Wednesday, October 25, 2017

ಪೇಪರ್ ಹಾಕುವ ಹುಡುಗನೂ ಕ್ಯಾಶ್ ಲೆಸ್

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ನಗದು ರಹಿತ ವ್ಯವಹಾರಕ್ಕೆ ನಗರದಲ್ಲಿ ಪೇಪರ್ ಹಾಕುವ ಯುವಕನೊಬ್ಬ ತನ್ನದೆ ಆದ ಕೊಡುಗೆ ನೀಡುತ್ತಿದ್ದು, ಎಲ್ಲರಿಗೂ ಮಾದರಿಯಾಗಿದ್ದಾನೆ.
ಶಿರಸಿಯ ಗಣೇಶ ನಗರದ ಮದನ ಬಿ. ಗೌಡ ಎನ್ನುವ ಯುವಕ ನಗದು ರಹಿತ ವ್ಯವಹಾರವನ್ನು ಪ್ರಾಯೋಗಿಕವಾಗಿ ಅನುಷ್ಠಾನಗೊಳಿಸುತ್ತಿದ್ದಾನೆ.  ಕಳೆದ ಹತ್ತು ವರ್ಷಗಳಿಂದ ಈತ ಪೇಪರ್ ಹಾಕುತ್ತಿದ್ದು, ನಗರದ ಸುಮಾರು 300 ಮನೆಗಳಿಗೆ ಪ್ರತಿನಿತ್ಯ ದಿನಪತ್ರಿಕೆ ಹಂಚುತ್ತಾನೆ. ದುಡಿದು ತಿನ್ನುವ ಈತನಿಗೆ ನಗದು ರಹಿತ ವ್ಯವಹಾರ ಅನಿವಾರ್ಯವಲ್ಲ. ದೇಶ ಬದಲಾಗುವ ಸಂದರ್ಭದಲ್ಲಿ ನಾವೂ ಸಹ ಬದಲಾಗಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಮದನ್ ಈ ಕೆಲಸಕ್ಕೆ ಮುಂದಾಗಿದ್ದಾನೆ.
ಪ್ರತಿ ತಿಂಗಳು ದಿಪತ್ರಿಕೆಯ ಬಿಲ್ ಕಲೆಕ್ಟ ಮಾಡುವಾಗ ತನ್ನ ಅಕೌಂಟ್ ನಂಬರ್ ನೀಡಿ ಹಣವನ್ನು ಹಾಕಲು ಹೇಳುತ್ತಾನೆ. ಅದರ ಜೊತೆಗೆ ಬಿಲ್ ಹಿಂಬದಿಯಲ್ಲಿ ಪೆಟಿಎಮ್ ಹಾಗೂ ಭೀಮ್ ಆಪ್ ಬಳಸಿಯೂ ಸಹ ಹಣ ಸಂದಾಯ ಮಾಡುವ ವ್ಯವಸ್ಥೆಯನ್ನು ಕಲ್ಪಿಸಿದ್ದಾನೆ. ಈಗಾಗಲೇ ಸುಮಾರು 30 ಕ್ಕೂ ಅಧಿಕ ಜನರು ಇತನ ಜತೆ ನಗದು ರಹಿತ ವ್ಯವಹಾರಕ್ಕೆ ಕೈಜೋಡಿಸಿದ್ದಾರೆ.
ದೇಶದಲ್ಲಿ ಬದಲಾಣೆಯ ಹಾದಿಯಲ್ಲಿದೆ. ನಾವು ಸಹ ಬದಲಾಗಬೇಕಿದೆ. ಕಾಲಕ್ಕೆ ತಕ್ಕಂತೆ ನಾವು ಹೊಂದಿಕೊಂಡು ಹೋಗಬೇಕು. ನಾವು ಮೊದಲು ಯೋಜನೆಯನ್ನು ರೂಢಿಸಿಕೊಂಡರೆ ಇನ್ನೊಬ್ಬರಿಗೆ ತಿಳಿ ಹೇಳಲು ಸಾಧ್ಯ. ಆದ್ದರಿಂದ ನೋಟ್ ಬ್ಯಾನ್ ನಂತರದಿಂದ ನಾನು ನಗದು ರಹಿತ ವ್ಯವಹಾರ ಮಾಡುತ್ತಿದ್ದೇನೆ" ಎಂದು ಮದನ ಗೌಡ ಹೇಳುತ್ತಾರೆ.
 ಕೆಲವೊಂದು ಮಂದಿ ಕಡಿಮೆ ಹಣವನ್ನು ನಗದು ರಹಿತವಾಗಿ ನೀಡುವುದಕ್ಕೆ ಇಷ್ಟ ಪಡುವುದಿಲ್ಲ. ಈ ಪ್ರಯತ್ನಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ದೊರಕುತ್ತಿದೆ ಎಂದು ತಿಳಿಸಿದ್ದಾರೆ.


-----------
ಪೇಟ್ರೋಲ್ ಬಂಕ್, ಹೋಟೇಲ್ ಹೀಗೆ ಡೆಬಿಟ್ ಹಾಗೂ ಕ್ರೆಡಿಟ್ ಕಾರ್ಡಗಳು ನಡೆಯುವ ಎಲ್ಲಾ ಕಡೆಯುವಲ್ಲಿಯೂ ನಾನು ನಗದು ರಹಿತವಾಗಿಯೇ ವ್ಯವಹಾರ ನಡೆಸುತ್ತೇನೆ. 
ಮದನ ಗೌಡ, 
ಪೇಪರ್ ಹಾಕುವ ಯುವಕ 

No comments:

Post a Comment