Tuesday, August 3, 2010

ಬೀದಿ ಬದಿ ಸೃಷ್ಟಿಯಾಗುವ ಕಲಾಕೃತಿಗಳು


ಅವರು ರಸ್ತೆ ಬದಿಯ ಕಲಾಕಾರರು. ಬೆಂಗಳೂರಿನ ಹಲವು ಪ್ರದೇಶಗಳ ಬೀದಿ ಬದಿಗಳಲ್ಲಿ ಟೆಂಟು ಕಟ್ಟಿಕೊಂಡು ತಾವು ತಯಾರಿಸಿದ ಅಚ್ಚಿನ ಸುಂದರ ಮೂತರ್ಿಗಳನ್ನು, ಕಲಾಕೃತಿಗಳನ್ನು ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿರುವ ಉತ್ತರ ಭಾರತೀಯ ಮೂಲದ ಈ ವ್ಯಕ್ತಿಗಳ ಕೈಯಲ್ಲಿ ಮಣ್ಣುಗಳು ಒಂದು ರೂಪ ತಳೆಯುತ್ತವೆ, ಭಾವವನ್ನು ಹೊರಸೂಸುತ್ತವೆ.  
ಈ ಬೀದಿ ಬದಿಯ ವಿಶಿಷ್ಟ ಕಲಾವಿದರ ಕೈಯಲ್ಲರಳಿದ ಕಲಾಕೃತಿಗಳನ್ನು ಬಳಸಿ ಮನೆಯನ್ನು ಸುಂದರಗೊಳಿಸಿಕೊಂಡಿರುವವರು ಹಲವರು. ಹೊಸ ಮನೆ ಕಟ್ಟಿಸುವವರು, ಮನೆ ಅಲಂಕಾರ ಮಾಡುವವರು, ಮನೆಯೊಳಗಿನ ಶೋಕೇಸ್ನ್ನು ಅಂದಗೊಳಿಸುವವರು, ಗಾರ್ಡನಿಂಗ್ನಲ್ಲಿ ಆಸಕ್ತಿ ಇರೋರು ಹೀಗೆ ಕಲಾರಸಿಕರು ಈ ಬೀದಿ ಬದಿಯ ಕಲಾಕಾರರು ತಯಾರಿಸುವ ಮೂತರ್ಿಗಳನ್ನು ತೆಗೆದುಕೊಂಡು ಹೋಗಿ ಮನೆಯನ್ನು ಅಂದ-ಚಂದಗೊಳಿಸಿಕೊಳ್ಳುತ್ತಾರೆ.
ಬೀದಿ ಬದಿಯಲ್ಲಿ ದೊರೆಯುವ ಮಣ್ಣಿನ ಕಲಾಕೃತಿಗಳು ತುಂಬ ಆಕರ್ಷಕ ಹಾಗೂ ಸುಂದರವಾದವುಗಳು. ನಿಮರ್ಾಣಗೊಳ್ಳುತ್ತಿರುವ ಮನೆಗೆ ದೃಷ್ಟಿ ಬೀಳಬಾರದೆಂದು ಕಟ್ಟುವ ದೃಷ್ಟಿ ಬೊಂಬೆಯಿಂದ ಹಿಡಿದು ವಿವಿಧ ರೀತಿಯ ಮನಸೆಳೆಯುವ ವಸ್ತುಗಳು ಅಂದರೆ ಹೂದಾನಿಗಳು, ಬೊಂಬೆಗಳು, ಸಾಯಿಬಾಬಾ, ರಾಧಾಕೃಷ್ಣ ಮುಂತಾದ ದೇವರ ಮೂತರ್ಿಗಳು, ಮನೆಯ ಸಿಂಗಾರಕ್ಕೆ ಬಳಸುವ ನವಿಲು, ಗಿಳಿ ಇತ್ಯಾದಿ ಪಕ್ಷಿಗಳ ಮಾದರಿಗಳು, ಗೋಡೆಗಳ ಸಿಂಗಾರಕ್ಕೆ ಬಳಸುವಂತವುಗಳು ಹೀಗೆ ವಿವಿಧ ರೀತಿಯ ಮೋಹಕ ವಸ್ತುಗಳು  ಅಲ್ಲಿ ಮೈದಳೆಯುತ್ತವೆ, ಮಾರಾಟವಾಗುತ್ತವೆ.
ಇಲ್ಲಿನ ಕಲಾಕೃತಿಗಳಿಗೆ ಕೊಡಲಾಗುವ ಬಣ್ಣಗಳೂ ತುಂಬ ವಿಶಿಷ್ಟವಾದದ್ದು. ಈ ಬೀದಿ ಬದಿಯ ಕಲಾಕಾರರು ಬಣ್ಣವನ್ನು ಮಿಶ್ರಣ ಮಾಡಿ ಈ ಮಣ್ಣಿನ ಕಲಾಕೃತಿಗಳಿಗೆ ಲೇಪಿಸಿದರೆ ಅವುಗಳನ್ನು ನೋಡಲು ಸುಂದರ ಅನುಭವವಾಗುತ್ತದೆ. ಅವರ ಕೈಚಳಕದಲ್ಲಿ ಆಕೃತಿ ಪಡೆದ ಬಣ್ಣವನ್ನು ಧರಿಸಿ ಹೊರಬರುವ ವಿಶಿಷ್ಟ ಕಲಾಕೃತಿಗಳು ನೋಡುಗರನ್ನು ಥಟ್ಟನೆ ಸೆಳೆಯುತ್ತವೆ.
ತಮ್ಮ ಕಲಾ ಸೊಬಗನ್ನು ಪ್ರದಶರ್ಿಸುವ ಈ ಬೀದಿ ಬದಿಯ ಕಲಾಕಾರರು ಉತ್ತರ ಭಾರತದವರಾದರು ಇವರಲ್ಲಿ ಅನೇಕರು ರಾಜಾಸ್ತಾನಕ್ಕೆ ಸೇರಿದವರು. ಸಾಮಾನ್ಯವಾಗಿ  ಹತ್ತಕ್ಕಿಂತ ಹೆಚ್ಚಿನ ಸಂಖ್ಯೆಯ ಸದಸ್ಯರಿರುವ ಇವರ ಕುಟುಂಬದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ವಿವಿಧ ರೀತಿಯ ಕರುಕುಶಲ ವಸ್ತುಗಳನ್ನು ತಯಾರಿಸುತ್ತಾರೆ. ರಾಜಧಾನಿಯ ಸುಂಕದಕಟ್ಟೆ, ಕೊಟ್ಟಿಗೆಪಾಳ್ಯ, ಕೆ.ಆರ್. ಪುರಂ, ಬಾಣಸವಾಡಿ, ಯಶವಂತಪುರ ಮುಂತಾದ ಕಡೆಗಳಲ್ಲಿ ಬೀದಿ ಬದಿಯಲ್ಲಿ ಟೆಂಟು ಕಟ್ಟಿಕೊಂಡು ತಾವು ತಯಾರಿಸುವ ಮಣ್ಣಿನ ವಿಶಿಷ್ಟ ಕಲಾಕೃತಿಗಳನ್ನು ಮಾರಾಟ ಮಾಡುತ್ತಾರೆ. 50 ರೂ.ಗಳಿಂದ 500 ರೂಪಾಯಿಗಳವರೆಗೆ ಬೆಲೆ ಇದೆ. ಚೆಂದದ ಮೂತರ್ಿಗಳನ್ನು ಕೆಲವರು ಕೊಂಡುಕೊಂಡರೂ ಹಲವರು ಅದನ್ನು ನೋಡಿ ರೇಟು ಕೇಳಿ ಚೌಕಾಸಿ ಮಾಡಿ ಖರೀದಿಸುವವರೂ ಇದ್ದರೆ, ಮತ್ತೆ ಕೆಲವರು ವಸ್ತುಗಳ ವೀಕ್ಷಣೆ ಮಾಡಿ, ಏನೂ ಖರೀದಿಸದೆ ಹೋಗುತ್ತಾರೆ.
ಮಣ್ಣಿನಿಂದ ತಮ್ಮ ಬದುಕನ್ನು ಕಟ್ಟಿಕೊಂಡು ಜೀವನ ನಡೆಸುತ್ತಿರುವ ಈ ಬಡ ಕಲಾಕಾರರು ಎದುರಿಸುವ ಸಮಸ್ಯೆಗಳು ಹಲವಾರು. ಗೊತ್ತಿರುವ ಕಲೆಯೊಂದಿಗೆ ಗೊತ್ತಿರದ ಪ್ರದೇಶಕ್ಕೆ ಧೈರ್ಯಮಾಡಿ ಬಂದಿರುವ ಈ ಮಂದಿಗೆ ಈ ವೃತ್ತಿ ಹೆಚ್ಚಿನ ಲಾಭ ತರದಿದ್ದರೂ ಜೀವನ ನಿರ್ವಹಣೆಯಾದರೆ ಸಾಕು ಎಂಬ ಭಾವನೆಯೂ ಇಟ್ಟುಕೊಂಡೇ ದಿನ ನೂಕುತ್ತಿದ್ದಾರೆ. ತಾವು ತಯಾರಿಸಿದ ವಸ್ತುಗಳು ಮಾರಾಟವಾದರೆ ಆದೀತು, ಇಲ್ಲದಿದ್ದರೆ ಇಲ್ಲ. ಇಂತಹ ಮಣ್ಣಿನ ಮೂತರ್ಿ, ಇತರ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಿ ಬದುಕು ನಿರ್ವಹಣೆ ಮಾಡುತ್ತಿರುವ ರಾಜಸ್ತಾನ ಮೂಲದ ವ್ಯಕ್ತಿ ಸುಂಕದಕಟ್ಟೆಯಲ್ಲಿ ಮಾತಿಗೆ ಸಿಕ್ಕಾಗ ಹೇಳಿದ್ದು: `ದೊಡ್ಡ ದೊಡ್ಡ ಮಾಲ್ಗಳಲ್ಲಿ ಕೇಳಿದ ಬೆಲೆಗೆ ಖರೀದಿಸುವ ಗ್ರಾಹಕರು ನಮ್ಮ ವಸ್ತುಗಳಿಗೆ ಬಹಳ ಚೌಕಾಸಿ ಮಾಡುತ್ತಾರೆ. ಅವರು ಹೇಳುವ ರೇಟು ನಮಗೆ ಹೊಂದುವುದಿಲ್ಲ. ಈ ವೃತ್ತಿ ಲಾಭದಾಯಕ ಅಲ್ಲ. ಈ ಮೂತರ್ಿಗಳ ಮಾರಾಟದಿಂದ ನಮ್ಮ ಜೀವನ ನಡೆಯಬೇಕು. ತಂತ್ರಜ್ಞಾನ ಮುಂದುವರಿದಂತೆ ನಮ್ಮ ಬದುಕು ದುಸ್ತರವಾಗುತ್ತಿದೆಯೇನೋ ಎಂಬ ಶಂಕೆಯೂ ಬರುತ್ತದೆ'.
ಮನೆಯ ಅಂದಕ್ಕೆ ತಮ್ಮದೇ ಆದ ಹೊಳಪು ನೀಡುವ ಈ ಕಲಾಕೃತಿಗಳು ಅದರ ತಯಾರಕರ ಬದುಕನ್ನೂ ಕಟ್ಟಿಕೊಡುವ ಕಾರ್ಯ ಮಾಡುತ್ತವೆ. ಈ ಬೀದಿಬದಿಯ ಕಲಾಕಾರರ ಭಾವನೆಗೆ ಸೂಕ್ತ ಬೆಲೆ ದೊರೆತರೆ ಇವರ ಕಾರ್ಯಕ್ಕೆ ಅದು ಒತ್ತಾಸೆಯಾದಂತೆ.
ವಿನಯ್ ದಂಟಕಲ್

No comments:

Post a Comment