Thursday, August 19, 2010

ಇವರಿಗೆ ವಯಸ್ಸೇ ಆಗೋಲ್ವಾ?



ಭಾರತದ ವಿವಿಎಸ್ ಲಕ್ಷ್ಮಣ್, ಸಚಿನ್ ತೆಂಡೂಲ್ಕರ್, ಶ್ರೀಲಂಕಾದ ಸನತ್ ಜಯಸೂರ್ಯ, ವೆಸ್ಟ್ ಇಂದಿಸ ನ ಶಿವನಾರಾಯಣ್ ಚಂದ್ರಪಾಲ್, ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಈ ಮುಂತಾದ ಕ್ರಿಕೆಟ್ ಆಟಗಾರರ ಉತ್ಸಾಹವನ್ನು, ಆಟದ ವೈಖರಿಯನ್ನು ಗಮನಿಸಿದರೆ ಇವರಿಗೆ ವಯಸ್ಸೇ ಆಗುವುದಿಲ್ಲವೇ ಎಂಬ ಪ್ರಶ್ನೆ ಹಲವರ ಮನಸ್ಸಿನಲ್ಲಿ ಮೂಡುತ್ತದೆ.
ಈ ಎಲ್ಲ ಆಟಗಾರರಿಗೆ 35ರ ಆಜುಬಾಜು ವಯಸ್ಸು. ಆದರೆ ಇವರ ಕಲಾತ್ಮಕ ಆಟಗಳು ಮಾತ್ರ ಯುವ ಹೊಡೆಬಡಿ ಆಟಗಾರರನ್ನು ಮೀರಿಸುವಂತಿದೆ. ಯುವ ಆಟಗಾರರು ಕ್ರೀಸಿನಲ್ಲಿ ನೆಲೆನಿಂತು ಬಾಲನ್ನು ಎದುರಿಸಲು ಪರದಾಡುವ ಸಮಯದಲ್ಲಿಯೇ ಇವರು ಆಟದ ಮರ್ಮ ಅರಿತು ಸಮಯಕ್ಕೆ ತಕ್ಕಂತೆ ಆಟವಾಡುತ್ತಾರೆ.
ಈ ಆಟಗಾರರದ್ದು ಎಲ್ಲ ರೀತಿಯ ಕ್ರೀಡೆಗೆ ಹೇಳಿಮಾಡಿಸಿದಂತಹ ಆಟ. ಅದು ಟೆಸ್ಟ್ ಇರಲಿ. ಒಂದು ದಿನದ ಪಂದ್ಯಗಳೇ ಇರಲಿ ಅಥವಾ ಇಂದಿನ ಜಮಾನಾದ ಟಿ20 ಪಂದ್ಯಗಳೇ ಇರಲಿ ಅಗತ್ಯಕ್ಕೆ ತಕ್ಕ ಆಟ ಇವರಿಂದ ಸಾಧ್ಯ. ಯುವ ಆಟಗಾರರು ಪ್ರತಿ ಪಂದ್ಯಗಳಲ್ಲಿ ಒಂದೇ ರೀತಿಯ ಆಟವನ್ನು ಪ್ರದರ್ಶಿಸಲು ವಿಫಲರಾಗುತ್ತಾರೆ. ಆದರೆ ಇವರು ಹಾಗಲ್ಲ. ಯಾವಾಗಲೂ ಉತ್ತಮ ಕ್ರಿಕೆಟ್ ಇವರಿಂದ ಸಾಧ್ಯ. ಈ ಆಟಗಾರರು ಆಡುವ ಕ್ರಿಕೆಟ್ ಸಹ ಅಷ್ಟೇ ಕಾವ್ಯಾತ್ಮಕ. ಪುಟ್ ವರ್ಕ್ ಗಳು, ಕವರ್ ಡ್ರೈವಳು, ಬ್ಯಾಕಪುಟ್ ಆಟಗಳು, ಹುಕ್ ಶಾಟ್ಗಳು  ಪ್ರತಿಯೊಂದೂ ಬಹಳ ಸುಂದರ.
ಈ ಆಟಗಾರರ ಆಟದ ವೈಖರಿಯೆ ಬದಲಾದುದು. ಇವರು ಮೇಲ್ನೋಟಕ್ಕೆ ನಿಧಾನವಾದ ಆಟವನ್ನು ಆಡಿದರೂ ಉತ್ತಮ ಸರಾಸರಿಯನ್ನೇ ಹೊಂಡಿರುತ್ತಾರೆ. ಇವರ ಇನ್ನೊಂದು ಮುಖ್ಯ ಲಕ್ಷಣಗಳೆಂದರೆ ಇವರು ಸಿಕ್ಸರ್ ಬಾರಿಸಲು ಹೆಚ್ಚು ಮುಂದಾಗುವುದಿಲ್ಲ. ಆದರೆ ಬೌಂಡರಿಗಳನ್ನು ಒಂದರ ಹಿಂದೆ ಒಂದರಂತೆ ಬಾರಿಸುತ್ತಾರೆ. ಬೌಲರ್ಗಳ ಸಹನೆಯನ್ನು ಪರೀಕ್ಷಿಸಿ ಬೆವರಿಳಿಸುತ್ತಾರೆ.
ಇವರು ಪಂದ್ಯಗಳಲ್ಲಿ ಪಕ್ಕಾ ಆಪತ್ಭಾಂದವರು. ಸೋಲಿನ ಸುಳಿಯಲ್ಲಿ ತಂಡವಿದ್ದರೆ ಅದನ್ನು ಬದಲಾಯಿಸುವ ಛಾತಿಯನ್ನು ಹೊಂದಿರುವವರು. ಇವರ ಕಲಾತ್ಮಕ ಆಟಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಗಾಯಗಳಾದರೂ ಇವರು ಅದಕ್ಕೆ ಜಗ್ಗವುದಿಲ್ಲ. ಗಾಯಕ್ಕಿಂತ ತಂಡ, ದೇಶ, ಗೆಲುವು ಮುಖ್ಯ ಎಂಬುದು ಇವರ ಗುಣ.
ಹಿರಿಯರ ಆಟಕ್ಕೆ ಅವರೆ ಸಾಕ್ಷಿ. ಯುವಕರ ಪಡೆ ಸಾಲು ಸಾಲು ಸೋಲನ್ನು ಅನುಭವಿಸುತ್ತಿರುವುದರಿಂದಲೆ ಪಾಕ್ ತಂಡ ನಿವೃತ್ತಿ ಹೊಂದಿದ್ದ ಮೊಹಮ್ಮದ್ ಯುಸುಫ್ರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಿದ್ದು. ಅನುಭವ, ಉತ್ತಮ ಆಟವೇ ಇವರ ಆಸ್ತಿ. ಯುವ ಆಟಗಾರರು ನೂರು ರನ್ನುಗಳನ್ನು ಹೊಡೆಯಲು ಇವರು ಕಷ್ಟಪಟ್ಟರೆ, ಹಿರಿಯ ಆಟಗಾರರಿಗೆ ಅದು ಸಲೀಸು. ಶತಕ, ದ್ವಿಶತಕ ಇವರಿಗೆ ಸುಲಭ. ಯುವಕರು ಫಿಟ್ನೆಸ್ ಇಲ್ಲದೆ ಬಳಲಿ, ಸೋತು, ರನ್ನರ್ ಸಹಾಯದಿಂದ ಹಾಗೂ ಹೀಗೂ ರನ್ ಹೊಡೆದರೆ, ಇವರು ಯುವಕರನ್ನೇ ನಾಚಿಸುವಂತೆ ಆಡುತ್ತಾರೆ. ಎರಡು ಮೂರು ರನ್ನುಗಳನ್ನು ಸುಲಭವಾಗಿ ತೆಗೆಯುತ್ತಾರೆ.
ವೆಸ್ಟ್ ಇಂಡೀಸ್ನ ತಂಡವನ್ನೇ ತೆಗೆದುಕೊಳ್ಳಿ, ಆ ತಂಡದಲ್ಲಿ ಎಷ್ಟೇ ಹೊಸ, ಹೊಡೆ ಬಡಿ ಆಟಗಾರರು ಬಂದರೂ ತಂಡದ ಪಾಲಿಗೆ ಆಪದ್ಭಾಂದವನಂತೆ ಇರುವುದು ಚಂದ್ರಪಾಲ್ ಮಾತ್ರ. ಅದೇ ರೀತಿ ದಕ್ಷಿಣ ಆಫ್ರಿಕಾ ತಂಡದ ಜೀವಾಳ ಜಾಕ್ ಕಾಲಿಸ್ ಎಂದರೂ ತಪ್ಪಿಲ್ಲ. ಅದೆ ಆಸ್ಟ್ರೇಲಿಯಾ ತಂಡವನ್ನು ಗಮನಿಸಿ ಅಲ್ಲಿ ಸ್ಟೀವ್ ವಾ, ಹೇಡನ್ ಅಂತಹ ಆಟಗಾರರು ಇದ್ದಾಗ ಸಾಲು ಸಾಲು ಗೆಲುವನ್ನು ಅದು ಕಂಡಿದ್ದು ಇತಿಹಾಸ. ಆದರೆ ಅಂತಹ ಆಟಗಾರರು ಇಗ ಇಲ್ಲವೇ ಇಲ್ಲ. ಪರಿಣಾಮ ಅದಕ್ಕೆ ಸೋಲಿನ ರುಚಿ ಗೊತ್ತಾಗತೊಡಗಿದೆ.
ಶ್ರೀಲಂಕಾದ ಅರವಿಂದ್ ಡಿಸಿಲ್ವಾ ಅಂತೂ ತನ್ನ 40ನೇ ವರ್ಷದ ವರೆಗೆ ಕ್ರಿಕೆಟ್ ಆಡಿದ್ದ. ಈಗ ಸನತ್ ಜಯಸೂರ್ಯ ಸಹ ಹಾಗೆಯೇ ಆಡುತ್ತಿದ್ದಾನೆ. ಅಷ್ಟು ವಯಸ್ಸಾಗಿದ್ದರೂ ಅವರ ಆಟಕ್ಕೆ ಯಾವುದೆ ಕುಂದು ಉಂಟಾಗಿಲ್ಲ. ಮೊದಲಿಗಿಂತ ಉತ್ತಮವಾಗಿಯೆ ಆಡುತ್ತಿದ್ದಾರೆ. ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ ಎನ್ನುವುದು ಇದಕ್ಕೇ ಇರಬೇಕು.
ತಂಡದ ಪಾಲಿನ ಆಪದ್ಭಾಂಧವ ಆಟಗಾರರಾದ ಇವರಿಗೆ ಹ್ಯಾಟ್ಸಾಪ್...

Friday, August 13, 2010

ರಂಗಾನುಭವ ~`ಅಣೇಕಟ್ಟು' ~

ಕಾಲೇಜು ದಿನಮಾನದಲ್ಲಿ ಯುವಜನ ಮೇಳಕ್ಕಾಗಿ ನಾವು ಬರೆದು, ನಟಿಸಿ, ಪ್ರಶಸ್ತಿಗಳಿಸಿದ `ಅಣೆಕಟ್ಟು' ಎಂಬ ನಾಟಕದ ಕುರಿತು ನಮ್ಮ ಅನುಭವಗಳನ್ನು ಈ ಲೇಖನದ ಮೂಲಕ ಹಂಚಿಕೊಳ್ಳುತ್ತಿದ್ದೇನೆ. ಸೀಮಿತ ಸಮಯದಲ್ಲಿ ಪ್ರಸ್ತುತ ಜಗತ್ತಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಥಾ ವಸ್ತುವನ್ನು ಒಳಗೊಂಡಿದ್ದ ನಮ್ಮ ನಾಟಕ ಬಹಳ ಪ್ರಸಿದ್ಧಿ ಪಡೆಯಿತು. `ಅಣೆಕಟ್ಟು' ನಾಟಕದ ಹಿಂದಿನ ನಮ್ಮ ಕಾರ್ಯ, ಕೆಲಸ, ಅನುಭವ ಇಂತಿದೆ.
---------------------------------------
ಕೇವಲ ಅರ್ಧಗಂಟೆಯ ಅವಧಿಯಲ್ಲಿ ಪ್ರಸ್ತುತ ದಿನಮಾನದ ಸಮಸ್ಯೆಯನ್ನು ನಾಟಕದ ವಿಷಯವನ್ನಾಗಿಸಿಕೊಂಡು ನಾಟಕ ಮಾಡಬೇಕು ಎಂಬ ನಿಯಮದ ಹಿನ್ನೆಲೆಯಲ್ಲಿ ನಾವು `ಅಣೆಕಟ್ಟು' ನಾಟಕ ನಡೆಸಲು ಮುಂದಾದೆವು. ಕರ್ನಾಟಕ ವಿಶ್ವವಿದ್ಯಾಲಯದ ಯುವಜನ ಮೇಳದಲ್ಲಿ ಅಂತರಕಾಲೇಜು ಮಟ್ಟದಲ್ಲಿ ನಾಟಕ ಸ್ಪರ್ಧೆಯಲ್ಲಿ ನಮ್ಮ ಈ ನಾಟಕವನ್ನು ಅಭಿನಯಿಸಿ ತೋರಿಸಬೇಕಿತ್ತು. ಶಿರಸಿ ಕಾಲೇಜಿನ ಸಹಯೋಗದೊಂದಿಗೆ ನಮ್ಮ ಗೆಳೆಯರು ನಾಟಕವನ್ನು ನಡೆಸಲು ಬಲು ಉತ್ಸಾಹದಿಂದಲೇ ಮುಂದಾದರು.
ನಾನು ಬರೆದಿದ್ದ `ಅಣೆಕಟ್ಟು' ಎಂಬ ಸಣ್ಣ ಕಥೆಯನ್ನು ನಾಟಕದ ಕಥಾವಸ್ತುವನ್ನಾಗಿ ನಾವು ಆಯ್ಕೆ ಮಾಡಿಕೊಂಡಿದ್ದೆವು. ಅಣೆಕಟ್ಟು ಕಥೆಯನ್ನೇ ಕೊಂಚ ಬದಲಾಯಿಸಿ ನಾಟಕರೂಪಕ್ಕೆ ಇಳಿಸಿದ್ದೆವು. ಗೆಳೆಯ ರಾಘವ ಹೆಗಡೆ ನಾಟಕದ ನಿದರ್ೇಶನದ ಜವಾಬ್ದಾರಿಯನ್ನು ಹೊತ್ತಿದ್ದ. ಗಣೇಶ್ ಹೆಗಡೆ ಪಾಲಿಕೆ ಕಥಾನಾಯಕ ಬಸವರಾಜುವಿನ ಪಾತ್ರ ಸಿಕ್ಕಿತ್ತು.
ಜೊತೆಗೆ ನಾನು ಗೂಂಡಾ ರಾಜಕಾರಣಿ ರಾಮಪ್ಪನ ಪಾತ್ರ ಮಾಡಿದ್ದೆ. ರಾಘವ ಹೆಗಡೆ ರಾಜಕಾರಣಿಯಾಗಿ ನಟಿಸಿದ್ದರೆ, ವಿನಾಯಕ ಹಾಗೂ ಗಣೇಶ್ ವಾನಳ್ಳಿ ಊರಿನ ಗ್ರಾಮಸ್ಥರ ಪಾತ್ರ ಮಾಡಿದ್ದರು. ನಾಗರಾಜ್ ಹೆಗಡೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದ. ಮೃತ್ಯುಂಜಯ ಕೆ. ಎಂ. ಪೊಲೀಸ್ ಪೇದೆಯಾಗಿ ಜೊತೆಗೆ ಸೌಮ್ಯಾ, ವಂದನಾ ಜೋಶಿ ಊರಿನ ಮಹಿಳೆಯರ ಪಾತ್ರದಲ್ಲಿ ಅಭಿನಯಿಸಿದ್ದರು.

ಕಥಾವಸ್ತು
ನಿಸರ್ಗದ ನಡುವಿನ, ನದಿ ದಡದ ಊರಿನಲ್ಲಿ ಅಣೆಕಟ್ಟು ನಿಮರ್ಾಣವಾಗುವ ಸುದ್ದಿ ಊರಿನ ಅನಕ್ಷರಸ್ಥ ಜನರಲ್ಲಿ ವಿವಿಧ ಅಭಿಪ್ರಾಯ ಬದಲಾವಣೆಗೆ ಕಾರಣವಾಗುತ್ತದೆ. ಕೆಲವರು ಅಣೆಕಟ್ಟೆಯ ಪರ ಮಾತನಾಡಿದರೆ ಮತ್ತೆ ಕೆಲವರು ಅಣೆಕಟ್ಟೆಯ ವಿರುದ್ಧ ದನಿ ಎತ್ತುತ್ತಾರೆ. ಈ ಊರಿನ ಅಕ್ಷರಸ್ಥ ಯುವಕ ಬಸವರಾಜು ಅಣೆಕಟ್ಟೆ ನಿಮರ್ಾಣವನ್ನು ವಿರೋಧಿಸುತ್ತಾನೆ. ಅಣೆಕಟ್ಟೆ ನಿರಮಾಣದಿಂದ ಉಂಟಾಗುವ ತೊಂದರೆಗಳನ್ನು ಊರಿನ ಜನರಿಗೆ ವಿವರಿಸಿ ಹೇಳಿ ಅಣೆಕಟ್ಟೆಯ ವಿರುದ್ಧ ಹೋರಾಟಕ್ಕೆ ಮುಂದಾಗುತ್ತಾನೆ.
ಅಣೆಕಟ್ಟೆಯ ವಿರುದ್ಧ ಬಸವರಾಜು ಮುಂದಾಳತ್ವದಲ್ಲಿ ಹೋರಾಟ ಜೋರಾದಾಗ ಆ ಕ್ಷೇತ್ರದ ಶಾಸಕನ ರಂಗಪ್ರವೇಶವಾಗುತ್ತದೆ. ಹೋರಾಟಕ್ಕೆ ಕಾರಣಗಳನ್ನು ತಿಳಿದ ರಾಜಕಾರಣಿ ಹೋರಾಟಗಾರರ ಪರವಾಗಿ ನಿಲ್ಲುತ್ತಾನೆ. ವಿದ್ಯಾವಂತ ಅನಾಥ ಯುವಕ ಬಸವರಾಜು ರಾಜಕಾರಣಿಯ ಮನಗೆಲ್ಲುತ್ತಾನೆ. ಬಸವರಾಜುವಿನ ಹೋರಾಟಕ್ಕೆ, ಜನಪರ ನಿಲುವಿಗೆ ಮನಸೋತ ರಾಜಕಾರಣಿ ಬಸವರಾಜುನನ್ನು ತನ್ನ ಮಗನನ್ನಾಗಿ ದತ್ತು ತೆಗೆದುಕೊಳ್ಳುತ್ತಾನೆ.
ಕೆಲ ಕಾಲದ ನಂತರ ರಾಜಕಾರಣಿ ಬಸವರಾಜುನ ಮದುವೆಗೆ ಮುಂದಾಗುತ್ತಾನೆ. ಪರಿಚಿತ ರಾಜಕಾರಣಿಯ ಮಗಳನ್ನು ಆತನಿಗೆ ಮದುವೆ ಮಾಡಿಸಲು ಪ್ರಯತ್ನಿಸುತ್ತಾನೆ. ಮದುವೆಗೆ ಒಪ್ಪದ ಬಸವರಾಜುನನ್ನು ಮದುವೆಗೆ ಒಪ್ಪಿಸುತ್ತಾನೆ.
ಅದೇ ಪ್ರದೇಶದ ಮತ್ತೊಬ್ಬ ರಾಜಕಾರಣಿ ರಾಮಪ್ಪ ಬಸವರಾಜುಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ಒಪ್ಪುತ್ತಾನೆ. ಮದುವೆಯ ಬಗ್ಗೆ ಮಾತುಕತೆಯೂ ನಡೆಯುತ್ತದೆ. ರಾಮಪ್ಪ ಬಸವರಾಜುವಿಗೆ ವರದಕ್ಷಿಣೆ ರೂಪದಲ್ಲಿ ಎರಡು ಲಕ್ಷ ರೂಪಾಯಿಗಳನ್ನು ನೀಡಲು ಮುಂದಾಗುತ್ತಾನೆ. ಆದರೆ ಬಸವರಾಜು ಇದಕ್ಕೊಪ್ಪುವುದಿಲ್ಲ. ಕೊನೆಗೆ ಅನಾಥ ಬಸವರಾಜು ಮದುವೆ  ಸಮಾರಂಭದ ಅಗತ್ಯ ಪೂರೈಸುವ ಸಲುವಾಗಿ ಆ ಹಣವನ್ನು ಸ್ವೀಕರಿಸಬೇಕು ಎಂದು ರಾಮಪ್ಪ ಒತ್ತಾಯಿಸುತ್ತಾನೆ. ಬಸವರಾಜು ಇದಕ್ಕೆ ಅನಿವಾರ್ಯವಾಗಿ ಒಪ್ಪಿ ಹಣ ಸ್ವೀಕರಿಸುತ್ತಾನೆ.
ಆದರೆ ಮರುದಿನ ರಾಮಪ್ಪ ತನ್ನ ಎರಡು ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಾನೆ. ಪೊಲೀಸರು ಹುಡುಕಿದಾಗ ಬಸವರಾಜುನ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಸಿಗುತ್ತದೆ. ಬಸವರಾಜು ಮೇಲೆ ಕಳ್ಳತನದ ಆರೋಪ ಬರುತ್ತದೆ. ಪೊಲೀಸರು ಬಸವರಾಜುನನ್ನು ಬಂಧಿಸಲು ಮುಂದಾಗುತ್ತಾರೆ. ಬಸವರಾಜು ಎಷ್ಟು ಸಮಜಾಯಿಶಿ ನೀಡಿದರೂ ಪೊಲೀಸರು ಹಾಗೂ ಜನರು ಅದನ್ನು ನಂಬುವುದಿಲ್ಲ. ಶಾಸಕನಿಗೆ ಸುದ್ದಿ ತಿಳಿದು ಬಸವರಾಜುನನ್ನು ವಿಚಾರಿಸುತ್ತಾನೆ. ಆದರೆ ಕೊನೆಗೆ ಶಾಸಕನೂ ಬಸವರಾಜುವಿನ ಮಾತನ್ನು ನಂಬದಾದಾಗ ಊರಿನ ಗ್ರಾಮಸ್ಥರು ಬಸವರಾಜುವಿನ ವಿರುದ್ಧ ತಿರುಗಿ ಬೀಳುತ್ತಾರೆ. ಆತನ ಮೇಲೆ ಹಲ್ಲೆಗೂ ಮುಂದಾಗುತ್ತಾರೆ. ಆಗ ನಡೆಯುವ ಗಲಾಟೆಯಲ್ಲಿ ರೌಡಿಗಳು ಬಸವರಾಜುನ ಹತ್ಯೆ ಮಾಡುತ್ತಾರೆ.
ಹತ್ಯೆಯ ಆರೋಪ ಊರಿನ ನಾಗರಿಕರ ಮೇಲೆ ಬರುತ್ತದೆ. ರಾಜಕಾರಣಿ ಊರಿನ ನಾಗರಿಕರ ಪರವಾಗಿ ನಿಂತು ಪೊಲೀಸರನ್ನು ವಿರೋಧಿಸುತ್ತಾನೆ. ಗ್ರಾಮಸ್ಥರ ಪರವಾಗಿ ವಾದಿಸಿ ಅವರನ್ನು ಪೊಲೀಸರು ಬಿಟ್ಟುಬಿಡುವಂತೆ ಮಾಡುತ್ತಾನೆ. ಈ ಮೂಲಕ ಜನಬೆಂಬಲ ಗಳಿಸುತ್ತಾನೆ. ಅಣೆಕಟ್ಟೆಯ ಹೋರಾಟ ನಿಧಾನವಾಗಿ ತಣ್ಣಗಾಗುತ್ತದೆ.
ಕೊನೆಯಲ್ಲಿ ತಿಳಿದುಬರುವ ಅಂಶವೆಂದರೆ ಶಾಸಕನ ಕುತಂತ್ರದಿಂದ ನಾಯಕ ಬಸವರಾಜು ಮೇಲೆ ಕಳ್ಳತನದ ಆರೋಪ ಬರುತ್ತದೆ. ಅಷ್ಟೆ ಅಲ್ಲದೆ ಜನರು ಗಲಾಟೆ ಪ್ರಾರಂಭಿಸಿದಾಗ ಶಾಸಕನ ಕಡೆಯ ಜನರೇ ಬಸವರಾಜುನ ಹತ್ಯೆಯನ್ನೂ ಮಾಡುತ್ತಾರೆ. ಆದರೆ ಮಂತ್ರಿಯ ದೆಸೆಯಿಂದ ಇದು ತಿಳಿಯುವುದೇ ಇಲ್ಲ. ಇದು ನಾಟಕದ ಕಥಾವಸ್ತು.

ಗಿಮಿಕ್...
ನಾಟಕ ಯಶಸ್ವಿಯಾಗಬೇಕೆಂದರೆ ಗಿಮಿಕ್ಗಳು ಇರಬೇಕು. ಇದು ಆಧುನಿಕ ನಾಟಕರಂಗದಲ್ಲಿ ಅತ್ಯಂತ ಅವಶ್ಯಕ. ನಾವೂ ಇದಕ್ಕೆ ತಕ್ಕಂತೆ ನಾಟಕದಲ್ಲಿ ಹಲವು ಗಿಮಿಕ್ಗಳನ್ನು ಅಳವಡಿಸಿದ್ದೆವು.
ಅಣೆಕಟ್ಟು ನಾಟಕ ಪ್ರಾರಂಭವಾಗುವುದೇ ವ್ಯಕ್ತಿಯೋಬ್ಬನ ಶವದ ಮೆರವಣಿಗೆಯಿಂದ. ಜನರಲ್ಲಿ ಕುತೂಹಲ ಹುಟ್ಟಿಸಲಿ ಎಂಬ ಉದ್ದೇಶದಿಂದ ಇದನ್ನು ನಾವು ಅಳವಡಿಸಿದ್ದೆವು. ಇದು ಬಹಳ ಯಶಸ್ವಿಯೂ ಆಯಿತು.
ಇಂದಿನ ಜಮಾನಾದಲ್ಲಿ ಹಲವು ಸಿನಿಮಾಗಳಲ್ಲಿ ನಿರೂಪಕನ ಪಾತ್ರ ಬರುತ್ತದೆ. ಯಾರೋ ಒಬ್ಬಾತ ಕಥೆಯನ್ನು ಕೇಳುತ್ತಾ ಹೋಗುತ್ತಾನೆ. ನಾವೂ ಈ ನಿರೂಪಣೆಯ ತಂತ್ರವನ್ನು ಬಳಸಿದ್ದೆವು. ಆದರೆ ನಮ್ಮ ನಾಟಕದಲ್ಲಿ ನಿರೂಪಕ ತೆರೆಯ ಮೇಲೆ ಬರದೆ ತೆರೆಯ ಹಿಂದಿನಿಂದಲೇ ಕಥೆಯನ್ನು ಹೇಳುವಂತೆ ಮಾಡಿದ್ದೆವು. ಈ ಕಥೆಯನ್ನು ಹಾಡಿನ ಮೂಲಕ ಹೇಳಿದೆವು. ಈ ತಂತ್ರವೂ ಸಾಕಷ್ಟು ಯಶಸ್ವಿಯಾಯಿತು.
ನಾಟಕದ ಕೊನೆಯ ಭಾಗದಲ್ಲಿ ಇನ್ನೊಂದು ತಂತ್ರವನ್ನು ಬಳಸಿದೆವು. ಹಾಡೊಂದನ್ನು ಬಳಕೆ ಮಾಡಿಕೊಂಡು ಆ ಹಾಡಿನಲ್ಲಿ ಪ್ರಸ್ತುತ ರಾಜಕಾರಣಿಗಳ, ಖಾಕಿಯ ಇತರ ಸಮಾಜದ ವಿವಿಧ ವ್ಯಕ್ತಿಗಳು ಜನಸಾಮಾನ್ಯರನ್ನು ಶೋಷಿಸುವ ರೀತಿಯನ್ನು ಅಭಿನಯಿಸಿದೆವು. ಸಮಾಜದಲ್ಲಿ ದುಡ್ಡು ಯಾವ ರೀತಿ ಜನರನ್ನು ಬದಲಾಯಿಸುತ್ತದೆ ಎಂಬುದನ್ನು ಅಭಿನಯಿಸಿದೆವು. ಈ ತಂತ್ರವೂ ಯಶಸ್ವಿಯಾಯಿತು.
ಈ ನಾಟಕದಲ್ಲಿ ನಾಯಕ ಸಾಯುತ್ತಾನೆ. ಖಳನಾಯಕ ವಿಜ್ರಂಭಿಸುತ್ತಾನೆ. ಪ್ರಸ್ತುತ ಜಗತ್ತಿನ ಕುತಂತ್ರಿ ರಾಜಕಾರಣಿಗಳನ್ನು ನಾಟಕ ತೋರಿಸುತ್ತದೆ. ಈ ರಾಜಕಾರಣಿಗಳು ಜನರ ನಡುವೆಯೆ ಇದ್ದು, ಪರಿಸ್ಥಿತಿಯನ್ನು ಹೇಗೆ ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ ಎಂಬುದನ್ನು ಈ ನಾಟಕ ವಿವರಿಸಿದ್ದರಿಂದ ಬಹಳ ಪ್ರಸಿದ್ಧಿಯನ್ನು ಪಡೆಯಿತು.
ಈ ಗಿಮಿಕ್ಗೆ ಅಗತ್ಯವಿದ್ದ ಅಮೋಘ ಅಭಿನಯವನ್ನು ರಾಘವ್, ಗಣೇಶ್, ನಾಗರಾಜ್ ಹಾಗೂ ಇತರರು ನೀಡಿದ್ದರಿಂದ ನಾಟಕ ಸುಂದರವಾಗಿ ಮೂಡಿ ಬಂದಿತು.
`ಅಣೆಕಟ್ಟು' ಇದೊಂದು ಏಕಾಂಕ ನಾಟಕ. ಈ ನಾಟಕಕ್ಕೆ ನಾಗರಾಜ್ ವಿಶೇಷವಾದ ಬಿದಿರಿನ ಮನೆಯೊಂದನ್ನು ತಯಾರಿಸಿದ್ದ. ಸುಪ್ರಿತಾ ಶಿರೂರ್ ಅವರ ಕೈಚಳಕದಲ್ಲಿ ರಂಗದ ಮೇಲಿನ ವಸ್ತುಗಳಿಗೆ ಜೀವಕಳೆ ಬಂದಿತ್ತು. ಅವರ ಕೈಚಳಕದಲ್ಲಿ ತಯಾರಾಗಿದ್ದ ಮರದ ಕಲಾಕೃತಿಗಳು ಪ್ರೇಕ್ಷಕರನ್ನು ವಿಶೇಷವಾಗಿ ಸೆಳೆದವು.

ಹಾಡು-ಸಂಗೀತ
ನಾಟಕಕ್ಕೆ ನಾಗರಾಜ್ ಜೋಗಿ ಸುಂದರ ಸಂಗೀತವನ್ನು ನೀಡಿದ್ದರು. ನಾಟಕದಲ್ಲಿ ಮೂರು ಹಾಡುಗಳನ್ನು ಬಳಸಲಾಗಿತ್ತು. ಹಸಿರು ಗ್ರಾಮವೊಂದರ ಎಲ್ಲ ಗುಣಗಳನ್ನು ಸಾರುವ ನಾಲ್ಕು ಸಾಲಿನ ಚಿಕ್ಕ ಪದ್ಯ, ಅಣೆಕಟ್ಟಿನ ಬಗ್ಗೆ ಜನರು ತಮ್ಮ ತಮ್ಮಲ್ಲಿಯೇ ಹಾಡಿಕೊಳ್ಳುವ ಚಿಕ್ಕ ಹಾಡನ್ನು ಮೊದಲು ಬಳಸಿದ್ದೆವು. ನಾಟಕದ ಕೊನೆಯಲ್ಲಿ ಸಮಾಜದ ವಿವಿಧ ಕ್ರೂರತೆಯನ್ನು ಸಾರುವ ರೂಪಕ ಅಂಶಗಳನ್ನು ಹೊಂದಿರುವ `ಸಾವು...' ಎಂಬ ಹಾಡನ್ನೂ ಬಳಸಿಕೊಂಡಿದ್ದೆವು.
ಸಾವು, ಸಾವು.. ಭೃಷ್ಟಾಚಾರಕ್ಕೆ ಬಂದಂತ ಗೆಲುವು
ಆಸೆಯ ಕನಸಿನ ಸಾವು...
ಎಂಬ ಸಾಲನ್ನು ಹೊಂದಿದ್ದ ಈ ಹಾಡು ಅತ್ಯಂತ ಪರಿಣಾಮಕಾರಿಯಾಯಿತು ಅಲ್ಲದೆ ಜನಮನ ಸೂರೆಗೊಂಡಿತು.

ಪ್ರಶಸ್ತಿ
ಈ ನಾಟಕಕ್ಕೆ ಜಿಲ್ಲಾಮಟ್ಟದಲ್ಲಿ ಮೊದಲ ಪ್ರಶಸ್ತಿ ದೊರಕಿತು. ಅಲ್ಲದೆ ಕನರ್ಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಯುವಜನ ಮೇಳದಲ್ಲಿ ಮೂರನೆ ಸ್ಥಾನ ಗಳಿಸಿತು. ನಾಯಕನ ಸಾವು, ಖಳನಾಯಕನ ಜಯವನ್ನು ಬಿಂಬಿಸಿದ ಅಣೆಕಟ್ಟು ನಾಟಕ ಜನಮನ ಸೂರೆಗೊಂಡಿತು.

ವಿನಯ್ ದಂಟಕಲ್

Tuesday, August 3, 2010

ಬೀದಿ ಬದಿ ಸೃಷ್ಟಿಯಾಗುವ ಕಲಾಕೃತಿಗಳು


ಅವರು ರಸ್ತೆ ಬದಿಯ ಕಲಾಕಾರರು. ಬೆಂಗಳೂರಿನ ಹಲವು ಪ್ರದೇಶಗಳ ಬೀದಿ ಬದಿಗಳಲ್ಲಿ ಟೆಂಟು ಕಟ್ಟಿಕೊಂಡು ತಾವು ತಯಾರಿಸಿದ ಅಚ್ಚಿನ ಸುಂದರ ಮೂತರ್ಿಗಳನ್ನು, ಕಲಾಕೃತಿಗಳನ್ನು ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿರುವ ಉತ್ತರ ಭಾರತೀಯ ಮೂಲದ ಈ ವ್ಯಕ್ತಿಗಳ ಕೈಯಲ್ಲಿ ಮಣ್ಣುಗಳು ಒಂದು ರೂಪ ತಳೆಯುತ್ತವೆ, ಭಾವವನ್ನು ಹೊರಸೂಸುತ್ತವೆ.  
ಈ ಬೀದಿ ಬದಿಯ ವಿಶಿಷ್ಟ ಕಲಾವಿದರ ಕೈಯಲ್ಲರಳಿದ ಕಲಾಕೃತಿಗಳನ್ನು ಬಳಸಿ ಮನೆಯನ್ನು ಸುಂದರಗೊಳಿಸಿಕೊಂಡಿರುವವರು ಹಲವರು. ಹೊಸ ಮನೆ ಕಟ್ಟಿಸುವವರು, ಮನೆ ಅಲಂಕಾರ ಮಾಡುವವರು, ಮನೆಯೊಳಗಿನ ಶೋಕೇಸ್ನ್ನು ಅಂದಗೊಳಿಸುವವರು, ಗಾರ್ಡನಿಂಗ್ನಲ್ಲಿ ಆಸಕ್ತಿ ಇರೋರು ಹೀಗೆ ಕಲಾರಸಿಕರು ಈ ಬೀದಿ ಬದಿಯ ಕಲಾಕಾರರು ತಯಾರಿಸುವ ಮೂತರ್ಿಗಳನ್ನು ತೆಗೆದುಕೊಂಡು ಹೋಗಿ ಮನೆಯನ್ನು ಅಂದ-ಚಂದಗೊಳಿಸಿಕೊಳ್ಳುತ್ತಾರೆ.
ಬೀದಿ ಬದಿಯಲ್ಲಿ ದೊರೆಯುವ ಮಣ್ಣಿನ ಕಲಾಕೃತಿಗಳು ತುಂಬ ಆಕರ್ಷಕ ಹಾಗೂ ಸುಂದರವಾದವುಗಳು. ನಿಮರ್ಾಣಗೊಳ್ಳುತ್ತಿರುವ ಮನೆಗೆ ದೃಷ್ಟಿ ಬೀಳಬಾರದೆಂದು ಕಟ್ಟುವ ದೃಷ್ಟಿ ಬೊಂಬೆಯಿಂದ ಹಿಡಿದು ವಿವಿಧ ರೀತಿಯ ಮನಸೆಳೆಯುವ ವಸ್ತುಗಳು ಅಂದರೆ ಹೂದಾನಿಗಳು, ಬೊಂಬೆಗಳು, ಸಾಯಿಬಾಬಾ, ರಾಧಾಕೃಷ್ಣ ಮುಂತಾದ ದೇವರ ಮೂತರ್ಿಗಳು, ಮನೆಯ ಸಿಂಗಾರಕ್ಕೆ ಬಳಸುವ ನವಿಲು, ಗಿಳಿ ಇತ್ಯಾದಿ ಪಕ್ಷಿಗಳ ಮಾದರಿಗಳು, ಗೋಡೆಗಳ ಸಿಂಗಾರಕ್ಕೆ ಬಳಸುವಂತವುಗಳು ಹೀಗೆ ವಿವಿಧ ರೀತಿಯ ಮೋಹಕ ವಸ್ತುಗಳು  ಅಲ್ಲಿ ಮೈದಳೆಯುತ್ತವೆ, ಮಾರಾಟವಾಗುತ್ತವೆ.
ಇಲ್ಲಿನ ಕಲಾಕೃತಿಗಳಿಗೆ ಕೊಡಲಾಗುವ ಬಣ್ಣಗಳೂ ತುಂಬ ವಿಶಿಷ್ಟವಾದದ್ದು. ಈ ಬೀದಿ ಬದಿಯ ಕಲಾಕಾರರು ಬಣ್ಣವನ್ನು ಮಿಶ್ರಣ ಮಾಡಿ ಈ ಮಣ್ಣಿನ ಕಲಾಕೃತಿಗಳಿಗೆ ಲೇಪಿಸಿದರೆ ಅವುಗಳನ್ನು ನೋಡಲು ಸುಂದರ ಅನುಭವವಾಗುತ್ತದೆ. ಅವರ ಕೈಚಳಕದಲ್ಲಿ ಆಕೃತಿ ಪಡೆದ ಬಣ್ಣವನ್ನು ಧರಿಸಿ ಹೊರಬರುವ ವಿಶಿಷ್ಟ ಕಲಾಕೃತಿಗಳು ನೋಡುಗರನ್ನು ಥಟ್ಟನೆ ಸೆಳೆಯುತ್ತವೆ.
ತಮ್ಮ ಕಲಾ ಸೊಬಗನ್ನು ಪ್ರದಶರ್ಿಸುವ ಈ ಬೀದಿ ಬದಿಯ ಕಲಾಕಾರರು ಉತ್ತರ ಭಾರತದವರಾದರು ಇವರಲ್ಲಿ ಅನೇಕರು ರಾಜಾಸ್ತಾನಕ್ಕೆ ಸೇರಿದವರು. ಸಾಮಾನ್ಯವಾಗಿ  ಹತ್ತಕ್ಕಿಂತ ಹೆಚ್ಚಿನ ಸಂಖ್ಯೆಯ ಸದಸ್ಯರಿರುವ ಇವರ ಕುಟುಂಬದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ವಿವಿಧ ರೀತಿಯ ಕರುಕುಶಲ ವಸ್ತುಗಳನ್ನು ತಯಾರಿಸುತ್ತಾರೆ. ರಾಜಧಾನಿಯ ಸುಂಕದಕಟ್ಟೆ, ಕೊಟ್ಟಿಗೆಪಾಳ್ಯ, ಕೆ.ಆರ್. ಪುರಂ, ಬಾಣಸವಾಡಿ, ಯಶವಂತಪುರ ಮುಂತಾದ ಕಡೆಗಳಲ್ಲಿ ಬೀದಿ ಬದಿಯಲ್ಲಿ ಟೆಂಟು ಕಟ್ಟಿಕೊಂಡು ತಾವು ತಯಾರಿಸುವ ಮಣ್ಣಿನ ವಿಶಿಷ್ಟ ಕಲಾಕೃತಿಗಳನ್ನು ಮಾರಾಟ ಮಾಡುತ್ತಾರೆ. 50 ರೂ.ಗಳಿಂದ 500 ರೂಪಾಯಿಗಳವರೆಗೆ ಬೆಲೆ ಇದೆ. ಚೆಂದದ ಮೂತರ್ಿಗಳನ್ನು ಕೆಲವರು ಕೊಂಡುಕೊಂಡರೂ ಹಲವರು ಅದನ್ನು ನೋಡಿ ರೇಟು ಕೇಳಿ ಚೌಕಾಸಿ ಮಾಡಿ ಖರೀದಿಸುವವರೂ ಇದ್ದರೆ, ಮತ್ತೆ ಕೆಲವರು ವಸ್ತುಗಳ ವೀಕ್ಷಣೆ ಮಾಡಿ, ಏನೂ ಖರೀದಿಸದೆ ಹೋಗುತ್ತಾರೆ.
ಮಣ್ಣಿನಿಂದ ತಮ್ಮ ಬದುಕನ್ನು ಕಟ್ಟಿಕೊಂಡು ಜೀವನ ನಡೆಸುತ್ತಿರುವ ಈ ಬಡ ಕಲಾಕಾರರು ಎದುರಿಸುವ ಸಮಸ್ಯೆಗಳು ಹಲವಾರು. ಗೊತ್ತಿರುವ ಕಲೆಯೊಂದಿಗೆ ಗೊತ್ತಿರದ ಪ್ರದೇಶಕ್ಕೆ ಧೈರ್ಯಮಾಡಿ ಬಂದಿರುವ ಈ ಮಂದಿಗೆ ಈ ವೃತ್ತಿ ಹೆಚ್ಚಿನ ಲಾಭ ತರದಿದ್ದರೂ ಜೀವನ ನಿರ್ವಹಣೆಯಾದರೆ ಸಾಕು ಎಂಬ ಭಾವನೆಯೂ ಇಟ್ಟುಕೊಂಡೇ ದಿನ ನೂಕುತ್ತಿದ್ದಾರೆ. ತಾವು ತಯಾರಿಸಿದ ವಸ್ತುಗಳು ಮಾರಾಟವಾದರೆ ಆದೀತು, ಇಲ್ಲದಿದ್ದರೆ ಇಲ್ಲ. ಇಂತಹ ಮಣ್ಣಿನ ಮೂತರ್ಿ, ಇತರ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಿ ಬದುಕು ನಿರ್ವಹಣೆ ಮಾಡುತ್ತಿರುವ ರಾಜಸ್ತಾನ ಮೂಲದ ವ್ಯಕ್ತಿ ಸುಂಕದಕಟ್ಟೆಯಲ್ಲಿ ಮಾತಿಗೆ ಸಿಕ್ಕಾಗ ಹೇಳಿದ್ದು: `ದೊಡ್ಡ ದೊಡ್ಡ ಮಾಲ್ಗಳಲ್ಲಿ ಕೇಳಿದ ಬೆಲೆಗೆ ಖರೀದಿಸುವ ಗ್ರಾಹಕರು ನಮ್ಮ ವಸ್ತುಗಳಿಗೆ ಬಹಳ ಚೌಕಾಸಿ ಮಾಡುತ್ತಾರೆ. ಅವರು ಹೇಳುವ ರೇಟು ನಮಗೆ ಹೊಂದುವುದಿಲ್ಲ. ಈ ವೃತ್ತಿ ಲಾಭದಾಯಕ ಅಲ್ಲ. ಈ ಮೂತರ್ಿಗಳ ಮಾರಾಟದಿಂದ ನಮ್ಮ ಜೀವನ ನಡೆಯಬೇಕು. ತಂತ್ರಜ್ಞಾನ ಮುಂದುವರಿದಂತೆ ನಮ್ಮ ಬದುಕು ದುಸ್ತರವಾಗುತ್ತಿದೆಯೇನೋ ಎಂಬ ಶಂಕೆಯೂ ಬರುತ್ತದೆ'.
ಮನೆಯ ಅಂದಕ್ಕೆ ತಮ್ಮದೇ ಆದ ಹೊಳಪು ನೀಡುವ ಈ ಕಲಾಕೃತಿಗಳು ಅದರ ತಯಾರಕರ ಬದುಕನ್ನೂ ಕಟ್ಟಿಕೊಡುವ ಕಾರ್ಯ ಮಾಡುತ್ತವೆ. ಈ ಬೀದಿಬದಿಯ ಕಲಾಕಾರರ ಭಾವನೆಗೆ ಸೂಕ್ತ ಬೆಲೆ ದೊರೆತರೆ ಇವರ ಕಾರ್ಯಕ್ಕೆ ಅದು ಒತ್ತಾಸೆಯಾದಂತೆ.
ವಿನಯ್ ದಂಟಕಲ್

Friday, July 9, 2010

ನೀನು

ಎದೆಯ ಬೃಂದಾವನದ
ಹಸಿರು ಹೂಗಿಡ ನೀನು,
ನನ್ನೊಳಗೆ ನೀನಿರಲು
ಬಾಳಿಗದು ಶೋಭೆ ||


ನನ್ನ ಬಯಕೆಯ ಮನದ
ಕಣ್ಣರೆಪ್ಪೆಯು ನೀನು,
ನನ್ನುಳಿಸೆ ನೀನಿರಲು
ಬಾಳಿಗದು ರಕ್ಷೆ ||


ನನ್ನ ಅಕ್ಷಿ ಆಳದೊಳು
ಕಿಡಿ ಕಾಂತಿ ನೀನು,
ಬದುಕೊಳಗೆ ನೀನಿರಲು
ಕಡೆಗೋಲು ಛಲ ||

ಒಡಲ ತಿಳಿ ನೀರಿನಲಿ
ಹಸಿರು ಹಾವಸೆ ನೀನು,
ನೀರೊಳಗೆ ನೀನಿರಲು
ಅಲ್ಲಹುದು ಸೃಷ್ಟಿ ||


-ವಿನಯ್ ದಂಟಕಲ್

Monday, July 5, 2010

ಕನ್ನಡದ ಕ್ಲಾಸಿಕ್ `ಭೂತಯ್ಯನ ಮಗ ಅಯ್ಯು'

ನಿರ್ದೆಶಕ : ಸಿದ್ಧಲಿಂಗಯ್ಯ
ಕಥೆ : ಗೋರೂರು ರಾಮಸ್ವಾಮಿ ಅಯ್ಯಂಗಾರ್

ನಿರ್ಮಾಪಕ : ಜೈನ್ ಕಂಬೈನ್ಸ್
ಛಾಯಾಗ್ರಹಣ : ಡಿ. ವಿ. ರಾಜಾರಾಂ
ಚಿತ್ರ ಬಿಡುಗಡೆ : 1974
ಸಂಗೀತ : ಜಿ. ಕೆ. ವೆಂಕಟೇಶ್
ತಾರಾಗಣದಲ್ಲಿ : ವಿಷ್ಣುವರ್ಧನ್, ಲೋಕೇಶ್, ಎಂ. ಪಿ. ಶಂಕರ್, ಬಾಲಕೃಷ್ಣ, ಲೋಕನಾಥ್ ಮುಂತಾದವರು.

ಕನ್ನಡದ ಕ್ಲಾಸಿಕ್ ಚಿತ್ರಗಳ ಬಗ್ಗೆ ಕಣ್ಣಾಡಿಸಿದಾಗ ಎಲ್ಲಕ್ಕಿಂತ ಮೊದಲು ಕಂಡುಬರುವ ಚಿತ್ರ `ಭೂತಯ್ಯನ ಮಗ ಅಯ್ಯು'. ಸಾಹಿತ್ಯ ಆಕಾಡಮಿ ಪ್ರಶಸ್ತಿ ವಿಜೇತ ಗೋರೂರು ರಾಮಸ್ವಾಮಿ ಅಯ್ಯಂಗಾರರ ಕಾದಂಬರಿ ಆಧಾರಿತ ಭೂತಯ್ಯನ ಮಗ ಅಯ್ಯು, ಚಿತ್ರರಂಗದಲ್ಲಿ ವಿಷ್ಣುವರ್ಧನ್ಗೆ ಭದ್ರವಾದ ನೆಲೆ ನೀಡಿದ ಚಿತ್ರ.
ಜಮೀನ್ದಾರ ಭೂತಯ್ಯ(ಎಂ.ಪಿ. ಶಂಕರ್) ಭಾರಿ ಜುಗ್ಗ. ಇನ್ನೊಬ್ಬರ ತಲೆಒಡೆದು ದುಡ್ಡುಮಾಡುವ ವ್ಯಕ್ತಿ. ಸುಳ್ಳು ದಾಖಲೆಗಳ ಮೂಲಕ ಇನ್ನೊಬ್ಬರ ಜಮೀನು ಕಬಳಿಸುವಾತ. ಊರಿನ ಜನರಿಗೆ ಆತನೆಂದರೆ ತಿರಸ್ಕಾರ. ಆತನ ಹಾದಿಯಲ್ಲೇ ಸಾಗುವ ಮಗ ಅಯ್ಯು(ಲೋಕೇಶ್). ಊರ ಮಂದಿಗೆ ಮೋಸ ಮಾಡಿ ತನ್ನ ಬದುಕು ಕಟ್ಟಿಕೊಳ್ಳುವ ಭೂತಯ್ಯ ಮೋಸ ಮಾಡುತ್ತಲೆ ಜೀವ ಬಿಡುತ್ತಾನೆ. ಆತನ ನಂತರ ಮಗ ಅಯ್ಯು ಸಹ ಅದೇ ರೀತಿ ನಡವಳಿಕೆ ಪ್ರದರ್ಶಿಸುತ್ತಾನೆ. ನಡುವೆ ಊರಿನ ವ್ಯಕ್ತಿಯೊಬ್ಬನ ಮಗ ಗುಳ್ಳ (ವಿಷ್ಣುವರ್ಧನ್)ನೊಂದಿಗೆ ಹಗೆ ಬೆಳೆಯುತ್ತದೆ. ಅಯ್ಯುವಿನ ವಿರುದ್ಧ ಗುಳ್ಳ ತಿರುಗಿ ಬೀಳುತ್ತಾನೆ. ಇಬ್ಬರ ನಡುವೆ ಆಸ್ತಿ ಪತ್ರಕ್ಕಾಗಿ ಗಲಾಟೆ ಆಗುತ್ತದೆ. ಇಬ್ಬರೂ ಕೋರ್ಟ್  ಮೆಟ್ಟಿಲನ್ನು ಏರುತ್ತಾರೆ. ಅಲ್ಲಿ ಗುಳ್ಳ ಸೋಲುತ್ತಾನೆ. ಆ ನಂತರ ಚಿತ್ರ ಅನೇಕ ತಿರುವುಗಳನ್ನು ಕಾಣುತ್ತದೆ.
ಪರಸ್ಪರ ವಿರೋಧಿಗಳಾದ ಅಯ್ಯು ಹಾಗೂ ಗುಳ್ಳ ಕೊನೆಯಲ್ಲಿ ಮಿತ್ರರಾಗುತ್ತಾರೆ. ತಂದೆ ಭೂತಯ್ಯನಂತೆ ದುರ್ಗುಣವನ್ನು ಪ್ರದರ್ಶಿಸುತ್ತಿದ್ದ ಅಯ್ಯು ಒಳ್ಳೆಯವನಾಗುತ್ತಾನೆ ಇದು ಚಿತ್ರದ ತಿರುಳು. ಸಂಪೂರ್ಣ ಚಿತ್ರ ಚಿಕ್ಕಮಂಗಳೂರಿನ ಕಳಸಾಪುರದಲ್ಲಿ ಚಿತ್ರೀಕರಣಗೊಂಡಿದೆ.
ಚಿತ್ರದಲ್ಲಿ ವಿಷ್ಣು, ಲೋಕೇಶ್, ಎಂ. ಪಿ ಶಂಕರ್, ಬಾಲಕೃಷ್ಣ, ಲೋಕೇಶ್, ದಿನೇಶ್ ಸೇರಿದಂತೆ ಹಲವರು ಅಮೋಘ ಅಭಿನಯ ನೀಡಿದ್ದಾರೆ. ಚಿತ್ರಕ್ಕೆ ಸಂಗೀತ ನೀಡಿದ್ದು ಜಿ. ಕೆ. ವೆಂಕಟೇಶ್. ಪಿ. ಬಿ ಶ್ರೀನಿವಾಸ್ ಹಾಗೂ ಎಸ್. ಜಾನಕಿ ಅವರ ಸ್ವರಗಳಲ್ಲಿ ಮೂಡಿಬಂದ `ಮಲೆನಾಡ ಹೆಣ್ಣ ಮೈಬಣ್ಣ' ಹಾಡನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.
ಚಿತ್ರದಲ್ಲಿ ಅನೇಕ ಮರೆಯಲಾರದ ಸನ್ನಿವೇಶಗಳಿವೆ. ಕೋರ್ಟ್ ಪ್ರಕರಣ ಮುಗಿಸಿ ವಾಪಸ್ ಬರುವ ಗುಳ್ಳನ ಮಿತ್ರರು ಹೊಟೆಲಲ್ಲಿ ಊಟ ಮಾಡುವುದು, ಲೋಕನಾಥ್ ಉಪ್ಪಿನಕಾಯಿಗಾಗಿ ಹಾತೊರೆಯುವುದು, ಭೂತಯ್ಯ ಸಿದ್ದಿಯ ಎತ್ತುಗಳನ್ನು ಕದ್ದು ಮಾರಾಟ ಮಾಡುವುದು, ಮಾವ ಬಾಲಕೃಷ್ಣ ಅಯ್ಯುವಿಗೆ ಬುದ್ಧಿಕಲಿಸಲು ಪ್ರಯತ್ನಿಸುವುದು, ಮಳೆಯಿಂದ ಅಣೆಕಟ್ಟು ಒಡೆದು ಅಯ್ಯುವಿನ ಮನೆ ಮುಳುಗುವುದು, ಗುಳ್ಳ ಅಯ್ಯುವಿನ ಹೆಂಡತಿ ಮಕ್ಕಳನ್ನು ಕಾಪುಡುವ ಸನ್ನಿವೇಶಗಳನ್ನು ಎಂದಿಗೂ ಮರೆಯುವಂತಿಲ್ಲ.
ಭೂತಯ್ಯನ ಮಗ ಅಯ್ಯು ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಸಮಾಜಕ್ಕೆ ಉತ್ತಮ ಅಂಶಗಳನ್ನು ತಿಳಿಸುವ ಚಿತ್ರ ಕನ್ನಡದ ಅತ್ಯುತ್ತಮ ಚಿತ್ರಗಳಲ್ಲೊಂದು. ಕನ್ನಡ ನಾಡಿನ ಎಲ್ಲ ಉತ್ತಮ ಅಂಶಗಳನ್ನು ಸಾರುವ ಚಿತ್ರ ಇದು. ಮಲೆನಾಡು, ಬಯಲು ಸೀಮೆ ಮುಂತಾದ ವಿವಿಧ ಭಾಗಗಳ ಜನಜೀವನವನ್ನು ಸೂಕ್ಷ್ಮವಾಗಿ ವಿವರಿಸುತ್ತದೆ. ಎಲ್ಲ ವಯೋಮಾನದವರೂ ನೋಡಲೇ ಬೇಕಾದ ಚಿತ್ರ ಇದು.

ವಿನಯ್ ದಂಟಕಲ್