Tuesday, September 22, 2015

ಅಂ-ಕಣ-6

ಸಲಿಗೆ(ಸಲುಗೆ)

ಕೆಲವರನ್ನು 
ಹತ್ತಿರ ಬಿಟ್ಟುಕೊಂಡರೆ 
ತಲೆಯ ಮೇಲೆ 
ಹತ್ತಿ ಕುಳಿತುಕೊಳ್ಳುತ್ತಾರೆ..!!!

ಗೊಂದಲ

ಆಕೆ ತಿರುಗಿ 
ನೋಡುತ್ತಾಳೆ ಎಂದುಕೊಂಡೆ
ಕನ್ನಡಿಯಲ್ಲಿ ಇಣುಕಿದಳು ||

ಆರ್ತನಾದ

ಭಗವಾನರಿಗೆ 
ಪ್ರಶಸ್ತಿ ಕೊಟ್ಟ 
ಸಾಹಿತ್ಯ ಅಕಾಡೆಮಿ 
ಪ್ರತಿಭಟನೆಗೆ ಪ್ರತಿಯಾಗಿ 
ಹೀಗೆ ಹೇಳಬಹುದೇ?
`ಹೇ ಭಗವಾನ್....!!!'

ಬದಲಾವಣೆ

ನನ್ನನ್ನು ಬದಲಿಸಿದಳು
ಅವಳು ಬದಲಾದಳು ||

ಅಯ್ಯೋ ಪಾಪ:

ಹಿಂದೆ  ಭಗವಾನ್ ಅಂತ ಕನ್ನಡ ಸಿನೆಮಾ ಒಂದು ಬಂದಿತ್ತು. ದರ್ಶನ್ ಹಾಗೂ ಸಾಯಿಕುಮಾರ್ ಹೀರೋ ಆಗಿದ್ದರು. ಸಿನೆಮಾದಲ್ಲಿ ಹಲವಾರು ಭರ್ಜರಿ ಡೈಲಾಗುಗಳಿದ್ದವು. ಸಾಯಿಕುಮಾರ್ ಬ್ರಾಂಡಿನ ಹೇಯ್... ನಿನ್ನ..ನ್.. ಅನ್ನುವ ಡೈಲಾಗುಗಳಿಗೂ ಕೊರತೆಯಿರಲಿಲ್ಲ. ಇದೀಗ ಭಗವಾನ್ ಹೇಳಿಕೆಗಳು ಅದೇ ರೀತಿ ಇದೆ. ಒಟ್ನಲ್ಲಿ ಅಯ್ಯೋ ಪಾ...ಪ..

ವೈರುಧ್ಯ :

ಭಗವಂತ ಅಂದರೆ
ಗೌರವ
ಭಗವಾನ್ ಎಂದರೆ
ರೌರವ ||

ಕಾಣೆ

ಆಕೆ
ಕನ್ನಡಿಯಲ್ಲಿ ಕಂಡೂ
ಕಾಣೆಯಾದಳು ||

No comments:

Post a Comment