Sunday, October 26, 2014

ಬದಲು ಬಯಕೆ

ಇರುಳು ಹಾಯುವ ಹಾದಿಯಲ್ಲಿ
ಒಮ್ಮೆ ಮಾತನು ಆಡುವಾ |
ಸಾವು ಸುಳಿಯುವ ಬದುಕಿನಲ್ಲಿ
ಹಳೆಯ ಸೇಡನು ಮರೆಯುವಾ ||

ಬದುಕಿನಾ ಈ ರೇಖೆಯೊಳಗೆ
ಸೇಡು ಉನ್ನತಿ ಮೆರೆಯುತ್ತಿತ್ತು |
ಎದೆಯ ಆಳದ ಹುಮ್ಮಸ್ಸೆಲ್ಲ
ದ್ವೇಷವಾಗಿಯೇ ಸುರಿಯುತ್ತಿತ್ತು ||

ಈಗ ಹಾದಿಯು ಮಂಜು-ಮಂಜು
ಸ್ವಷ್ಟ ಚಿತ್ರಣ ಇಲ್ಲವೇ |
ನಿನ್ನೆ ಮಾಡಿದ ಕರ್ಮವೆಲ್ಲವೂ
ಮನದ ನೆನಪಲಿ ಉಳಿದಿವೆ ||

ಇನ್ನು ದ್ವೇಷವ ಮರೆತು ನಾವು
ಹೊಸತು ಲೋಕವ ಕಟ್ಟುವಾ |
ದ್ವೇಷ-ಸೇಡಿಗೆ ಅರ್ಥವಿಲ್ಲ
ಎಂದು ಲೋಕಕೆ ಸಾರುವಾ ||

**
(ಈ ಕವಿತೆಯನ್ನು ದಂಟಕಲ್ಲಿನಲ್ಲಿ ಬರೆದಿದ್ದು, 11-12-2006ರಂದು)

No comments:

Post a Comment