ಹೆಚ್ಚು. ಇದು ಅವರ ಸೃಜನಶೀಲತೆ ಮತ್ತು ಕಲಾತ್ಮಕ ಪ್ರಯೋಗಗಳಿಗೆ ಒಂದುಉದಾಹರಣೆ.
ತಂದೆ ಸಯ್ಯದ್ ಫೀರ್, ತಾಯಿ ಜೀನಾತ್ವುನ್ನಿಸಾ ಬೀ ರವರ ಮಗನಾಗಿ ಮಂಡ್ಯಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರಂ (ಬ್ಲಫ್) ನಲ್ಲಿ ಜನಿಸಿದ ಇವರು ಬಾಲ್ಯದ ದಿನಗಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತರಾಗಿ ಕಲೆಯಲ್ಲಿಯೇ ಜೀವನ ರೂಪಿಸುವಂತಾಯಿತು. ಮೈಸೂರಿನ ವೈಜಯಂತಿ ಚಿತ್ರಕಲಾ ಶಾಲೆಯಲ್ಲಿ ಪೈನ್ ಆಟರ್್ ಡಿಪ್ಲೊಮ ಮತ್ತು ಆಟರ್್ಮಾಸ್ಟರ್ ಶಿಕ್ಷಣ ಪಡೆದು ಧಾರವಾಡದ ಕನರ್ಾಟಕ ವಿಶ್ವ ವಿದ್ಯಾಲಯದಲ್ಲಿ ಚಿತ್ರಕಲೆಯಲ್ಲಿ ಬಿ.ಎಫ್.ಎ. ಪದವಿಯನ್ನು ಇವರು ಪಡೆದಿದ್ದಾರೆ.
ಹುಸೇನಿ ಚಿತ್ರಕಲೆಯನ್ನು ಮೈಸೂರು, ಬೆಂಗಳೂರು, ಧಾರವಾಡ, ಗುಲ್ಬರ್ಗ, ಉಡುಪಿ ಹೀಗೆ ಅನೇಕ ಕಡೆಗಳಲ್ಲಿ 11 ಏಕವ್ಯಕ್ತಿ ಚಿತ್ರಕಲಾಪ್ರದರ್ಶನಗಳು, ಸುಮಾರು 80ಕ್ಕೂ ಹೆಚ್ಚು ಸಮೂಹಕಲಾಪ್ರದರ್ಶನ ಕಾರ್ಯಗಾರಗಳಲ್ಲಿ ಭಾಗವಹಿಸಿ ಕನರ್ಾಟಕ ಮಾತ್ರವಲ್ಲದೆ ಹೊರರಾಜ್ಯಗಳಾದ ಮುಂಬೈ, ದೆಹಲಿ, ಚೆನ್ನೈ ನಗರಗಳಲ್ಲಿ ಚಿತ್ರಕಲಾ ಪ್ರದರ್ಶನಗಳನ್ನು ನೀಡಿದ್ದಾರೆ. ಹುಸೇನಿಯವರ ವಿಶೇಷತೆ ಎಂದರೆ ಗ್ರಾಮೀಣ ಭಾಗದ ಜನರಿಗೆ ಕಲೆ ತಲುಪುವ ಉದ್ದೇಶದಿಂದ ತಮ್ಮದೇ ಸಾಂಝಿ ಕಲಾಲೋಕ ಸಂಸ್ಥೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಹತ್ತುವರ್ಷಗಳಿಂದ ಚಿತ್ರಕಲಾಪ್ರದರ್ಶನ, ಕಾರ್ಯಗಾರಗಳನ್ನು ನಡೆಸುತ್ತಾ ಬಂದಿದ್ದಾರೆ. ಇವರ ಅನೇಕ ಕಲಾಕೃತಿಗಳು ದೇಶ ಮತ್ತು ವಿದೇಶಗಳ (ಆಸ್ಟ್ರೇಲಿಯ, ಫಿನ್ಲ್ಯಾಂಡ್, ಜರ್ಮನ್, ಸೌತ್ ಆಫ್ರಿಕ, ದೋಹ) ಖಾಸಗಿ ಸಂಗ್ರಹಕಾರರಲ್ಲಿ ಸಂಗ್ರಹಗೊಂಡಿವೆ.
ಎಸ್.ಎಫ್.ಹುಸೇನಿಯವರ ಕಲಾಪ್ರತಿಭೆಗೆ ಅನೇಕ ಪ್ರಶಸ್ತಿ ಸನ್ಮಾನಗಳು ಸಂದಿವೆ ಅವುಗಳಲ್ಲಿ ಮುಖ್ಯವಾಗಿ 1999 ರಲ್ಲಿ ಮೈಸೂರು ದಸರಕಲಾಪ್ರದರ್ಶನಪ್ರಶಸ್ತಿ, 2001-ರಲ್ಲಿ ಮೈಸೂರಿನ ಕನ್ನಡಸಂಸ್ಕೃತಿ ಇಲಾಖೆಯಿಂದ ಯುವಸಂಭ್ರಮ ಪ್ರಶಸ್ತಿ, ಧಮಸ್ಥಳದ ಶಾಂತಿವನಟ್ರಸ್ಟ್ ವತಿಯಿಂದ ನಡೆಯುವ ರಾಜ್ಯ ಮಟ್ಟದ ಅಂಚೆಕುಂಚ ಸ್ಪಧರ್ೆಯಲ್ಲಿ 2001ರಿಂದ ಸತತ ನಾಲ್ಕು ಹಾಗು 2007ರಲ್ಲಿ ಪ್ರಶಸ್ತಿ ಒಟ್ಟು ಐದು ಬಾರಿ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆಯುವ ಅಂತರಾಷ್ಟ್ರೀಯ ಜಪಾನ್ಹಬ್ಬದಲ್ಲಿ 2009 ರಿಂದ ನಾಲ್ಕು ಬಾರಿ, ಕಿರಿಗಾಮಿ ಪೇಪರ್ ಕಟ್ಟಿಂಗ್ಸ್ ಕಾಗದ ಕಲೆಯ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ, 1999ರಲ್ಲಿ ಮೈಸೂರಿನ ರಾಮನ್ಸ್ ಕಂಪ್ಯೂಟರ್ಸ್ರವರ ರಾಕೊಫೇಸ್ಟ್ ಪ್ರಶಸ್ತಿ, ಕನರ್ಾಟಕಲಲಿತ ಕಲಾ ಅಕಾಡೆಮಿಯಿಂದ ಎರಡು ಬಾರಿ ಸ್ಕಾಲರ್ಶಿಪ್ 1999 ಮತ್ತು 2000. ವೈಜಯಂತಿಚಿತ್ರಕಲಾಶಾಲೆಯಿಂದ ಬೆಸ್ಟ್ ಮ್ಯೂರಲ್ ಪ್ರಶಸ್ತಿ, 2001-ರಲ್ಲಿ ಮೈಸೂರಿನ ಮಾನಸಗಂಗ್ರೋತಿಯ ಮಹಿಳಾ ಅಧ್ಯಯನ ಕೇಂದ್ರದಿಂದ ಪೋಸ್ಟರ್ ರಚನಗೆ ಪ್ರಶಸ್ತಿ, ಇವುಗಳ ಜೊತೆಗೆ ಅನೇಕ ಸಂಘಸಂಸ್ಥೆಗಳಿಂದ ಸನ್ಮಾನಗಳು ಸಾಂಝಿಕಲಾಸಾಮ್ರಾಟ್, ಚಿತ್ರರತ್ನ ಹೀಗೆ ಹಲವಾರು ಪ್ರಶಸ್ತಿಗಳು ಸಂದಿವೆ.
ಹುಸೇನಿಯವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯ ಬೇಕಾಗಿದ್ದಲ್ಲಿ 9845153277ಕ್ಕೆ ಕರೆ ಮಾಡಬಹುದು ಇಲ್ಲವೆ ಇವರ ಬ್ಲಾಗ್: ಟಥಿಠಡಿಜಣಜಟಿ.ಛಟಠರಠಿಠಣ.ಟಿ  ನಲ್ಲಿ ಸಾಂಝಿ ಕಾಗದ ಕಲೆಯ ಚಿತ್ರಗಳನ್ನು ನೋಡಬಹುದಾಗಿದೆ. ನಮ್ಮ ನಡುವೆ ಇದ್ದು ನಮ್ಮ ಸಾಂಪ್ರದಾಯಿಕ ಕಲಾ ಪ್ರಕಾರದಲ್ಲಿ ಗಣನೀಯ ಸಾಧನೆ ಮಾಡಿದ ಹುಸೇನಿಯಂತವರು ಹಲವರಿಗೆ ಮಾದರಿಯಾಗಿತ್ತಾರೆ.
**
ಸಾಂಝಿ ಕಲೆಯ ಕುರಿತು ಮಾಹಿತಿ :
ಸಾಂಝಿ ಎನ್ನುವುದರ ಮೂಲ ಅರ್ಥ ಅಲಂಕಾರ, ಸಿಂಗಾರ. ಉತ್ತರಪ್ರದೇಶದಲ್ಲಿ ರಂಗೋಲಿಯನ್ನು ಸಾಂಝಿ ಎನ್ನುತ್ತಾರೆ.  ಮಥುರಾ ಸಾಂಝಿಕಲೆಯ ತವರು. ಶ್ರೀ ಕೃಷ್ಣನ ಜನ್ಮಸ್ಥಳವೆಂದು ಭಾರತೀಯರು ಪೂಜಿಸುವ ಸ್ಥಳದಲ್ಲಿ ಸಾಂಝಿಕಲೆಯನ್ನು ಕೃಷ್ಣಪರಮಾತ್ಮನ ಲೀಲೆ, ಪವಾಡ, ಗೀತೋಪದೇಶ, ಹೆಚ್ಚಾಗಿ ರಾಧಾಕೃಷ್ಣರ ರಾಸಲೀಲೆ ಮುಂತಾದವುಗಳನ್ನು ತಮ್ಮ ಕಲ್ಪನೆಗೆ ತಕ್ಕಂತೆ ಚಿತ್ರಗಳನ್ನು ರೂಪಿಸಿ ಅವುಗಳನ್ನು ವಿನ್ಯಾಸ ರಚನೆಗೆ, ರಂಗೋಲಿ ವಿನ್ಯಾಸಗಳಿಗಾಗಿ ಒತ್ತುಕಲೆಯಾಗಿ ಸಾಂಝಿಕಲೆಯನ್ನು ಹೆಚ್ಚಾಗಿ ಬಳಸಲಾಗುತ್ತಿತ್ತು. ಕಾಲ ಕ್ರಮೇಣ ಆನೇಕ ಕಲಾ ಪ್ರವೀಣರು ವಿವಿಧ ದೇವಾನುದೇವತೆಗಳು, ಹೂಬಳ್ಳಿ, ಪ್ರಕೃತಿಯಂತಹ ಚಿತ್ರಗಳನ್ನು ರಚಿಸಿ ದೇವಸ್ಥಾನ, ರಥ, ರಥಬೀದಿ, ಪಲ್ಲಕ್ಕಿಅಲಂಕಾರ, ದೇವರಉತ್ಸವಕ್ಕೆ ಬಳಸುತ್ತಿದ್ದರಿಂದ ಇದನ್ನು ದೇವಸ್ಥಾನ ಕಲಾಸಾಂಝಿ ಎಂದು ಕರೆಯಲಾಗುತಿತ್ತು. ಕಾಗದದಲ್ಲಿ ಒಳ್ಳೆಯ ಚಿತ್ರಗಳನ್ನು ಕತ್ತರಿಸಿ ನೆಲದ ಮೇಲೆ ಹರಡಿ ಅವುಗಳ ಮೇಲೆ ರಂಗೋಲಿ ಪುಡಿ, ಹೂಗಳನ್ನು ತುಂಬಿ ಕಾಗದತೆಗೆದಾಗ ಬಗೆಬಗೆಯ ಅಲಂಕಾರಿಕ ಚಿತ್ರಗಳು ಮೂಡುತ್ತಿದ್ದದ್ದು ಗೊತ್ತಾಯಿತು. ನಂತರ ತಮಗೆ ಬೇಕಾದ ಹಾಗೆ ಕಾಗದದ ಅಚ್ಚುಗಳನ್ನು ತಯಾರಿಸಿ ಅದನ್ನು ಒಂದು ಪರಿಪೂರ್ಣವಾದ ಕಲೆಯಾಗಿಸುವಷ್ಟು ಪರಿಣಿತಿಯನ್ನು ನಮ್ಮ ಹಿಂದಿನವರು ಪಡೆದಿದ್ದರು. ಹೀಗಾಗಿ ಇಂದೊದು ಪ್ರತ್ಯೇಕ ಕಲೆಯಾಗಿ ಬೆಳೆಯಿತು.

No comments:

Post a Comment