Monday, February 21, 2011

ಕರ್ನಾಟಕದ ಅಣೆಕಟ್ಟುಗಳು


ಅಣೆಕಟ್ಟುಗಳು ಎಂದರೆ ‘ಭವ್ಯ ಭಾರತ ನಿರ್ಮಾಣದ ದೇಗುಲಗಳಿದ್ದಂತೆ ಎಂದು ‘ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ ಲಾಲ್ ನೆಹರೂ ಹೇಳಿದ್ದರು. ಅವರ ಮಾತಿನಂತೆ ‘ಭಾರತದಲ್ಲಿ ಅದೆಷ್ಟೋ ಅಣೆಕಟ್ಟುಗಳು ನಿರ್ಮಾಣವಾಗಿವೆ. ಕರ್ನಾಟಕದಲ್ಲಿಯೂ ‘ಭಾರಿ ಸಂಖ್ಯೆಯಲ್ಲಿಯೇ  ಅಣೆಕಟ್ಟುಗಳು ನಿರ್ಮಿಸಲಾಗಿದೆ. ಕರ್ನಾಟಕದಲ್ಲಿ ಇರುವ ದೊಡ್ಡ ಅಣೆಕಟ್ಟುಗಳ ಸಂಖ್ಯೆ 23. ಅವುಗಳಲ್ಲದೇ ಚಿಕ್ಕಪುಟ್ಟ ಅಣೆಕಟ್ಟುಗಳ ಸಂಖ್ಯೆಗಲೂ ಹಲವಷ್ಟಿವೆ. ಅವುಗಳಲ್ಲಿ ಕೆಲವು ಅಣೆಕಟ್ಟುಗಳ ಬಗ್ಗೆ ಕಿರು ನೋಟ.

ಕೃಷ್ಣರಾಜ ಸಾಗರ ಅಣೆಕಟ್ಟು
‘ಭಾರತದ, ಏಷ್ಯಾದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ಇದು ‘ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಕನಸಿನ ಕೂಸು. ಕಾವೇರಿ ನದಿಗೆ ಶ್ರೀರಂಗಪಟ್ಟಣದಿಂದ ಕೇವಲ 12 ಕಿಲೋಮೀಟರ್ ದೂರದಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು 130 ಅಡಿ ಎತ್ತರವಾಗಿದೆ. ಕೆಆರ್ಎಸ್ ಎಂದೇ ಹೆಸರಾಗಿರುವ ಈ ಅಣೆಕಟ್ಟು ಮಂಡ್ಯ, ಮೈಸೂರು ಜಿಲ್ಲೆಗಳ ಸಾವಿರಾರು ಎಕರೆಗೆ ನೀರುಣ್ಣಿಸುತ್ತದೆ. ‘ಭಾರತ ಸ್ವತಂತ್ರವಾಗುವ ಮೊದಲೇ ನಿರ್ಮಾಣಗೊಂಡಿರುವ ಈ ಅಣೆಕಟ್ಟು ಹಿಂದಿನ ತಲೆಮಾರಿನ ತಂತ್ರಕ್ಞರ ಯಶಸ್ವಿ ತಂತ್ರಜ್ಞಾನಕ್ಕೆ ಸಾಕ್ಷಿ. ಈ ಅಣೆಕಟ್ಟಿನ ಕೆಳ‘ಾಗದಲ್ಲಿ ನಿರ್ಮಿಸಲಾಗಿರುವ ಬೃಂದಾವನ ಉದ್ಯಾನವನವೂ ಅಷ್ಟೇ ಪ್ರಸಿದ್ಧಿ ಹೊಂದಿದ್ದು ವಿಶ್ವ ವಿಖ್ಯಾತಿ ಗಳಿಸಿದೆ.

ಲಿಂಗನ ಮಕ್ಕಿ ಅಣೆಕಟ್ಟು.
ಶರಾವತಿ ನದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಎಂಬಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು 1819 ಅಡಿ ಎತ್ತರವಾಗಿದೆ. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 300 ಕಿಲೋಮೀಟರ್ಗಳಷ್ಟು  ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮುಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.

ಸುಪಾ ಅಣೆಕಟ್ಟು
ಕಾಳಿ ನದಿಗೆ ನಿರ್ಮಿಸಲಾಗಿರುವ ಸುಪಾ ಅಣೆಕಟ್ಟು ಕರ್ನಾಟಕದ ಅತ್ಯಂತ ಎಲ್ಲರವಾದ ಅಣೆಕಟ್ಟು ಎಂಬ ಖ್ಯಾತಿ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸುಪಾದಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು ವಿದ್ಯುತ್ ಉತ್ಪಾದನೆಯ ಕಾರಣಕ್ಕಾಗಿಯೇ ನಿರ್ಮಾಣಗೊಂಡಿದೆ. 1101 ಮೀಟರ್ ಎತ್ತರ ಇರುವ ಸುಪಾ ಅಣೆಕಟ್ಟು 332 ಮೀಟರ್ ಉದ್ದವಾಗಿದೆ. ಅಣೆಕಟ್ಟನ್ನು 1985ರಂದು ಉದ್ಘಾಟಿಸಲಾಗಿದೆ. ಇದು ಕರ್ನಾಟಕದ ಎರಡನೇ ಅತಿದೊಡ್ಡ ಅಣೆಕಟ್ಟು ಎಂಬ ಖ್ಯಾತಿಯನ್ನೂ ಗಳಿಸಿಕೊಂಡಿದೆ. ಕಾಳಿನದಿಗೆ ಕಟ್ಟಲಾಗಿರುವ ಹಲವಾಸು ದೊಡ್ಡ ಅಣೆಕಟ್ಟುಗಳಲ್ಲಿ ಇದೂ ಒಂದು.

ತುಂಗಭದ್ರಾ ಅಣೆಕಟ್ಟು
2441ಮೀಟರ್ ಉದ್ದ ಹಾಗೂ 49.38 ಮೀಟರ್ ಎತ್ತರ ಹೊಂದಿರುವ ತುಂಗಭದ್ರಾ ಅಣೆಕಟ್ಟು ನೀರಾವರಿ ಉದ್ದೇಶದಿಂದ ನಿರ್ಮಾಣಗೊಂಡಿದೆ. ಇದು ಹೊಸಪೇಟೆಯಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿದೆ. 33 ಬಹುದೊಡ್ಡ ಗೇಟುಗಳನ್ನು ಹೊಂದಿರುವ ತುಂಗ‘ದ್ರಾ ಅಣೆಕಟ್ಟು ಬಹುದೊಡ್ಡ ಗಾತ್ರವನ್ನು ಹೊಂದಿದೆ. ಈ ಅಣೆಕಟ್ಟಿನಿಂದ ಸಂಗ್ರಹಿಸಲಾದ ನೀರನ್ನು ಕಾಲುವೆಗಳ ಮೂಲಕ ಕರ್ನಾಟಕದ ಚಿಕ್ಕಮಂಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ ಹಾಗೂ ಆಂದ್ರಪ್ರದೇಶದ ಕರ್ನೂಲು, ಮೆಹಬೂಬ್ ನಗರ ಮುಂತಾದ ಜಿಲ್ಲೆಗಳಿಗೆ ನಿರಾವರಿ ಉದ್ದೇಶಕ್ಕಾಗಿ ಬಳಸಲಾಗುತ್ತದೆ.

ಕೊಡಸಳ್ಳಿ ಅಣೆಕಟ್ಟು.
ಕಾಳಿನದಿಗೆ ಯಲ್ಲಾಪುರ ತಾಲೂಕಿನ ಕೊಡಸಳ್ಳಿ ಬಳಿ ನಿರ್ಮಿಸಲಾಗಿರುವ ಈ ಅಣೆಕಟ್ಟನ್ನು 1997ರಲ್ಲಿ ಉದ್ಘಾಟಿಸಲಾಯಿತು. ವಿದ್ಯುತ್ ಉತ್ಪಾದನೆಯ ಉದ್ದೇಶದಿಂದಲೇ ನಿರ್ಮಾಣಗೊಂಡ ಅಣೆಕಟ್ಟು ಇದಾಗಿದೆ. ಪಶ್ಚಿಮ ಘಟ್ಟಗಳ ನಡುವೆ ಇರುವ ಈ ಅಣೆಕಟ್ಟು ನಿರ್ಮಾದ ಸಮಯದಲ್ಲಿ ಕಾಡಿನ ನಾಶದ ವಿರುದ್ಧ ಹಲವು ಹೋರಾಟಗಳು ನಡೆದಿದ್ದವು.

ಆಲಮಟ್ಟಿ ಅಣೆಕಟ್ಟು
ಜುಲೈ2005ರಲ್ಲಿ ಉದ್ಘಾಟನೆಯಾದ ಆಲಮಟ್ಟಿ ಅಣೆಕಟ್ಟು 509 ಮಿಟರ್ ಎತ್ತರವಾಗಿದೆ. ಇದನ್ನು ಈಗ ಸುಪ್ರಿಂ ಕೋರ್ಟಿನ ಆದೇಶದ ಮೇರೆಗೆ 519 ಮೀಟರ್ಗೆ ಏರಿಸಲಾಗುತ್ತಿದೆ. ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಈ ಅಣೆಕಟ್ಟು ನಿರಾವರಿ ಹಾಗೂ ವಿದ್ಯುತ್ ಉತ್ಪಾದನೆ ಈ ಎರಡೂ ಉದ್ದೇಶ ಹೊಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಮಿಸಲಾಗಿರುವ ಈ ಅಣೆಕಟ್ಟು 1565.15 ಮೀಟರ್ ಉದ್ದವಾಗಿದೆ. 42.19 ಟಿಎಂಸಿ ನೀರನ್ನು ಹಿಡಿದಿಡುವ ಸಾಮರ್ಥ್ಯವನ್ನು ಈ ಅಣೆಕಟ್ಟು ಹೊಂದಿದೆ.

ಇವು ಕರ್ನಾಟಕದ ಪ್ರಮುಖ ಅನೆಕಟ್ಟುಗಳು. ಇವಲ್ಲದೆ ಕದ್ರಾ ಅಣೆಕಟ್ಟು, ನಾರಾಯಣಪುರ, ಕಬಿನಿ, ಹಾರಂಗಿ, ಗಾಜನೂರು, ಕದ್ರಾ, ಬಾಚಣಕಿ, ಗೋರೂರು, ಬಸವಸಾಗರ, ಹಿಡಕಲ್, ಕಣ್ವ, ಲಕ್ಕವಳ್ಳಿ, ಮಾರ್ಕೋನಹಳ್ಳಿ, ಸಾತನೂರು, ವಾಣಿವಿಲಾಸ ಸಾಗರ ಮುಂತಾದ ಹಲವು ಮಧ್ಯಮ ಗಾತ್ರದ ಅಣೆಕಟ್ಟುಗಳಿವೆ. ಅದಲ್ಲದೆ ನೂರಕ್ಕೂ ಹೆಚ್ಚಿನ ಚಿಕ್ಕಪುಟ್ಟ ಅಣೆಕಟ್ಟುಗಳಿವೆ. ಇವುಗಳ ಜೊತೆಗೆ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನೂರಾರು ಚಿಕ್ಕ ಪುಟ್ಟ ಅಣೆಕಟ್ಟುಗಳ ನಿರ್ಮಾಣಕ್ಕೆ ಸಮೀಕ್ಷೆ ನಡೆಸಲಾಗಿದೆ. ಇವುಗಳ ವಿರುದ್ಧ ಪರಿಸರವಾದಿಗಳು ಹೋರಾಟ ಪ್ರಾರಂಭಿಸಿದ್ದಾರೆ.
ಕನ್ನಡ ನಾಡಿಗೆ ವಿದ್ಯುತ್ತಿನ ಜೊತೆಗೆ ಬೆಳೆಗಳಿಗೆ ನೀರನ್ನೂ ನೀಡುತ್ತಿರುವ ಈ ಅಣೆಕಟ್ಟುಗಳು ಭವ್ಯ ಭಾರತದ ದೇಗುಲಗಳೇ ಹೌದು






Thursday, February 3, 2011

ತಾ ತಾ ಗುಬ್ಬಿ ತಾವನ ಗುಬ್ಬಿ.. ಮುಚ್ಚಳ ತೆಗೆದರೆ ಮುನ್ನೂರು ಗುಬ್ಬಿ


ಮನೆಯ  ಮಾಳಿಗೆಯ ಮೇಲೆ ಅತ್ತ ಇತ್ತ ಹಾರಾಡುತ್ತಾ, ಚಿಂವ್ ಚಿಂವ್ ಎನ್ನುವ ಕೂಗು ಹಾಕುತ್ತಾ ಮನುಷ್ಯ ವಾಸಸ್ಥಾನದ ಸುತ್ತಮುತ್ತ ಅಡ್ಡಾಡುವ ಗುಬ್ಬಿಗಳು ಮಾನವನ ಪ್ರಾಚೀನ ಒಡನಾಡಿ. ಗುಬ್ಬಿಯನ್ನು ಇಂಗ್ಲೀಷಿನಲ್ಲಿ ಸ್ಪಾರೋ ಎಂದು ಕರೆಯುತ್ತಾರೆ. 
ಎನಿಮೇಲಿಯಾ ಪ್ರಬೇ‘ಕ್ಕೆ ಸೇರಿದ ಇದು ಪೆಸ್ಸಿರೈಡೆ ಕುಟುಂಬದ ಜೀವಿ.

ಆಹಾರ-ವಿಹಾರ-ವೈವಿಧ್ಯ 
ಗುಬ್ಬಿಗಳಲ್ಲಿ ಮುಖ್ಯವಾಗಿ ಎರಡು ವಿಧ. ಮನೆ ಗುಬ್ಬಿ ಹಾಗೂ ಕಾಡಿನ ಗುಬ್ಬಿ ಎಂಬ ಎರಡು ವಿಧವಿರುವ ಗುಬ್ಬಿಗಳಲ್ಲಿ ಒಂದು ವರ್ಗ ಸದಾ ಮಾನವನ ಇರುವಿಕೆಯನ್ನು ಬಯಸುತ್ತದೆ. ಮತ್ತೊಂದು ವರ್ಗ ಕಾಡಿನಲ್ಲಿಯೇ ವಾಸಿಸುತ್ತದೆ.
ಇವು ಯಾವಾಗಲೂ ಗುಂಪು ಗುಂಪಾಗಿಯೇ ವಾಸಿಸುತ್ತವೆ. ನೂರಕ್ಕೂ ಹೆಚ್ಚಿನ ಸಂಖ್ಯೆಯ ಗುಂಪುಗುಂಪುಗಳನ್ನು ರಚಿಕೊಂಡಿರುವ ಗುಬ್ಬಿಗಳು ಬಹಳ ಚಿಕ್ಕ ಪಕ್ಷಿಗಳು. ಇವುಗಳ ಗಾತ್ರ 11 ಸೆಂಟೀಮೀಟರರ್ನಿಂದ 15 ಸೆಂಟಿಮೀಟರ್ಗಳು. ಕೆಲವೊಂದು ಗುಬ್ಬಿಗಳು 18 ಸೆಂಟೀಮೀಟರ್ಗಳಷ್ಟು ದೊಡ್ಡದಾಗಿ ಬೆಳೆಯುವುದೂ ಉಂಟು. 
ಗುಬ್ಬಿ ವಿಶ್ವವ್ಯಾಪಿ ಪಕ್ಷಿ. ಗುಬ್ಬಿಗಳಿಲ್ಲದ ಪ್ರದೇಶವೇ ಇಲ್ಲ. ಏಷ್ಯಾ, ಅಮೇರಿಕಾ, ಆಫ್ರಿಕಾ, ಆಸ್ಟ್ರೇಲಿಯಾಗಳಲ್ಲಿ ಗುಬ್ಬಿಗಳು ಕಾಣಸಿಗುತ್ತವೆಯಾದರೂ ಅವುಗಳ ಗಾತ್ರದಲ್ಲಿ ಬದಲಾವಣೆಯಿರುತ್ತವೆ.ಗುಬ್ಬಿಗಳು ಹೆಚ್ಚಾಗಿ ಹಣ್ಣುಗಳು, ಬೀಜಗಳು, ಕಾಳುಗಳು ಹಾಗೂ ಚಿಕ್ಕ ಚಿಕ್ಕ ಕೀಟಗಳನ್ನು ತಿನ್ನುತ್ತವೆ. ಸೀಬೆ ಹಣ್ಣುಗಳೆಂದರೆ ಇವಕ್ಕೆ ಅಚ್ಚುಮೆಚ್ಚು. ಆದ್ದರಿಂದಲೇ ಸೀಬೆ ಮರದ ಸುತ್ತ ಇವುಗಳು ದಂಡುಕಟ್ಟಿಕೊಂಡು ವಾಸಿಸುತ್ತವೆ.ಬಣ್ಣ-ಅಂದ-ಚೆಂದಸಾಮಾನ್ಯವಾಗಿ ಮಾಸಲು ಬಣ್ಣ ಹೊಂದಿರುವ ಈ ಗುಬ್ಬಿಯ ದೇಹದ ಮೆಲೆ ಅಲ್ಲಲ್ಲಿ ಬಿಳಿ ಬಣ್ಣದ ರೋಮಗಳಿರುತ್ತವೆ. ಉದ್ದನೆಯ ಪುಕ್ಕ ಹೊಂದಿರುವ ಇವು ರೆಕ್ಕೆ ಬಡಿಯುವ ವೇಗ ಬಹಳ ಜೋರು.ಹೆಣ್ಣು ಗುಬ್ಬಿಯನ್ನು ಆಕರ್ಷಿಸಲು ಗಂಡು ಗುಬ್ಬಿ ತನ್ನ ದೇಹ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ. ಅಲ್ಲದೆ ತನ್ನ ದೇಹವನ್ನು ವಿಶಿಷ್ಟವಾಗಿ ಬಾಗಿಸಿ ಬಳುಕಿಸುವ ಮೂಲಕ ಅದು ಎಲ್ಲರನ್ನೂ ಆಕರ್ಷಿಸುತ್ತದೆ.

ಗೌರವದ ಭಾವನೆ
ಕರ್ನಾಟಕದಲ್ಲಿ ಸುಗ್ಗಿ ಕಾಲದಲ್ಲಿ ಗುಬ್ಬಿಗಳು ಹೆಚ್ಚಳವಾಗುತ್ತವೆ. ಆದ್ದರಿಂದಲೇ ಕರ್ನಾಟಕದ ಹಳ್ಳಿಗರು ಗುಬ್ಬಿಯನ್ನು ಸುಗ್ಗಿಯ ದೂತರು ಎಂದೇ ಕರೆಯುತ್ತಾರೆ. ಹಳ್ಳಿಗರಿಗೆ ಗುಬ್ಬಿ ಎಂದರೆ ಪವಿತ್ರ ಭಾವನೆ. ಅದನ್ನು ಬಹಳ ಗೌರವದಿಂದ ಕಾಣುತ್ತಾರೆ. ಕೆಲವೊಮ್ಮೆ ಇವು ಭತ್ತದ ಬೆಳೆಯನ್ನು ತಿಂದರೂ ಹೆಚ್ಚಿನ ವೇಳೆ ಇವು ಭತ್ತಕ್ಕೆ ಕಾಟ ಕೊದುವ ಕೀಟಗಳನ್ನು ತಿನ್ನುತ್ತವೆ. ಆದ್ದರಿಂದ ಇವುಗಳೂ ರೈತನ  ಮಿತ್ರನಾಗಿಯೇ ಹೆಸರುವಾಸಿ.

ಮೊಟ್ಟೆ-ಮರಿ
ಮನೆಯ ಮಾಡಿನ ಮೇಲೆ, ತಾರಸಿ ಮೇಲೆ ಗೂಡು ಕಟ್ಟುವ ಗುಬ್ಬಿಗಳು ಒಮ್ಮೆಲೆ 2-3 ಮೊಟ್ಟೆಗಳನ್ನು ಇಡುತ್ತವೆ. ಮೊಟ್ಟೆಗೆ ಗಂಡು ಹಾಗೂ ಹೆಣ್ಣು ಗುಬ್ಬಿಗಳು ಸರದಿ ಪ್ರಕಾರ ಕಾವು ಕೂರುತ್ತವೆ. ಮೊಟ್ಟೆಯೊಡೆದು ಹೊರ ಬರುಬ ಮರಿ ದೊಡ್ಡದಾಗಿ, ರೆಕ್ಕೆ ಬಲಿತು ಹಾರಲು ಪ್ರಾರಂಭಿಸುವವರೆಗೂ ಅದರ ಆರೈಕೆ ಈ ಎರಡೂ ಗುಬ್ಬಿಗಳದ್ದು. ಇವು ಹೆಚ್ಚು ಸಂಘ ಜೀವಿಗಳು. ಜೊತೆ ಜೊತೆಯಾಗಿ ಜೀವಿಸುವ ಇವು ಬಹಳ ಚೊಕ್ಕಟ ಪ್ರಾಣಿಗಳು. ತಮ್ಮ ದೇಹವನ್ನು ಶುಚಿಯಾಗಿಡಲು ಹೆಚ್ಚಿನ ಮಹತ್ವ ನೀಡುವ ಇವು ನೀರಿನಲ್ಲಿ ಆಗಾಗ ಸ್ನಾನ ಮಾಡುತ್ತವೆ. ಅಲ್ಲದೆ ಆಗಾಗ ತಮ್ಮ ದೇಹವನ್ನು ಶುಚಿಯಾಗಿಡಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತವೆ.
ಈ ಗುಬ್ಬಿಗಿಗೂ ಮಕ್ಕಳೆಂದರೆ ಪ್ರೀತಿ. ಪುಟ್ಟ ಪುಟ್ಟ ಮಕ್ಕಳು ಬಯಲಿನಲ್ಲಿ ಕೈಯಲ್ಲಿ ಏನಾದರೂ ತಿಂಡಿಗಳನ್ನು ಹಿಡಿದುಕೊಂಡಿದ್ದರೆ ಇವು ತುಸು ಹೆಚ್ಚು ಸಲಿಗೆ ತೆಗೆದುಕೊಂಡು ಯಾವುದೇ ಭಯವಿಲ್ಲದೆ ಮಕ್ಕಳ ಕೈಯಲ್ಲಿನ ತಿಂಡಿಗಳಿಗೆ ಬಾಯಿ ಹಾಕುತ್ತವೆ. ಬೆಕ್ಕುಗಳು, ಕಾಗೆಗಳು, ಗೂಬೆಗಳು, ಈ ಮುಂತಾದ ಪ್ರಾಣಿಗಳು ಗುಬ್ಬಿ ಪಾಲಿಗೆ ಯಮದೂತರು. ತಮ್ಮ ಆಹಾರಕ್ಕಾಗಿ ಗುಬ್ಬಿಗಳನ್ನಿವು ಬೇಟೆಯಾಡಿ ತಿನ್ನುತ್ತವೆ.

ಅಳಿವಿನ ಅಂಚಿನಲ್ಲಿ..
ಸುಮಾರು 10 ಸಾವಿರ ವರ್ಷಗಳಿಗಿಂತ ಹಿಂದಿನಿಂದಲೂ ಮಾನವ ಹಾಗೂ ಗುಬ್ಬಿಯ ಒಡನಾಟ ಸಾಗಿ ಬಂದಿದೆ. ನಮ್ಮ ಜನಪದದ ಕಥೆಗಳಲ್ಲೂ ಗುಬ್ಬಿಗಳು ಹಾಸು ಹೊಕ್ಕಾಗಿವೆ. ಮಕ್ಕಳ ಪ್ರೀತಿಯ ಕಾಕಣ್ಣ ಗುಬ್ಬಣ್ಣ ಕಥೆಯಲ್ಲಿಯೂ ಇವುಗಳಿಗೆ ಬಹು ಮುಖ್ಯ ಸ್ಥಾನ. ಆಸೆ ಬುರುಕ ಕಾಗೆಗೆ ಪುಟಾಣಿ ಗುಬ್ಬಿ ಬಿದ್ಧಿಕಲಿಸುವ ಬಗೆಯಂತೂ ಮಕ್ಕಳನ್ನು ಆಧುನಿಕ ಕಾರ್ಟೂನುಗಳಿಗಿಂತ ಹೆಚ್ಚಾಗಿ ಸೆಳೆಯುತ್ತವೆ. ಇಂತಹ ಗುಬ್ಬಿಗಳು ಇದೀಗ ಅಳಿವಿನ ಅಂಚಿನಲ್ಲಿವೆ. ಮಾನವ ಆಧುನಿಕತೆಯತ್ತ ಸಾಗಿದಂತೆಲ್ಲ ಗುಬ್ಬಿ ಅವನತಿಯತ್ತ ಸಾಗುತ್ತಿದೆ. 
5-10 ವರಷಳ ಹಿಂದೆ ಲಕ್ಷಾಂತರ ಗುಬ್ಬಿಗಳು ಕಾಣಸಿಗುತ್ತಿದ್ದವು. ಆದರೆ ಈಗ ಒಂದೆರಡು ಗುಬ್ಬಿಯನ್ನು ನೋಡಬೇಕಾದರೂ ಕಷ್ಟ ಪಡಬೇಕು. ಮಾನವ ತೀವ್ರಗತಿಯಲ್ಲಿ ಯಾಂತ್ರೀಕೃತನಾಗುತ್ತಿದ್ದಾನೆ. ಇದರ ಪರಿಣಾಮ ಇಂತಹ ಮುಗ್ಧ ಪ್ರಾಣಿ ಹಾಗೂ ಪಕ್ಷಿಗಳ ಮೇಲಾಗುತ್ತಿದೆ. ಮೊಬೈಲ್ ತರಂಗಾಂತರಗಳು ಗುಬ್ಬಿಗಳ ಆರೋಗ್ಯಕ್ಕೆ ಮಾರಕ ಎಂಬ ಸಂಶೋಧನೆಯೊಂದು ಹೊರಬಿದ್ದಿದೆ. ಅದಕ್ಕೆ ತಕ್ಕಂತೆ ಗುಬ್ಬಿಗಳೂ ಕಣ್ಮರೆಯಾಗುತ್ತಿವೆ. ಗುಬ್ಬಿಗಳನ್ನು ರಕ್ಷಿಸಿ ಅವುಗಳ ಜೀವನಕ್ಕೆ ಬದುಕಿಗೆ ನೆರವಾಗದಿದ್ದಲ್ಲಿ ಮುಂದೊಮ್ಮೆ ಕಾಕಣ್ಣ ಗುಬ್ಬಣ್ಣ ಕಥೆಗಳಲ್ಲಿ ಮಾತ್ರ ಇವು ಉಳಿದುಕೊಳ್ಳುವ ಸಾಧ್ಯತೆಗಳಿವೆ. ಮಕ್ಕಳ ಪ್ರೀತಿಯ ಗುಬ್ಬಿಗಳು ಕಣ್ಮರೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ವಿ ಸು...
ಪತ್ರಿಕೆಯೊಂದಕ್ಕೆ ಬರೆದ ಬರಹದ ಯಥಾವತ್ ಪ್ರತಿ..

Sunday, September 26, 2010

ಕೆಲವು ಹನಿಗಳು

ಕರ್ಮವೀರ ವಿಶೇಷಾಂಕ ಕ್ಕೆ ನೀಡಿರುವ ಕೆಲವು ಚುಟುಕಗಳು..
ನಿಮ್ಮ ಓದಿಗಾಗಿ.
ಅನಿಸಿಕೆ ತಿಳಿಸಿ..

11) ಹೃದಯದ ಸ್ಥಿತಿ
ನಲ್ಲೆ ನೀನು ಒಪ್ಪಿದರೆ
ಈ ಹೃದಯ ನಿನದು
ಆದರೆ ನೀನು ಒಪ್ಪದಿದ್ದರೆ
ಇದರ ಸ್ಥಿತಿ ಬರ್ಬಾದು !
       
12) ತಾಳಿ
ಹರೆಯಕ್ಕೆ,
ಯವ್ವನದೊಡಲಿಗೆ
ಸಿಕ್ಕ ಒಂದು
ಕಡಿವಾಣ.
ಗಂಡಿನ ಲಗಾಮು.

13) ಸೂರ್ಯ
ಭೂಮಿಯೊಡಲ
ಸಂಪತ್ತು ಹುಡುಕಲು
ದೇವರು ಬಿಡುವ
ಟಾರ್ಚು !

14)ಸ್ವಾತಂತ್ರ್ಯ ದಿನ
ದೇಶ
ಬ್ರಿಟೀಷರ ಕೈತಪ್ಪಿ
ರಾಜಕಾರಣಿಗಳ ಕೈ
ಅಪ್ಪಿದ ದಿನ !

15)ಚಂದ್ರ
ರಾತ್ರಿ ಭೂಮಿಗೆ
ನಿದ್ರೆಯ ಕೊಡದೇ,
ಕಾವಲು ನಿಂತು
ಲೈನ್ ಹೊಡೆಯುತ್ತಿರುವ ಭೂಪ !!

16)ಹನಿಗವಿ
ಯುವ ಕವಿಯಾದ ನಾನು
ಅವಳನ್ನು ಕಂಡಾಗಲೆಲ್ಲಾ
ಆಗುತ್ತೇನೆ ಠಟಿಜಥಿ ಕವಿ
ಹನಿ ಕವಿ ಹಾಗೂ `ಹನಿ' ಕವಿ !!

17).ಮದುವೆ
ಮದುವೆಯೆಂದರೆ
ಎರಡು ನಿಷ್ಪಾಪಿ
ಜೀವಿಗಳನ್ನು
ನರಕಕ್ಕೆ ಕಳಿಸುವ
ದಾರಿ!

18)ದೀಪಾವಳಿ
ಬಾಳನ್ನು ಬೆಳಗಿದೆ
ದೀಪಾವಳಿ!
ಸಂತಸ ಪಡುವವನ
ಕಿಸೆಯೊಳಗಣ ಹಣವಾಗಿದೆ
ದಿವಾಳಿ!!

19)ಕಾರಣ
ವಿಶ್ವಕ್ಕೆಲ್ಲ ಜಾಗತೀಕರಣ,
ಔದ್ಯೋಗೀಕರಣ, ಖಾಸಗೀಕರಣ,
ಸಾಮಾಜೀಕರಣ, ಆಧುನೀಕರಣ
ಹೀಗೆಲ್ಲ ಇದ್ದರೆ, ಭಾರತಕ್ಕೆ
ಒಂದೇ ಕಾರಣ, ರಾಜಕಾರಣ !!

20)ಗೋರ್ಮೆಟ್ ನೌಕರ
ಜನರ ಸೇವೆಯನ್ನು
ದನದ ಸೇವೆ
ಎಂದು ತಿಳಿದವ
ಸರಕಾರಿ ನೌಕರ!!

21)ಹುಚ್ಚು
ಭೂಮಿಯ ಮೇಲೆ
ಎಲ್ಲರಿಗೂ ಹಿಡಿದಿದೆ ಹುಚ್ಚು !
ಅದರಲ್ಲೂ ಮೆಗಾ
ಸೀರಿಯಲ್ ನೋಡುವವರಿಗೆ
ತುಸು ಹೆಚ್ಚು !!

22)ಚಂದ್ರನಲ್ಲಿ ಬಾವುಟ
ನಮ್ಮ ಜನ
ಚಂದ್ರನಿಗೂ ಕೊಟ್ಟರು ಕಾಟ!
ನೆಟ್ಟರು ಗೂಟ, ಜೊತೆಗೆ
ಅಮೆರಿಕೆಯ ಬಾವುಟ !!

23)ನಾಕ-ನರಕ
ನಾಕ ನಾಕ ಎನ್ನುತ್ತಿದ್ದ
ಜನರಿಗೆ ಅರ್ಥವಾಗಲಿಲ್ಲ,
ಜಗತ್ತಿನ ಅತಿದೊಡ್ಡ ನರಕವೆಂದರೆ
ಅದು ಅಮೆರಿಕ !!

24)(ವಾ)ನರ
ನರ, ನಾಗರಿಕತೆಯಲ್ಲಿ
ಸಿಲುಕಿ, ಆಧುನೀಕತೆಯಲ್ಲಿ
ಮುಂದುವರಿದು ಆಗುತ್ತಿದ್ದಾನೆ
ವಾನರ !!

25)ವಾಸ್ತವ
ದೂರದ ಗುಡ್ಡ
ಕಣ್ಣಿಗೆ ನುಣುಪು!
ಗೆಳತೀ ಹಾಗೇ ನಿನ್ನ
ಮುಖವೂ ಕೂಡ !!
ದೂರವಿದ್ದರಷ್ಟೇ
ಕಾಣುವುದು ನುಣುಪು !!!

26)ಮೊಡವೆ
ಮದುವೆಗೆ ಮುನ್ನ
ಹುಡುಗಿಯರ ಕಾಡುವ
ಅವರ ಸೊಕ್ಕನ್ನು ಮುರಿಯುವ
ಏಕೈಕ ಸಾಧನ ಮೊಡವೆ !!

27)ಜಮ್ಮು-ಕಾಶ್ಮೀರ
ಭಾರತದ ಅತ್ಯಂತ ಚೆಂದದ ಭಾಗ
ಜಮ್ಮು ಕಾಶ್ಮೀರ !
ಆದರೆ ಅಲ್ಲಿದೆ ಪ್ರತಿದಿನ ಗುಂಡಿನ
ನೆಗಡಿ, ಕೆಮ್ಮು, ದಮ್ಮು, ಜ್ವರ !!

Monday, September 13, 2010

ಏಕ ರೇಖಾ ಗಣಪ ಬಲು ಅಪರೂಪ

ವಿಘ್ನನಿವಾರಕ ಗಣೇಶನ ಚಿತ್ರವನ್ನು ಬಿಡಿಸುವವರು, ಮೂರ್ತಿ ಕೆತ್ತುವವರು ಬಹಳ ಮಂದಿ ಇದ್ದಾರೆ. ಆದರೆ ಕೇವಲ ಒಂದೇ ಸಾಲಿನ ಮೂಲಕ ಗಣೇಶನನ್ನು ಮೂಡಿಸುವ ಚಿತ್ರಕಾರರು ಸ್ವಲ್ಪ ವಿರಳವೆಂದೇ ಹೇಳಬಹುದು. ಈ ರೀತಿಯ ಅಪರೂಪದ ಚಿತ್ರ ಬಿಡಿಸುವುದು ಸವಾಲಿನ ಕೆಲಸವೇ ಸರಿ. ಇಂತಹ ಬಹು ಕಠಿಣ ಕಲೆಯನ್ನು ಒಲಿಸಿಕೊಂಡು ಚಿತ್ರವನ್ನು ರಚಿಸುವ ಕಲಾವಿದರೊಬ್ಬರಿದ್ದಾರೆ. ಅವರೇ ಸೈಯದ್ ಹುಸೈನಿ.
ಲಲಿತಕಲೆಯಲ್ಲಿ ಡಿಪ್ಲೊಮಾ ಮುಗಿಸಿರುವ ಇವರು ಏಕ ರೇಖೆಯಲ್ಲಿ ಗಣೇಶನನ್ನು ಚಿತ್ರಿಸುತ್ತಾರೆ. ಇವರ ಚಿತ್ರದಲ್ಲಿ ಗಣೇಶನ ಕಿರೀಟದಿಂದ ಇಲಿಯ ಬಾಲದವರೆಗೂ ಕೇವಲ ಒಂದೇ ರೇಖೆ ಇರುವುದು ವಿಶೇಷ. ಇದುವರೆಗೆ ಸುಮಾರು 100ಕ್ಕೂ ಹೆಚ್ಚು ಏಕರೇಖಾ ಗಣೇಶನ ಚಿತ್ರ ಬಿಡಿಸಿದ್ದಾರೆ.
ಹುಸೈನಿ ಮೊದಲ ಸಾರಿ ಚಿತ್ರ ಬಿಡಿಸಿದ್ದು ಮೂರನೇ ತರಗತಿಯಲ್ಲಿದ್ದಾಗ. ಆ ನಂತರ ಅವರು ಇದುವರೆಗೂ ಬಹಳಷ್ಟು ಚಿತ್ರಗಳನ್ನು ಬಿಡಿಸಿದ್ದಾರೆ. ಕನರ್ಾಟಕ ವಿಶ್ವವಿದ್ಯಾಲಯದಲ್ಲಿ ಲಲಿತಕಲೆಯಲ್ಲಿ ಪದವಿ ಮುಗಿಸಿರುವ ಇವರಿಗೆ ಚಿತ್ರ ಬಿಡಿಸುವುದು ನೀರು ಕುಡಿದಷ್ಟು ಸುಲಭ.
ಇವರು ಸುಮಾರು 3000ಕ್ಕೂ ಹೆಚ್ಚು ಏಕರೇಖಾ ಚಿತ್ರವನ್ನು ಬಿಡಿಸಿದ್ದಾರೆ. ಕೇವಲ ಗಣೇಶನ ಚಿತ್ರವನ್ನಷ್ಟೇ ಅಲ್ಲ, ಕುದುರೆ ಮುಂತಾದ ಹಲವು ಚಿತ್ರಗಳನ್ನು, ಹಲವು ವ್ಯಕ್ತಿಗಳ ಭಾವ ಚಿತ್ರಗಳನ್ನೂ ರಚಿಸಿದ್ದಾರೆ.
ಏಳೆಂಟು ವರ್ಷಗಳ ಹಿಂದೆ ಗಣೇಶನ ಚಿತ್ರ ಬಿಡಿಸಲು ಪ್ರಾರಂಭಿಸಿದ ಇವರಿಗೆ ಇಂದು ಏಕರೇಖಾ ಗಣೇಶನ ಚಿತ್ರ ಬಿಡಿಸಲು ಕನಿಷ್ಟ ಅರ್ಧ ಗಂಟೆ ಸಾಕು. ಕೆಲವೊಮ್ಮೆ ಕೆಲವು ಚಿತ್ರ ಬಿಡಿಸಲು ದಿನಗಟ್ಟಲೆ ಸಮಯವನ್ನು ತೆಗೆದುಕೊಂಡಿದ್ದೂ ಇದೆ. ಹುಸೈನಿ ಪ್ರಾರಂಭದಲ್ಲಿ ಗಣೇಶನ ಆಯಿಲ್ ಪೇಂಟ್ ಹಾಗೂ ಇತರೆ ಚಿತ್ರಗಳನ್ನು ಬಿಡಿಸುತ್ತಿದ್ದರು. ಆ ನಂತರ ಒಂದು ದಿನ ಗಣೇಶನ ಚಿತ್ರವನ್ನು ಏಕರೇಖೆಯಲ್ಲಿ ಬಿಡಿಸುವ ಆಲೋಚನೆ ಮೂಡಿತು. ಆ ನಂತರ ಕೆಲವು ದಿನಗಳು ಪ್ರಯತ್ನಿಸಿ ಚಿತ್ರ ಬಿಡಿಸಲು ಪ್ರಾರಂಭಿಸಿದರು.
ಚಿಕ್ಕಂದಿನಲ್ಲಿ ಹುಸೈನಿ ಅವರ ತಾಯಿ ಉಲ್ಲನ್ನಿನ ಸ್ವೆಟರ್ ಹಾಕುವ ವೇಳೆ ಇವರು ಆ ಉಲ್ಲನ್ನಿನ ಉಂಡೆಯ ಜೊತೆ ಆಟವಾಡುತ್ತಿದ್ದರು. ಅಷ್ಟೇ ಅಲ್ಲದೆ ಅದರಿಂದ ವಿವಿಧ ಚಿತ್ರಗಳನ್ನು ನೆಲದ ಮೇಲೆ ಮೂಡಿಸುತ್ತಿದ್ದರು. ಇದೇ ಅವರ ಏಕ ರೇಖಾ ಚಿತ್ರಕ್ಕೆ ಸ್ಫೂರ್ತಿ ನೀಡಿತು. ನಂತರ ಅವರ ತಾಯಿ ಹುಸೈನಿ ಅವರ ಕಲೆಗೆ ನೀರೆರೆದು ಪೋಷಿಸಿದರು.
ಚಿಕ್ಕಂದಿನಿಂದಲೆ ಒಲಿದುಬಂದ ಕಲೆಯನ್ನು ಬೆಳೆಸಿಕೊಂಡ ಇವರು ಹಲವು ರೀತಿಯ ಚಿತ್ರಗಳನ್ನು ಬಿಡಿಸಿದ್ದರೂ ಹೆಸರು ಗಳಿಸಿದ್ದು ಏಕರೇಖೆಯ ಗಣಪನ ಚಿತ್ರಗಳ ಮೂಲಕ. ಕಷ್ಟದ ಕಲೆಯಲ್ಲೂ ವಿಭಿನ್ನತೆ ಮೆರೆದ ಇವರು, ನಿಂತಿರುವ ಗಣೇಶ, ಕುಳಿತ ಏಕದಂತ, ಇಲಿಯ ಮೇಲೆ ಗಣೇಶನ ಸವಾರಿ, ನೃತ್ಯ ಮಾಡುತ್ತಿರುವ ಗಣಪ-ಹೀಗೆ ಹಲವು ಬಗೆಯ ಗಣಪನ ಚಿತ್ರಗಳನ್ನು ಬಿಡಿಸಿದ್ದಾರೆ.
ಚಿತ್ರ ಬಿಡಿಸುವುದೇ ಇವರ ವೃತ್ತಿ. ಅವರು ಬಿಡಿಸಿರುವ ಅದೆಷ್ಟೋ ಚಿತ್ರಗಳು ಉತ್ತಮ ಬೆಲೆಗೆ ಮಾರಾಟವಾಗಿವೆ.
ಕೇವಲ ಚಿತ್ರ ಬಿಡಿಸುವುದು ಮಾತ್ರ ಇವರ ಕೆಲಸವಲ್ಲ. ಪೇಪರ್ ಕಟಿಂಗ್ನಲ್ಲೂ ಇವರದ್ದು ಎತ್ತಿದ ಕೈ. ಬಗೆಬಗೆಯ ನಮೂನೆ ಗಳು, ಹಲವು ಆಕಾರಗಳು ಇವರ ಕೈಯಲ್ಲಿ ಅರಳಿವೆ. ಇವರ ಕೈಗೆ ಕುಂಚ ಸಿಕ್ಕರೆ ಹೇಗೆ ಗೆರೆಗಳು ಮಾತನಾಡುತ್ತವೆಯೋ ಹಾಗೆಯೆ ಖಾಲಿ ಪೇಪರ್ ಹಾಗೂ ಕತ್ತರಿ ಸಿಕ್ಕರೆ ಸಾಕು ಅವು ಜೀವ ತಳೆಯುತ್ತವೆ.
ಬೆಂಗಳೂರಿನ ಜಯನಗರದಲ್ಲಿ ವಾಸ ಮಾಡುತ್ತಿರುವ ಹುಸೈನಿ ಏಕರೇಖೆಯ ಚಿತ್ರಕಲೆ ಹಾಗೂ ಪೇಪರ್ ಕ್ರಾಫ್ಟ್ ಬಗ್ಗೆ ಹಲವು ಕಡೆ ತರಬೇತಿ, ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳನ್ನು ನೀಡಿದ್ದಾರೆ. 34 ವರ್ಷದ ಹುಸೈನಿ ಮೂಲತಃ ಮಂಡ್ಯ ಜಿಲ್ಲೆಯ ಶಿವನಸಮುದ್ರದವರು.
ಅಂಚೆಕುಂಚ ಪ್ರಶಸ್ತಿಯನ್ನು ನಾಲ್ಕು ಸಾರಿ ಮುಡಿಗೇರಿಸಿ ಕೊಂಡಿರುವ ಹುಸೈನಿ 2009ರಲ್ಲಿ ಜಪಾನ್ ಹಬ್ಬದಲ್ಲೂ ಭಾಗವಹಿಸಿ ಬಂದಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ, ಧಾರವಾಡ ಮುಂತಾದ ಕಡೆಗೆಲ್ಲ ಇವರು ಏಕವ್ಯಕ್ತಿ ಪ್ರದರ್ಶನ ಗಳನ್ನು ನೀಡಿದ್ದಾರೆ. ಹುಸೈನಿ ಅವರನ್ನು 9845153277. ಈ ಸಂಖ್ಯೆ ಮೂಲಕ ಸಂಪರ್ಕಿಸಬಹುದು.

Tuesday, August 24, 2010

ವಿದ್ಯುತ್ ಬಿಲ್ ಗೆ ವಿನಾಯಿತಿ ಇಲ್ಲವೆ?

ಕರ್ನಾಟಕ ವಿದ್ಯುತ್ ಮಂಡಳಿ ಪ್ರತಿ ಸಾರಿ ವಿದ್ಯುತ್ ಬಿಲ್ ನೀಡುವಾಗಲೂ ಅದರಲ್ಲಿ ಅಧಿಕ ಪ್ರಮಾಣದ ಮೇಲೆ ದಂಡ ಎಂಬ ವಾಖ್ಯವೊಂದು ಕಾಣಿಸುತ್ತದೆ. ಈ ಬಗ್ಗೆ ಇಲಾಖೆಯಯನ್ನು ಕೇಳಿದರೆ ನಿಗದಿತ ಪ್ರಮಾಣಕ್ಕಿಂತ ಅಧಿಕ ವಿದ್ಯುತ್ ಬಳಸಿದರೆ ಈ ದಂಡವನ್ನು ಹಾಕಲಾಗುತ್ತದೆ ಎಂದು ಹೇಳುತ್ತಾರೆ. ಹೆಚ್ಚಿನ ವಿದ್ಯುತ್ ಬಳಸಿದಾಗ ಹೆಚ್ಚಿನ ದಂಡವನ್ನೂ ಹಾಕಿದ ಉದಾಹರಣೆಗಳಿವೆ.
ಆದರೆ ನನ್ನಲ್ಲಿ ಮೂಡುತ್ತಿರುವ ಪ್ರಶ್ನೆ ಇಷ್ಟೇ. ವಿದ್ಯುತ್ತನ್ನು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿಗೆ ಬಳಸಿದಾಗ ದಂಡ ಹಾಕುವ ವಿದ್ಯುತ್ ಇಲಾಖೆ ಅತ್ಯಲ್ಪ ಪ್ರಮಾಣದಲ್ಲಿ ವಿದ್ಯುತ್ ಬಳಸುವ ಕುಟುಂಬಗಳಿಗೆ ವಿನಾಯಿತಿ ಯಾಕೆ ನೀಡುವುದಿಲ್ಲ?
ಕೆಲವು ಕುಟುಂಬಗಳು ತಿಗಳಿಗೆ 10 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಸುತ್ತವೆ. ಅವುಗಳ ವಿದ್ಯುತ್ ಬಿಲ್ ಮೊತ್ತ 50 ರೂಪಾಯಿಗಳನ್ನೂ ಮುಟ್ಟುವುದಿಲ್ಲ. ಇಂತಹ ಕುಟುಂಬಗಳ ವಿದ್ಯುತ್ ಬಿಲ್ಗೆ ವಿನಾಯಿತಿಯನ್ನು ಇಲಾಖೆ ನೀಡದೇ ಇರುವುದು ವಿಚಿತ್ರ ಎನಿಸುತ್ತದೆ.
ಇಲಾಖೆ ಈ ಬಗ್ಗೆ ತಕ್ಷಣ ಚಿಂತಿಸಿ ವಿದ್ಯುತ್ ಬಿಲ್ ವಿನಾಯಿತಿಯನ್ನು ನೀಡುತ್ತದೆ ಎಂಬುದು ನಮ್ಮ ಆಶಯ.

Monday, August 23, 2010

`ಆಸರೆ' ಸಖ್ಯವಾಗುವಂತಾದರೆ...

ಅಲ್ಲಲ್ಲಿ ಮೂತ್ರದ ವಾಸನೆ, ಎಲ್ಲೆಂದರಲ್ಲಿ ಬಿದ್ದುಕೊಂಡಿರುವ ಭಿಕ್ಷುಕರು, ಸುಕ್ಕು ಗಟ್ಟಿದ ಮುಖ. ಹರಡಿಕೊಂಡ ತಲೆಕೂದಲು, ಆ ಕೂದಲುಗಳಿಗೆ ಎಣ್ಣೆಯಿಲ್ಲ, ದೇಹಕ್ಕೆ ಸ್ನಾನವಿಲ್ಲ. ಎತ್ತ ನೋಡಿದರತ್ತ ಕೊಳಕು, ಅಸಹ್ಯ ವಾತಾವರಣ, ಕೆಲವರು ಕಾಯಿಲೆಯಿಂದ ನರಳುತ್ತಿರುವವರು. ಇಂತಹವರನ್ನು ಸರಿಯಾಗಿ ನೋಡುವವರಿಲ್ಲ. ಸ್ನಾನ ಮಾಡಿಸುವವರಿಲ್ಲ. ದನದ ಕೊಟ್ಟಿಗೆಯಂತೆ ಕಾಣುವ ಕೊಠಡಿಗಳು. ಇದು  ಬೆಂಗಳೂರು ಮಹಾನಗರಿಯ ನಿರಾಶ್ರಿತರ ಕೇಂದ್ರದಲ್ಲಿ ಕಂಡುಬಂದ ಸ್ಥಿತಿ-ಗತಿ. ಇದೇ ಸುಮನಹಳ್ಳಿಯಲ್ಲಿರುವ ನಿರಾಶ್ರಿತರ ಕೇಂದ್ರದ ಪರಿಸ್ಥಿತಿ.
ಬೀದಿ ಬದಿಯಲ್ಲಿ ಭಿಕ್ಷೆ ಬೇಡುವ ಭಿಕ್ಷುಕರಿಗೆ ಪುನರ್ವಸತಿ ನೀಡಬೇಕೆಂದು ಸ್ಥಾಪಿಸಲಾಗಿರುವ ಈ ಕೇಂದ್ರದಲ್ಲಿನ ಸರಣಿ ಸಾವು ಮತ್ತು ಅದರ ದುಸ್ಥಿತಿಯಿಂದಾಗಿ ಈಗ ಸುದ್ದಿ ಮಾಡಿದೆ.
ಈ ಭಿಕ್ಷುಕರ ಪುನರ್ವಸತಿ ಕೇಂದ್ರದ ಒಳಗೆ ಕಾಲಿಟ್ಟರೆ ಸಾಕು ಅಸಹ್ಯಕರ ವಾತಾವರಣ. ಆರೋಗ್ಯವಂತರು, ಅನಾರೋಗ್ಯಕ್ಕೊಳಗಾದವರು, ಬಡಕಲು ಶರೀರದವರು ಹೀಗೆ ವಿವಿಧ ರೀತಿಯ ನಿರಾಶ್ರಿತರು, ಭಿಕ್ಷುಕರ ಕಣ್ಣುಗಳಲ್ಲಿನ ಯಾಚನೆ, ಅಸಹಾಯಕ ನೋಟ ಎಂತಹವರಲ್ಲಾದರೂ ಮರುಕ ಹುಟ್ಟಿಸುತ್ತದೆ.
ಎಲ್ಲೋ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕರನ್ನು ಹಿಡಿದು ತಂದು ಈ ನಿರಾಶ್ರಿತರ ಶಿಬಿರದಲ್ಲಿಡಲಾಗಿದೆ. ಈ ಭಿಕ್ಷುಕರ ದುಸ್ಥಿತಿ ಹೇಳತೀರದು. ಸರಿಯಾದ ಆಹಾರವಿಲ್ಲದೆ, ದಿನನಿತ್ಯ ಸ್ನಾನವಿಲ್ಲ, ರೋಗಬಂದರೆ ಸೂಕ್ತ ಚಿಕಿತ್ಸೆಯಿಲ್ಲ, ಇನ್ನೊಂದು ರೀತಿಯಲ್ಲಿ ಹೇಳಬೇಕೆಂದರೆ ಈ ಭಿಕ್ಷುಕರದ್ದು ನಾಯಿಪಾಡು ಎಂದರೂ ತಪ್ಪಾಗಲಾರದು.
ಈ ಜನರ ಪಾಲಿಗೆ ಯಾವುದಾದರೂ ಸರ್ಕಾರಿ ಕಾರ್ಯಕ್ರಮಗಳು ಬಂತೆಂದರೆ ಹಬ್ಬ. ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ ಮುಂತಾದ ಸಕರ್ಾರಿ ಕಾರ್ಯಕ್ರಮಗಳಂದು ಇವರಿಗೆ ಸಿಹಿ ತಿಂಡಿ ಹಾಗೂ ವಿಶೇಷ ಊಟಗಳು ಲಭ್ಯ. ಇಲ್ಲದಿದ್ದರೆ ಹಳಸಲನ್ನವೇ ಗತಿ.
ಈ ಪುನರ್ವಸತಿ ಕೇಂದ್ರದಲ್ಲಿ ಅಲ್ಲಲ್ಲಿ ಅಡ್ಡಾಡುತ್ತಿರುವ ಭಿಕ್ಷುಕರು ಒಂದೆಡೆಯಾದರೆ, ಲೋಕದ ಪರಿವೆಯೆ ಇಲ್ಲದಂತೆಮಲಗಿಕೊಂಡಿರುವವರು ಮತ್ತೊಂದೆಡೆ. ಇನ್ನು ಈ ಕೇಂದ್ರದಲ್ಲಿರುವ ಹಲವು ಭಿಕ್ಷುಕರು ಬುದ್ದಿಮಾಂದ್ಯರು. ಇವರನ್ನು ಇಲ್ಲಿ ಯಾರೂ ಕೇಳುವವರೇ ಇಲ್ಲ.
 ಇವರನ್ನು ನೋಡಿಕೊಳ್ಳುತ್ತಿರುವ ಸಿಬ್ಬಂದಿಗಳು ತಮಗೆ ಬೇಕಾದ ಎಲ್ಲ ಕೆಲಸಗಳನ್ನು ಈ ಭಿಕ್ಷುಕರ ಕೈಯಲ್ಲಿ ಮಾಡಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಗಾಯಾಳುಗಳಿಗೆ ಸೂಕ್ತ ಔಷಧ ನೀಡದ ಪರಿಣಾಮ ಗಾಯದಿಂದ ಕೀವು ಸೋರುತ್ತಿದ್ದ ದೃಶ್ಯವೂ ಕಾಣಬಹುದಾಗಿತ್ತು.
ಈ ವಸತಿಗೃಹವೂ ಅಷ್ಟೇ. ಅದರ ಒಳಗೆ ಕಾಲಿಟ್ಟರೆ ಸಾಕು ಗಬ್ಬು ವಾಸನೆ. ರೋಗಗಳಿಂದ ಹಾಸಿಗೆ ಹಿಡಿದ ಭಿಕ್ಷುಕರು ಅಲ್ಲೆ ಮಲ, ಮೂತ್ರ ವಿಸರ್ಜನೆ ಮಾಡಿಕೊಂಡಿದ್ದರಿಂದ ಒಳಗಡೆ ಗಬ್ಬು ವಾಸನೆ. ಇಂತಹ ವಾತಾವರಣದಲ್ಲೇ ಅವರು ಮಲಗಿ ನಿದ್ರಿಸಬೇಕಾಗುತ್ತದೆ. ಇವರು ಊಟ ಮಾಡುವ ಕೋಣೆಯ ಪರಿಸ್ಥಿತಿಯೂ ಭಿನ್ನವಾಗೇನೂ ಇಲ್ಲ. ಶುಚಿತ್ವ ಇಲ್ಲದ ಈ ಕೋಣೆಯಲ್ಲಿಯೇ ಊಟ ನೀಡಲಾಗುತ್ತಿದೆ.
ಭಿಕ್ಷುಕರಲ್ಲಿ ಹಲವರು ಸಾಂಕ್ರಾಮಿಕ ರೋಗಗಳಿಂದ ನರಳುತ್ತಿದ್ದಾರೆ. ಆದರೆ ಇವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡುವ ಕೆಲಸ ನಡೆದಿಲ್ಲ. ಇವರನ್ನೂ ಆರೋಗ್ಯವಂತ ವ್ಯಕ್ತಿಗಳ ಜೊತೆ ಇರಿಸಲಾಗುತ್ತಿದೆ. ಇದರಿಂದ ಆರೋಗ್ಯವಂತರೂ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಜೊತೆಗೆ ಬುದ್ಧಿಮಾಂದ್ಯರ ಜೊತೆಗೆ ಆರೋಗ್ಯವಂತ ಭಿಕ್ಷುಕರನ್ನು ಇಡಲಾಗುತ್ತಿದೆ. ಇದು ಆರೋಗ್ಯವಂತ ಭಿಕ್ಷುಕರ ಮೇಲೆ ತೀವ್ರವಾದ ಪರಿಣಾಮ ಉಂಟು ಮಾಡುತ್ತಿದೆ.
 ಈ ನರಕದ ಸಹವಾಸ ಸಾಕು ಎಂದೇ ಹಲವು ಭಿಕ್ಷುಕರು ಅಲ್ಲಿಂದ ತಪ್ಪಿಸಿಕೊಂಡಿದ್ದಾರೆ ಎಂಬ ಮಾತು ಕೇಳಿಬಂದಿದೆ. ಕೆಲವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿ ವಿಫಲರಾಗಿದ್ದಾರೆ.
ಈ ಕೇಂದ್ರದಲ್ಲಿ ಈಗಾಗಲೆ 286 ಜನರು ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಒಟ್ಟಿನಲ್ಲಿ ಬೆಂಕಿಯಿಂದ ಬಾಣಲೆಗೆ ಹಾಕಿದಂತಾಗಿದೆ ಈ ಭಿಕ್ಷುಕರ ಸ್ಥಿತಿ. ಕಳೆದ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯರೂಪ್ಪ ಅವರು ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸ್ಥಿತಿಯನ್ನು ಅರಿತಿದ್ದು, ಈ ನಿರಾಶ್ರಿತರ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿ ಮಾಡುವ ಆಶ್ವಾಸನೆ ನೀಡಿದ್ದಾರೆ. ಇದು ಕಾರ್ಯರೂಪಕ್ಕೆ ಆದಷ್ಟು ಬೇಗ ಬಂದು, ನಿರಾಶ್ರಿತರಿಗೆ `ಆಸರೆ' ನೀಡುತ್ತಿರುವ ಕೇಂದ್ರವು ಅಲ್ಲಿರುವವರಿಗೆ ಸಖ್ಯವಾಗುವಂತಾದರೆ ಸ್ಥಾಪನೆಯ ಉದ್ದೇಶವೂ ಸಾರ್ಥಕವಾಗುತ್ತದೆ.

Saturday, August 21, 2010

ಮನ ಸೆಳೆಯುವ ಉತ್ತರ ಕನ್ನಡ ಜಲಪಾತಗಳು

ಉತ್ತರ ಕನ್ನಡ ಜಿಲ್ಲೆಯಲ್ಲಿ ನೂರಾರು ಸುಂದರ ಜಲಪಾತಗಳಿವೆ. ಸುರಿಯುತ್ತಿರುವ ಮುಂಗಾರಿನಿಂದ ಇಲ್ಲಿನ ಜಲಪಾತಗಳಿಗೆ ಮತ್ತೆ ಜೀವಕಳೆ ಬಂದಿದೆ. ಮುಂಗಾರಿನಲ್ಲಿ ಹೊಸ ಜೀವ ಪಡೆಯುವ ಈ ಜಲಪಾತಗಳು ಎಲ್ಲರ ಆಕರ್ಷಣೆಯ ತಾಣಗಳು. ಮಳೆ ಹನಿಯಿಂದಾಗಿ ಮನಸೆಳೆಯುತ್ತಿರುವ ಈ ಜಲಪಾತಗಳ ಬಗ್ಗೆ ಕಿರು ಪರಿಚಯ ಹೀಗಿದೆ.

ಬಳುಕುವ ಉಂಚಳ್ಳಿ ಜಲಪಾತ
ಅಘನಾಶಿನಿ ನದಿಯಿಂದ ಸೃಷ್ಟಿಯಾಗುವ ಈ ಜಲಪಾತವನ್ನು ಲೂಷಿಂಗ್ಟನ್ ಜಲಪಾತ ಎಂಬ ಹೆಸರಿನಿಂದಲೂ ಕರೆಯಲಾಗುತ್ತದೆ. ಶಿರಸಿಯಿಂದ 30 ಕಿಲೋಮೀಟರ್ ಅಂತರದಲ್ಲಿರುವ ಈ ಜಲಪಾತದ ಎತ್ತರ 116 ಮೀಟರ್. 1845ರಲ್ಲಿ ಉತ್ತರ ಕನ್ನಡದಲ್ಲಿ ಸವರ್ೇ ಕಾರ್ಯ ನಿರ್ವಹಿಸುತ್ತಿದ್ದ ಬ್ರಿಟೀಷ್ ಅಧಿಕಾರಿ ಜೆ. ಡಿ. ಲೂಷಿಂಗ್ಟನ್ ಈ ಜಲಪಾತವನ್ನು ಕಂಡುಹಿಡಿದ ಎಂಬ ಮಾಹಿತಿಯಿದೆ. ಆದ್ದರಿಂದ ಈ ಜಲಪಾತವನ್ನು ಲೂಷಿಂಗ್ಟನ್ ಜಲಪಾತ ಎಂದು ಕರೆಯುತ್ತಾರೆ. ಈ ಜಲಪಾತದ ನೀರು ಬೀಳುವಾಗ ಭಾರಿ ದೊಡ್ಡ ಶಬ್ದ ಉಂಟುಮಾಡುತ್ತದೆ. ಆ ಕಾರಣದಿಂದ ಸ್ಥಳೀಯರು ಈ ಜಲಪಾತವನ್ನು `ಕೆಪ್ಪ ಜೋಗ' ಎಂದು ಕರೆಯುತ್ತಾರೆ. ವರ್ಷದ ಎಲ್ಲ ಕಾಲದಲ್ಲಿಯೂ ಈ ಜಲಪಾತದ ದರ್ಶನ ಲಭ್ಯ. ಮಳೆಗಾಲದಲ್ಲಂತೂ ಇದು ರುದ್ರರಮಣೀಯ.

ಸೊಬಗಿನ ಸಾತೊಡ್ಡಿ ಜಲಪಾತ
ಯಲ್ಲಾಪುರ ತಾಲೂಕಿನಲ್ಲಿರುವ ಈ ಜಲಪಾತ ತಾಲೂಕಿನ ಮುಖ್ಯ ಪಟ್ಟಣದಿಂದ 30 ಕಿ.ಮಿ ದೂರದಲ್ಲಿದೆ. ಕಾಳಿ ನದಿಯ ಉಪ ನದಿಯಿಂದ ಸೃಷ್ಟಿಯಾಗುವ ಈ ಜಲಪಾತವನ್ನು ಮಿನಿ ಜೋಗ ಎಂದೂ ಕರೆಯುತ್ತಾರೆ. ನಿಸರ್ಗದ ನಟ್ಟ ನಡುವೆ ಇರುವ ಈ ಜಲಪಾತ ಮಳೆಗಾಲದಲ್ಲಿ ಅತ್ಯಂತ ಆಕರ್ಷಣೀಯ. ಬಳುಕುತ್ತಾ ಕಮರಿಗೆ ಇಳಿಯುವ ಈ ಜಲಪಾತದ ಸೊಬಗು ವರ್ಣನಾತೀತ. ಜಲಪಾತದ ದಾರಿಯಲ್ಲಿ ಕಾಣಸಿಗುವ ಕಾಳಿ ಹಿನ್ನೀರಿನ ದೃಶ್ಯ ಪ್ರವಾಸಿಗರಿಗೆ ಬೋನಸ್ ಖುಷಿ ನೀಡುತ್ತದೆ.

ಹೊಳೆಯುವ ಬೆಣ್ಣೆಹೊಳೆ ಜಲಪಾತ
ಅಘನಾಶಿನಿಯ ಉಪನದಿಯ ಸೃಷ್ಟಿ ಈ ಬೆಣ್ಣೆಹೊಳೆ ಜಲಪಾತ. ದಟ್ಟ ಕಾನನದ ನಡುವೆ ಇರುವ ಈ ಜಲಪಾತದ ಎತ್ತರ 200 ಅಡಿಗಿಂತ ಹೆಚ್ಚು. ಜಲಪಾತಕ್ಕೆ ಸಾಗುವ ಮಾರ್ಗ ಕೊಂಚ ಕಷ್ಟಕರವಾದುದು. ಆದರೆ ಕಣ್ಮನ ಸೆಳೆಯುವ ದೃಶ್ಯವೈಭವ ಜಲಪಾತದಿಂದ ಸಾಧ್ಯ. ಶಿರಸಿಯಿಂದ ಕುಮಟಾ ಕಡೆಗೆ ಸಾಗುವ ದಾರಿಯ ನಡುವೆ ಈ ಜಲಪಾತದ ಮಾರ್ಗ ಸಿಗುತ್ತದೆ. ಅತ್ಯುತ್ತಮ ಟ್ರೆಕ್ಕಿಂಗ್ ಸ್ಪಾಟ್. ಮಳೆಗಾಲದಲ್ಲಿ ಜಲಪಾತದ ಬಳಿ ಸಾಗುವುದು ಅಪಾಯಕಾರಿ. ಆದರೆ ಉಳಿದ ಕಾಲಗಳಲ್ಲಿ ಜಲಪಾತದ ದರ್ಶನಕ್ಕೆ ಹೇಳಿಮಾಡಿಸಿದ ಹಾಗಿದೆ. ಕಾಡು, ಕಾಡುಪ್ರಾಣಿಗಳ ಪ್ರದೇಶ ಇದು.

ಅಭಯಾರಣ್ಯದ ಒಡಲಿನ ಕೂಸು ಅಣಶಿ ಜಲಪಾತ
ಕಾರವಾರ ದಾಂಡೆಲಿ ಮಾರ್ಗ ಮಧ್ಯ ಇರುವ ಅಣಶಿ ಜಲಪಾತ ನೋಡುಗರನ್ನು ತಟ್ಟನೆ ಸೆಳೆಯುವಂತಹುದು. ಅಣಶಿ ರಾಷ್ಟ್ರೀಯ ಉದ್ಯಾನದ ನಡುವೆ ಇರುವ ಈ ಜಲಪಾತ ಕಾರವಾರದಿಂದ 32 ಕಿಲೋಮೀಟರ್ ದೂರದಲ್ಲಿದೆ. ಪಶ್ಚಿಮ ಘಟ್ಟದ ಹಾಗೂ ಕಾನನದ ನಡುವೆ ಇರುವ ಈ ಜಲಪಾತ ಮಳೆಗಾಲದಲ್ಲಿ ಮೈದುಂಬುತ್ತದೆ. ಈ ಜಲಪಾತ ಹಲವು ಹಂತಗಳಲ್ಲಿ ಧುಮ್ಮಿಕ್ಕುತ್ತದೆ. ಇದರ ಎಲ್ಲರ 150 ಅಡಿಗಳು. ಈ ಜಲಪಾತ ಛಾಯಾಚಿತ್ರಕಾರರಿಗೆ ಹಬ್ಬ ಉಂಟುಮಾಡುತ್ತದೆ. ಕದ್ರಾ ಅಣೆಕಟ್ಟೆಯಿಂದ 8 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತ ರಸ್ತೆ ಪಕ್ಕದಲ್ಲಿಯೇ ಇರುವುದರಿಂದ ಇದರ ಬುಡಕ್ಕೆ ತಲುಪಲು ಕಷ್ಟಪಡಬೇಕಿಲ್ಲ.


ಲವಲವಿಕೆಯ ಲಾಲಗುಳಿ ಜಲಪಾತ
ಮಳೆಗಾಲದಲ್ಲಿ ಮೈದುಂಬುವ ಜಲಪಾತಗಳ ಜಾತಿಗೆ ಇದು ಸೇರುತ್ತದೆ. ಕಾಳಿ ನದಿಗೆ ಬೊಮ್ಮನಹಳ್ಳಿಯಲ್ಲಿ ಅಣೆಕಟ್ಟು ನಿಮರ್ಾಣವಾಗುವ ಮೊದಲು ವರ್ಷದ ಎಲ್ಲ ಕಾಲದಲ್ಲಿಯೂ ಕಾಣಸಿಗುತ್ತಿದ್ದ ಈ ಜಲಪಾತ ಈಗ ಮಳೆಗಾಲದಲ್ಲಿ ಮಾತ್ರ ಮೈದುಂಬುತ್ತದೆ. ಯಲ್ಲಾಪುರದಿಂದ 13 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತ ಧುಮ್ಮಿಕ್ಕುವುದನ್ನು ನೋಡುವುದು ಬಲು ಅಂದ.



ಮನ ಸೆಳೆಯುವ ಮಾಗೋಡು ಜಲಪಾತ
ಯಲ್ಲಾಪುರದಿಂದ 20 ಕಿಲೋಮೀಟರ್ ದೂರದಲ್ಲಿರುವ ಮಾಗೋಡು ಜಲಪಾತ ಬೇಡ್ತಿ (ಗಂಗಾವಳಿ) ನದಿಯ ಸೃಷ್ಟಿ. 200 ಮೀಟರ್ ಎತ್ತರದಿಂದ ಧುಮ್ಮಿಕ್ಕುವ ಈ ಜಲಪಾತವನ್ನು ವರ್ಷದ ಎಲ್ಲ ಕಾಲದಲ್ಲಿಯೂ ವೀಕ್ಷಿಸಬಹುದು. ಮಳೆಗಾಲದಲ್ಲಿ ರುದ್ರರಮಣೀಯವಾಗಿ ಕಾಣುವ ಈ ಜಲಪಾತ ಎರಡು ಹಂತಗಳಲ್ಲಿ ದುಮ್ಮಿಕ್ಕುತ್ತದೆ. ಈ ಜಲಪಾತದ ಬಳಿ ವೀಕ್ಷಣಾ ಗೋಪುರ ನಿಮರ್ಿಸಿರುವ ಪ್ರವಾಸೋದ್ಯಮ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಜಲಪಾತದವರೆಗೂ ಉತ್ತಮ ರಸ್ತೆ ಇರುವುದರಿಂದ ಯಾವುದೆ ಕಾಲದಲ್ಲಿಯೂ ಪ್ರವಾಸ ಮಾಡಬಹುದಾಗಿದೆ.

ಭಯ ಹುಟ್ಟಿಸುವ ಬುರುಡೆ ಜಲಪಾತ
ಮಲೆನಾಡ ಮಡಿಲಿನಲ್ಲಿರುವ ಈ ಸುಂದರ ಜಲಪಾತ ಅಘನಾಶಿನಿ ನದಿಯ ಉಪನದಿಯ ಸೃಷ್ಟಿ. ನಾಲ್ಕು ಹಂತಗಳಲ್ಲಿ ದುಮ್ಮಿಕ್ಕುವ ಈ ಜಲಪಾತ ವೀಕ್ಷಣೆ ಮಾಡಲು ಮಳೆಗಾಲದಲ್ಲಿ ಹೋಗಲು ಸಾಧ್ಯವೇ ಇಲ್ಲ. ಸಿದ್ದಾಪುರದಿಂದ 20 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತ ದರ್ಶನ ಮಾಡಬೇಕೆಂದರೆ ಕನಿಷ್ಟ 6 ಕಿಲೋಮೀಟರ್ ನಡಿಗೆಯನ್ನು ಕೈಗೊಳ್ಳಲೇಬೇಕು. ಇಳಿಮನೆ ಜಲಪಾತ ಎಂದೂ ಕರೆಯಲಾಗುವ ಈ ಜಲಪಾತದ ಎರಡು ಹಂತಗಳನ್ನು ಸುಲಭವಾಗಿ ನೋಡಬಹುದು.

ಸ್ನಿಗ್ಧ ಸುಂದರ ವಿಭೂತಿ ಜಲಪಾತ
ಶಿರಸಿಯಿಂದ 40 ಕಿಲೋಮೀಟರ್ ದೂರದಲ್ಲಿರುವ ವಿಭೂತಿ ಜಲಪಾತ ವಿಭೂತಿ ಹೊಳೆಯ ಸೃಷ್ಟಿ. ವಿಶ್ವ ಪ್ರಸಿದ್ಧ ಯಾಣದ ಹತ್ತಿರದಲ್ಲಿರುವ ಈ ಜಲಪಾತದ ಎತ್ತರ 100 ಅಡಿಗಿಂತ ಹೆಚ್ಚು. ಎರಡು ಹಂತಗಳಲ್ಲಿ ದುಮ್ಮಿಕ್ಕುವ ಈ ಜಲಪಾತ ಮಳೆಗಾಲದಲ್ಲಿ ಬಹಳ ಸುಂದರವಾಗಿ ಕಾಣಿಸುತ್ತದೆ. ವರ್ಷದ ಎಲ್ಲ ಸಮಯದಲ್ಲಿಯೂ ಜಲಪಾತವನ್ನು ನೋಡಬಹುದು. ನಿಸರ್ಗದ ನಡುವೆ ಇರುವ ಈ ಜಲಪಾತ ಒಳ್ಳೆಯ ಪಿಕ್ನಿಕ್ ಸ್ಪಾಟ್.


ಶಿವಗಂಗಾ ಜಲಪಾತ
74 ಅಡಿ ಎತ್ತರದ ಶಿವಗಂಗಾ ಜಲಪಾತ ಶಿರಸಿಯಿಂದ 22 ಕಿಲೋಮೀಟರ್ ದೂರದಲ್ಲಿದೆ. ಸೋಂದಾ ಹೊಳೆಯಿಂದ ಸೃಷ್ಟಿಯಾಗಿರುವ ಈ ಜಲಪಾತ ದಟ್ಟ ಕಾಡಿನ ನಡುವೆ ಇದೆ. ಮಳೆಗಾಲದಲ್ಲಿ ಬಹಳ ಸುಂದರವಾಗಿ ಕಾಣುವ ಈ ಜಲಪಾತ ಅತ್ಯಂತ ಅಪಾಯಕಾರಿಯಾದುದು. ಜಲಪಾತಕ್ಕೆ ಸಾಗುವ ಮಾರ್ಗದಲ್ಲಿ ಸೋಂದಾ, ವಾದಿರಾಜ ಮಠ ಮುಂತಾದ ಕ್ಷೇತ್ರಗಳಿವೆ. ಅವುಗಳನ್ನು ನೋಡಿ ಬರಲು ಸಾಧ್ಯ.


ಕಾನನದ ಮಡಿಲ ವಾಟೆಹಳ್ಳ ಜಲಪಾತ
ಪಶ್ಚಿಮ ಘಟ್ಟದ ದಟ್ಟ ಕಾಡಿನ ಮಧ್ಯದಲ್ಲಿರುವ ಜಲಪಾತ ವಾಟೆಹಳ್ಳ. ಹಲವು ಹಂತಗಳಲ್ಲಿ ಧುಮ್ಮಿಕ್ಕುಪ ಈ ಜಲಪಾತದ ಸೊಬಗು ಬಹು ಸುಂದರ. ಸಿದ್ದಾಪುರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತವನ್ನು ಮಳೆಗಾಲದಲ್ಲಿ ವೀಕ್ಷಣೆ ಮಾಡಲು ಸಾಧ್ಯವೇ ಇಲ್ಲ. ನಿಲ್ಕುಂದ ಬಳಿ ಇರುವ ಈ ಜಲಪಾತವನ್ನು ವೀಕ್ಷಿಸಲು ಕನಿಷ್ಟ 2 ಕಿಲೋಮೀಟರ್ ಕಾಲ್ನಡಿಗೆ ಸವೆಸಬೇಕು. ಕಡಿದಾದ ಬೆಟ್ಟವನ್ನು ಜಾಗ್ರತೆಯಿಂದ ಇಳಿದರೆ ಇದರ ದರ್ಶನ ಸಾಧ್ಯ. ಅದೃಷ್ಟವಿದ್ದರೆ ವನ್ಯ ಮೃಗಗಳೂ ಕಾಣಬಹುದು. ಹಲವು ಹಂತಗಳು ಜಲಪಾತಕ್ಕೆ ಇದ್ದರೂ ಒಂದೆ ದಿನದಲ್ಲಿ ಅವುಗಳಷ್ಟನ್ನೂ ನೋಡುವುದು ಕಷ್ಟ. ಚಿಕ್ಕ ಹಳ್ಳ ಸೃಷ್ಟಿಸಿದ ಈ ಜಲಪಾತ ನೋಡುಗರನ್ನು ಸೇಳೆಯುತ್ತದೆ. ಒಳ್ಳೆಯ ಟ್ರೆಕ್ಕಿಂಗ್ ತಾಣ

ಇಷ್ಟೇ ಅಲ್ಲದೆ ಉತ್ತರ ಕನ್ನಡದಲ್ಲಿ ಇನ್ನೂ ಹಲವಾರು ಜಲಪಾತಗಳಿವೆ. ಪಶ್ಚಿಮ ಘಟ್ಟಗಳ ಶ್ರೇಣಿ ಈ ಜಿಲ್ಲೆಯಲ್ಲಿ ಹಾದುಹೋಗುತ್ತದೆ. ಈ ಪಶ್ಚಿಮ ಘಟ್ಟ ಶ್ರೇಣಿಯಲ್ಲಿ ನೂರಾರು ಜಲಪಾತಗಳಿವೆ. ಮಳೆಗಾಲ ಬಂತೆಂದರೆ ಈ ಜಲಪಾತಗಳಿಗೆ ಮತ್ತೆ ಜೀವಕಳೆ ಬರುತ್ತವೆ. ತುಂಬ್ರಿಕೊಡ್ಲು, ಸೂಸಬ್ಬಿಕೊಡ್ಲು, ವಜ್ರದುಂಡಿ, ಮುರೇಗಾರ, ಕರೂರು ಈ ಮುಂತಾದ ಹಲವಾರು ಜಲಪಾತಗಳು ಉತ್ತರ ಕನ್ನಡದ ಕಾನನದ ನಡುವೆ ಇವೆ. ಮಳೆಗಾಲದಲ್ಲಿ ಇವುಗಳು ನಯನಮನೋಹರ.

Thursday, August 19, 2010

ಇವರಿಗೆ ವಯಸ್ಸೇ ಆಗೋಲ್ವಾ?



ಭಾರತದ ವಿವಿಎಸ್ ಲಕ್ಷ್ಮಣ್, ಸಚಿನ್ ತೆಂಡೂಲ್ಕರ್, ಶ್ರೀಲಂಕಾದ ಸನತ್ ಜಯಸೂರ್ಯ, ವೆಸ್ಟ್ ಇಂದಿಸ ನ ಶಿವನಾರಾಯಣ್ ಚಂದ್ರಪಾಲ್, ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ ಈ ಮುಂತಾದ ಕ್ರಿಕೆಟ್ ಆಟಗಾರರ ಉತ್ಸಾಹವನ್ನು, ಆಟದ ವೈಖರಿಯನ್ನು ಗಮನಿಸಿದರೆ ಇವರಿಗೆ ವಯಸ್ಸೇ ಆಗುವುದಿಲ್ಲವೇ ಎಂಬ ಪ್ರಶ್ನೆ ಹಲವರ ಮನಸ್ಸಿನಲ್ಲಿ ಮೂಡುತ್ತದೆ.
ಈ ಎಲ್ಲ ಆಟಗಾರರಿಗೆ 35ರ ಆಜುಬಾಜು ವಯಸ್ಸು. ಆದರೆ ಇವರ ಕಲಾತ್ಮಕ ಆಟಗಳು ಮಾತ್ರ ಯುವ ಹೊಡೆಬಡಿ ಆಟಗಾರರನ್ನು ಮೀರಿಸುವಂತಿದೆ. ಯುವ ಆಟಗಾರರು ಕ್ರೀಸಿನಲ್ಲಿ ನೆಲೆನಿಂತು ಬಾಲನ್ನು ಎದುರಿಸಲು ಪರದಾಡುವ ಸಮಯದಲ್ಲಿಯೇ ಇವರು ಆಟದ ಮರ್ಮ ಅರಿತು ಸಮಯಕ್ಕೆ ತಕ್ಕಂತೆ ಆಟವಾಡುತ್ತಾರೆ.
ಈ ಆಟಗಾರರದ್ದು ಎಲ್ಲ ರೀತಿಯ ಕ್ರೀಡೆಗೆ ಹೇಳಿಮಾಡಿಸಿದಂತಹ ಆಟ. ಅದು ಟೆಸ್ಟ್ ಇರಲಿ. ಒಂದು ದಿನದ ಪಂದ್ಯಗಳೇ ಇರಲಿ ಅಥವಾ ಇಂದಿನ ಜಮಾನಾದ ಟಿ20 ಪಂದ್ಯಗಳೇ ಇರಲಿ ಅಗತ್ಯಕ್ಕೆ ತಕ್ಕ ಆಟ ಇವರಿಂದ ಸಾಧ್ಯ. ಯುವ ಆಟಗಾರರು ಪ್ರತಿ ಪಂದ್ಯಗಳಲ್ಲಿ ಒಂದೇ ರೀತಿಯ ಆಟವನ್ನು ಪ್ರದರ್ಶಿಸಲು ವಿಫಲರಾಗುತ್ತಾರೆ. ಆದರೆ ಇವರು ಹಾಗಲ್ಲ. ಯಾವಾಗಲೂ ಉತ್ತಮ ಕ್ರಿಕೆಟ್ ಇವರಿಂದ ಸಾಧ್ಯ. ಈ ಆಟಗಾರರು ಆಡುವ ಕ್ರಿಕೆಟ್ ಸಹ ಅಷ್ಟೇ ಕಾವ್ಯಾತ್ಮಕ. ಪುಟ್ ವರ್ಕ್ ಗಳು, ಕವರ್ ಡ್ರೈವಳು, ಬ್ಯಾಕಪುಟ್ ಆಟಗಳು, ಹುಕ್ ಶಾಟ್ಗಳು  ಪ್ರತಿಯೊಂದೂ ಬಹಳ ಸುಂದರ.
ಈ ಆಟಗಾರರ ಆಟದ ವೈಖರಿಯೆ ಬದಲಾದುದು. ಇವರು ಮೇಲ್ನೋಟಕ್ಕೆ ನಿಧಾನವಾದ ಆಟವನ್ನು ಆಡಿದರೂ ಉತ್ತಮ ಸರಾಸರಿಯನ್ನೇ ಹೊಂಡಿರುತ್ತಾರೆ. ಇವರ ಇನ್ನೊಂದು ಮುಖ್ಯ ಲಕ್ಷಣಗಳೆಂದರೆ ಇವರು ಸಿಕ್ಸರ್ ಬಾರಿಸಲು ಹೆಚ್ಚು ಮುಂದಾಗುವುದಿಲ್ಲ. ಆದರೆ ಬೌಂಡರಿಗಳನ್ನು ಒಂದರ ಹಿಂದೆ ಒಂದರಂತೆ ಬಾರಿಸುತ್ತಾರೆ. ಬೌಲರ್ಗಳ ಸಹನೆಯನ್ನು ಪರೀಕ್ಷಿಸಿ ಬೆವರಿಳಿಸುತ್ತಾರೆ.
ಇವರು ಪಂದ್ಯಗಳಲ್ಲಿ ಪಕ್ಕಾ ಆಪತ್ಭಾಂದವರು. ಸೋಲಿನ ಸುಳಿಯಲ್ಲಿ ತಂಡವಿದ್ದರೆ ಅದನ್ನು ಬದಲಾಯಿಸುವ ಛಾತಿಯನ್ನು ಹೊಂದಿರುವವರು. ಇವರ ಕಲಾತ್ಮಕ ಆಟಗಳು ನೋಡುಗರ ಕಣ್ಮನ ಸೆಳೆಯುತ್ತವೆ. ಗಾಯಗಳಾದರೂ ಇವರು ಅದಕ್ಕೆ ಜಗ್ಗವುದಿಲ್ಲ. ಗಾಯಕ್ಕಿಂತ ತಂಡ, ದೇಶ, ಗೆಲುವು ಮುಖ್ಯ ಎಂಬುದು ಇವರ ಗುಣ.
ಹಿರಿಯರ ಆಟಕ್ಕೆ ಅವರೆ ಸಾಕ್ಷಿ. ಯುವಕರ ಪಡೆ ಸಾಲು ಸಾಲು ಸೋಲನ್ನು ಅನುಭವಿಸುತ್ತಿರುವುದರಿಂದಲೆ ಪಾಕ್ ತಂಡ ನಿವೃತ್ತಿ ಹೊಂದಿದ್ದ ಮೊಹಮ್ಮದ್ ಯುಸುಫ್ರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಿದ್ದು. ಅನುಭವ, ಉತ್ತಮ ಆಟವೇ ಇವರ ಆಸ್ತಿ. ಯುವ ಆಟಗಾರರು ನೂರು ರನ್ನುಗಳನ್ನು ಹೊಡೆಯಲು ಇವರು ಕಷ್ಟಪಟ್ಟರೆ, ಹಿರಿಯ ಆಟಗಾರರಿಗೆ ಅದು ಸಲೀಸು. ಶತಕ, ದ್ವಿಶತಕ ಇವರಿಗೆ ಸುಲಭ. ಯುವಕರು ಫಿಟ್ನೆಸ್ ಇಲ್ಲದೆ ಬಳಲಿ, ಸೋತು, ರನ್ನರ್ ಸಹಾಯದಿಂದ ಹಾಗೂ ಹೀಗೂ ರನ್ ಹೊಡೆದರೆ, ಇವರು ಯುವಕರನ್ನೇ ನಾಚಿಸುವಂತೆ ಆಡುತ್ತಾರೆ. ಎರಡು ಮೂರು ರನ್ನುಗಳನ್ನು ಸುಲಭವಾಗಿ ತೆಗೆಯುತ್ತಾರೆ.
ವೆಸ್ಟ್ ಇಂಡೀಸ್ನ ತಂಡವನ್ನೇ ತೆಗೆದುಕೊಳ್ಳಿ, ಆ ತಂಡದಲ್ಲಿ ಎಷ್ಟೇ ಹೊಸ, ಹೊಡೆ ಬಡಿ ಆಟಗಾರರು ಬಂದರೂ ತಂಡದ ಪಾಲಿಗೆ ಆಪದ್ಭಾಂದವನಂತೆ ಇರುವುದು ಚಂದ್ರಪಾಲ್ ಮಾತ್ರ. ಅದೇ ರೀತಿ ದಕ್ಷಿಣ ಆಫ್ರಿಕಾ ತಂಡದ ಜೀವಾಳ ಜಾಕ್ ಕಾಲಿಸ್ ಎಂದರೂ ತಪ್ಪಿಲ್ಲ. ಅದೆ ಆಸ್ಟ್ರೇಲಿಯಾ ತಂಡವನ್ನು ಗಮನಿಸಿ ಅಲ್ಲಿ ಸ್ಟೀವ್ ವಾ, ಹೇಡನ್ ಅಂತಹ ಆಟಗಾರರು ಇದ್ದಾಗ ಸಾಲು ಸಾಲು ಗೆಲುವನ್ನು ಅದು ಕಂಡಿದ್ದು ಇತಿಹಾಸ. ಆದರೆ ಅಂತಹ ಆಟಗಾರರು ಇಗ ಇಲ್ಲವೇ ಇಲ್ಲ. ಪರಿಣಾಮ ಅದಕ್ಕೆ ಸೋಲಿನ ರುಚಿ ಗೊತ್ತಾಗತೊಡಗಿದೆ.
ಶ್ರೀಲಂಕಾದ ಅರವಿಂದ್ ಡಿಸಿಲ್ವಾ ಅಂತೂ ತನ್ನ 40ನೇ ವರ್ಷದ ವರೆಗೆ ಕ್ರಿಕೆಟ್ ಆಡಿದ್ದ. ಈಗ ಸನತ್ ಜಯಸೂರ್ಯ ಸಹ ಹಾಗೆಯೇ ಆಡುತ್ತಿದ್ದಾನೆ. ಅಷ್ಟು ವಯಸ್ಸಾಗಿದ್ದರೂ ಅವರ ಆಟಕ್ಕೆ ಯಾವುದೆ ಕುಂದು ಉಂಟಾಗಿಲ್ಲ. ಮೊದಲಿಗಿಂತ ಉತ್ತಮವಾಗಿಯೆ ಆಡುತ್ತಿದ್ದಾರೆ. ಹುಣಸೆ ಮರ ಮುಪ್ಪಾದರೂ ಹುಳಿ ಮುಪ್ಪಲ್ಲ ಎನ್ನುವುದು ಇದಕ್ಕೇ ಇರಬೇಕು.
ತಂಡದ ಪಾಲಿನ ಆಪದ್ಭಾಂಧವ ಆಟಗಾರರಾದ ಇವರಿಗೆ ಹ್ಯಾಟ್ಸಾಪ್...

Friday, August 13, 2010

ರಂಗಾನುಭವ ~`ಅಣೇಕಟ್ಟು' ~

ಕಾಲೇಜು ದಿನಮಾನದಲ್ಲಿ ಯುವಜನ ಮೇಳಕ್ಕಾಗಿ ನಾವು ಬರೆದು, ನಟಿಸಿ, ಪ್ರಶಸ್ತಿಗಳಿಸಿದ `ಅಣೆಕಟ್ಟು' ಎಂಬ ನಾಟಕದ ಕುರಿತು ನಮ್ಮ ಅನುಭವಗಳನ್ನು ಈ ಲೇಖನದ ಮೂಲಕ ಹಂಚಿಕೊಳ್ಳುತ್ತಿದ್ದೇನೆ. ಸೀಮಿತ ಸಮಯದಲ್ಲಿ ಪ್ರಸ್ತುತ ಜಗತ್ತಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಕಥಾ ವಸ್ತುವನ್ನು ಒಳಗೊಂಡಿದ್ದ ನಮ್ಮ ನಾಟಕ ಬಹಳ ಪ್ರಸಿದ್ಧಿ ಪಡೆಯಿತು. `ಅಣೆಕಟ್ಟು' ನಾಟಕದ ಹಿಂದಿನ ನಮ್ಮ ಕಾರ್ಯ, ಕೆಲಸ, ಅನುಭವ ಇಂತಿದೆ.
---------------------------------------
ಕೇವಲ ಅರ್ಧಗಂಟೆಯ ಅವಧಿಯಲ್ಲಿ ಪ್ರಸ್ತುತ ದಿನಮಾನದ ಸಮಸ್ಯೆಯನ್ನು ನಾಟಕದ ವಿಷಯವನ್ನಾಗಿಸಿಕೊಂಡು ನಾಟಕ ಮಾಡಬೇಕು ಎಂಬ ನಿಯಮದ ಹಿನ್ನೆಲೆಯಲ್ಲಿ ನಾವು `ಅಣೆಕಟ್ಟು' ನಾಟಕ ನಡೆಸಲು ಮುಂದಾದೆವು. ಕರ್ನಾಟಕ ವಿಶ್ವವಿದ್ಯಾಲಯದ ಯುವಜನ ಮೇಳದಲ್ಲಿ ಅಂತರಕಾಲೇಜು ಮಟ್ಟದಲ್ಲಿ ನಾಟಕ ಸ್ಪರ್ಧೆಯಲ್ಲಿ ನಮ್ಮ ಈ ನಾಟಕವನ್ನು ಅಭಿನಯಿಸಿ ತೋರಿಸಬೇಕಿತ್ತು. ಶಿರಸಿ ಕಾಲೇಜಿನ ಸಹಯೋಗದೊಂದಿಗೆ ನಮ್ಮ ಗೆಳೆಯರು ನಾಟಕವನ್ನು ನಡೆಸಲು ಬಲು ಉತ್ಸಾಹದಿಂದಲೇ ಮುಂದಾದರು.
ನಾನು ಬರೆದಿದ್ದ `ಅಣೆಕಟ್ಟು' ಎಂಬ ಸಣ್ಣ ಕಥೆಯನ್ನು ನಾಟಕದ ಕಥಾವಸ್ತುವನ್ನಾಗಿ ನಾವು ಆಯ್ಕೆ ಮಾಡಿಕೊಂಡಿದ್ದೆವು. ಅಣೆಕಟ್ಟು ಕಥೆಯನ್ನೇ ಕೊಂಚ ಬದಲಾಯಿಸಿ ನಾಟಕರೂಪಕ್ಕೆ ಇಳಿಸಿದ್ದೆವು. ಗೆಳೆಯ ರಾಘವ ಹೆಗಡೆ ನಾಟಕದ ನಿದರ್ೇಶನದ ಜವಾಬ್ದಾರಿಯನ್ನು ಹೊತ್ತಿದ್ದ. ಗಣೇಶ್ ಹೆಗಡೆ ಪಾಲಿಕೆ ಕಥಾನಾಯಕ ಬಸವರಾಜುವಿನ ಪಾತ್ರ ಸಿಕ್ಕಿತ್ತು.
ಜೊತೆಗೆ ನಾನು ಗೂಂಡಾ ರಾಜಕಾರಣಿ ರಾಮಪ್ಪನ ಪಾತ್ರ ಮಾಡಿದ್ದೆ. ರಾಘವ ಹೆಗಡೆ ರಾಜಕಾರಣಿಯಾಗಿ ನಟಿಸಿದ್ದರೆ, ವಿನಾಯಕ ಹಾಗೂ ಗಣೇಶ್ ವಾನಳ್ಳಿ ಊರಿನ ಗ್ರಾಮಸ್ಥರ ಪಾತ್ರ ಮಾಡಿದ್ದರು. ನಾಗರಾಜ್ ಹೆಗಡೆ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದ. ಮೃತ್ಯುಂಜಯ ಕೆ. ಎಂ. ಪೊಲೀಸ್ ಪೇದೆಯಾಗಿ ಜೊತೆಗೆ ಸೌಮ್ಯಾ, ವಂದನಾ ಜೋಶಿ ಊರಿನ ಮಹಿಳೆಯರ ಪಾತ್ರದಲ್ಲಿ ಅಭಿನಯಿಸಿದ್ದರು.

ಕಥಾವಸ್ತು
ನಿಸರ್ಗದ ನಡುವಿನ, ನದಿ ದಡದ ಊರಿನಲ್ಲಿ ಅಣೆಕಟ್ಟು ನಿಮರ್ಾಣವಾಗುವ ಸುದ್ದಿ ಊರಿನ ಅನಕ್ಷರಸ್ಥ ಜನರಲ್ಲಿ ವಿವಿಧ ಅಭಿಪ್ರಾಯ ಬದಲಾವಣೆಗೆ ಕಾರಣವಾಗುತ್ತದೆ. ಕೆಲವರು ಅಣೆಕಟ್ಟೆಯ ಪರ ಮಾತನಾಡಿದರೆ ಮತ್ತೆ ಕೆಲವರು ಅಣೆಕಟ್ಟೆಯ ವಿರುದ್ಧ ದನಿ ಎತ್ತುತ್ತಾರೆ. ಈ ಊರಿನ ಅಕ್ಷರಸ್ಥ ಯುವಕ ಬಸವರಾಜು ಅಣೆಕಟ್ಟೆ ನಿಮರ್ಾಣವನ್ನು ವಿರೋಧಿಸುತ್ತಾನೆ. ಅಣೆಕಟ್ಟೆ ನಿರಮಾಣದಿಂದ ಉಂಟಾಗುವ ತೊಂದರೆಗಳನ್ನು ಊರಿನ ಜನರಿಗೆ ವಿವರಿಸಿ ಹೇಳಿ ಅಣೆಕಟ್ಟೆಯ ವಿರುದ್ಧ ಹೋರಾಟಕ್ಕೆ ಮುಂದಾಗುತ್ತಾನೆ.
ಅಣೆಕಟ್ಟೆಯ ವಿರುದ್ಧ ಬಸವರಾಜು ಮುಂದಾಳತ್ವದಲ್ಲಿ ಹೋರಾಟ ಜೋರಾದಾಗ ಆ ಕ್ಷೇತ್ರದ ಶಾಸಕನ ರಂಗಪ್ರವೇಶವಾಗುತ್ತದೆ. ಹೋರಾಟಕ್ಕೆ ಕಾರಣಗಳನ್ನು ತಿಳಿದ ರಾಜಕಾರಣಿ ಹೋರಾಟಗಾರರ ಪರವಾಗಿ ನಿಲ್ಲುತ್ತಾನೆ. ವಿದ್ಯಾವಂತ ಅನಾಥ ಯುವಕ ಬಸವರಾಜು ರಾಜಕಾರಣಿಯ ಮನಗೆಲ್ಲುತ್ತಾನೆ. ಬಸವರಾಜುವಿನ ಹೋರಾಟಕ್ಕೆ, ಜನಪರ ನಿಲುವಿಗೆ ಮನಸೋತ ರಾಜಕಾರಣಿ ಬಸವರಾಜುನನ್ನು ತನ್ನ ಮಗನನ್ನಾಗಿ ದತ್ತು ತೆಗೆದುಕೊಳ್ಳುತ್ತಾನೆ.
ಕೆಲ ಕಾಲದ ನಂತರ ರಾಜಕಾರಣಿ ಬಸವರಾಜುನ ಮದುವೆಗೆ ಮುಂದಾಗುತ್ತಾನೆ. ಪರಿಚಿತ ರಾಜಕಾರಣಿಯ ಮಗಳನ್ನು ಆತನಿಗೆ ಮದುವೆ ಮಾಡಿಸಲು ಪ್ರಯತ್ನಿಸುತ್ತಾನೆ. ಮದುವೆಗೆ ಒಪ್ಪದ ಬಸವರಾಜುನನ್ನು ಮದುವೆಗೆ ಒಪ್ಪಿಸುತ್ತಾನೆ.
ಅದೇ ಪ್ರದೇಶದ ಮತ್ತೊಬ್ಬ ರಾಜಕಾರಣಿ ರಾಮಪ್ಪ ಬಸವರಾಜುಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಲು ಒಪ್ಪುತ್ತಾನೆ. ಮದುವೆಯ ಬಗ್ಗೆ ಮಾತುಕತೆಯೂ ನಡೆಯುತ್ತದೆ. ರಾಮಪ್ಪ ಬಸವರಾಜುವಿಗೆ ವರದಕ್ಷಿಣೆ ರೂಪದಲ್ಲಿ ಎರಡು ಲಕ್ಷ ರೂಪಾಯಿಗಳನ್ನು ನೀಡಲು ಮುಂದಾಗುತ್ತಾನೆ. ಆದರೆ ಬಸವರಾಜು ಇದಕ್ಕೊಪ್ಪುವುದಿಲ್ಲ. ಕೊನೆಗೆ ಅನಾಥ ಬಸವರಾಜು ಮದುವೆ  ಸಮಾರಂಭದ ಅಗತ್ಯ ಪೂರೈಸುವ ಸಲುವಾಗಿ ಆ ಹಣವನ್ನು ಸ್ವೀಕರಿಸಬೇಕು ಎಂದು ರಾಮಪ್ಪ ಒತ್ತಾಯಿಸುತ್ತಾನೆ. ಬಸವರಾಜು ಇದಕ್ಕೆ ಅನಿವಾರ್ಯವಾಗಿ ಒಪ್ಪಿ ಹಣ ಸ್ವೀಕರಿಸುತ್ತಾನೆ.
ಆದರೆ ಮರುದಿನ ರಾಮಪ್ಪ ತನ್ನ ಎರಡು ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡುತ್ತಾನೆ. ಪೊಲೀಸರು ಹುಡುಕಿದಾಗ ಬಸವರಾಜುನ ಮನೆಯಲ್ಲಿ ಎರಡು ಲಕ್ಷ ರೂಪಾಯಿ ಸಿಗುತ್ತದೆ. ಬಸವರಾಜು ಮೇಲೆ ಕಳ್ಳತನದ ಆರೋಪ ಬರುತ್ತದೆ. ಪೊಲೀಸರು ಬಸವರಾಜುನನ್ನು ಬಂಧಿಸಲು ಮುಂದಾಗುತ್ತಾರೆ. ಬಸವರಾಜು ಎಷ್ಟು ಸಮಜಾಯಿಶಿ ನೀಡಿದರೂ ಪೊಲೀಸರು ಹಾಗೂ ಜನರು ಅದನ್ನು ನಂಬುವುದಿಲ್ಲ. ಶಾಸಕನಿಗೆ ಸುದ್ದಿ ತಿಳಿದು ಬಸವರಾಜುನನ್ನು ವಿಚಾರಿಸುತ್ತಾನೆ. ಆದರೆ ಕೊನೆಗೆ ಶಾಸಕನೂ ಬಸವರಾಜುವಿನ ಮಾತನ್ನು ನಂಬದಾದಾಗ ಊರಿನ ಗ್ರಾಮಸ್ಥರು ಬಸವರಾಜುವಿನ ವಿರುದ್ಧ ತಿರುಗಿ ಬೀಳುತ್ತಾರೆ. ಆತನ ಮೇಲೆ ಹಲ್ಲೆಗೂ ಮುಂದಾಗುತ್ತಾರೆ. ಆಗ ನಡೆಯುವ ಗಲಾಟೆಯಲ್ಲಿ ರೌಡಿಗಳು ಬಸವರಾಜುನ ಹತ್ಯೆ ಮಾಡುತ್ತಾರೆ.
ಹತ್ಯೆಯ ಆರೋಪ ಊರಿನ ನಾಗರಿಕರ ಮೇಲೆ ಬರುತ್ತದೆ. ರಾಜಕಾರಣಿ ಊರಿನ ನಾಗರಿಕರ ಪರವಾಗಿ ನಿಂತು ಪೊಲೀಸರನ್ನು ವಿರೋಧಿಸುತ್ತಾನೆ. ಗ್ರಾಮಸ್ಥರ ಪರವಾಗಿ ವಾದಿಸಿ ಅವರನ್ನು ಪೊಲೀಸರು ಬಿಟ್ಟುಬಿಡುವಂತೆ ಮಾಡುತ್ತಾನೆ. ಈ ಮೂಲಕ ಜನಬೆಂಬಲ ಗಳಿಸುತ್ತಾನೆ. ಅಣೆಕಟ್ಟೆಯ ಹೋರಾಟ ನಿಧಾನವಾಗಿ ತಣ್ಣಗಾಗುತ್ತದೆ.
ಕೊನೆಯಲ್ಲಿ ತಿಳಿದುಬರುವ ಅಂಶವೆಂದರೆ ಶಾಸಕನ ಕುತಂತ್ರದಿಂದ ನಾಯಕ ಬಸವರಾಜು ಮೇಲೆ ಕಳ್ಳತನದ ಆರೋಪ ಬರುತ್ತದೆ. ಅಷ್ಟೆ ಅಲ್ಲದೆ ಜನರು ಗಲಾಟೆ ಪ್ರಾರಂಭಿಸಿದಾಗ ಶಾಸಕನ ಕಡೆಯ ಜನರೇ ಬಸವರಾಜುನ ಹತ್ಯೆಯನ್ನೂ ಮಾಡುತ್ತಾರೆ. ಆದರೆ ಮಂತ್ರಿಯ ದೆಸೆಯಿಂದ ಇದು ತಿಳಿಯುವುದೇ ಇಲ್ಲ. ಇದು ನಾಟಕದ ಕಥಾವಸ್ತು.

ಗಿಮಿಕ್...
ನಾಟಕ ಯಶಸ್ವಿಯಾಗಬೇಕೆಂದರೆ ಗಿಮಿಕ್ಗಳು ಇರಬೇಕು. ಇದು ಆಧುನಿಕ ನಾಟಕರಂಗದಲ್ಲಿ ಅತ್ಯಂತ ಅವಶ್ಯಕ. ನಾವೂ ಇದಕ್ಕೆ ತಕ್ಕಂತೆ ನಾಟಕದಲ್ಲಿ ಹಲವು ಗಿಮಿಕ್ಗಳನ್ನು ಅಳವಡಿಸಿದ್ದೆವು.
ಅಣೆಕಟ್ಟು ನಾಟಕ ಪ್ರಾರಂಭವಾಗುವುದೇ ವ್ಯಕ್ತಿಯೋಬ್ಬನ ಶವದ ಮೆರವಣಿಗೆಯಿಂದ. ಜನರಲ್ಲಿ ಕುತೂಹಲ ಹುಟ್ಟಿಸಲಿ ಎಂಬ ಉದ್ದೇಶದಿಂದ ಇದನ್ನು ನಾವು ಅಳವಡಿಸಿದ್ದೆವು. ಇದು ಬಹಳ ಯಶಸ್ವಿಯೂ ಆಯಿತು.
ಇಂದಿನ ಜಮಾನಾದಲ್ಲಿ ಹಲವು ಸಿನಿಮಾಗಳಲ್ಲಿ ನಿರೂಪಕನ ಪಾತ್ರ ಬರುತ್ತದೆ. ಯಾರೋ ಒಬ್ಬಾತ ಕಥೆಯನ್ನು ಕೇಳುತ್ತಾ ಹೋಗುತ್ತಾನೆ. ನಾವೂ ಈ ನಿರೂಪಣೆಯ ತಂತ್ರವನ್ನು ಬಳಸಿದ್ದೆವು. ಆದರೆ ನಮ್ಮ ನಾಟಕದಲ್ಲಿ ನಿರೂಪಕ ತೆರೆಯ ಮೇಲೆ ಬರದೆ ತೆರೆಯ ಹಿಂದಿನಿಂದಲೇ ಕಥೆಯನ್ನು ಹೇಳುವಂತೆ ಮಾಡಿದ್ದೆವು. ಈ ಕಥೆಯನ್ನು ಹಾಡಿನ ಮೂಲಕ ಹೇಳಿದೆವು. ಈ ತಂತ್ರವೂ ಸಾಕಷ್ಟು ಯಶಸ್ವಿಯಾಯಿತು.
ನಾಟಕದ ಕೊನೆಯ ಭಾಗದಲ್ಲಿ ಇನ್ನೊಂದು ತಂತ್ರವನ್ನು ಬಳಸಿದೆವು. ಹಾಡೊಂದನ್ನು ಬಳಕೆ ಮಾಡಿಕೊಂಡು ಆ ಹಾಡಿನಲ್ಲಿ ಪ್ರಸ್ತುತ ರಾಜಕಾರಣಿಗಳ, ಖಾಕಿಯ ಇತರ ಸಮಾಜದ ವಿವಿಧ ವ್ಯಕ್ತಿಗಳು ಜನಸಾಮಾನ್ಯರನ್ನು ಶೋಷಿಸುವ ರೀತಿಯನ್ನು ಅಭಿನಯಿಸಿದೆವು. ಸಮಾಜದಲ್ಲಿ ದುಡ್ಡು ಯಾವ ರೀತಿ ಜನರನ್ನು ಬದಲಾಯಿಸುತ್ತದೆ ಎಂಬುದನ್ನು ಅಭಿನಯಿಸಿದೆವು. ಈ ತಂತ್ರವೂ ಯಶಸ್ವಿಯಾಯಿತು.
ಈ ನಾಟಕದಲ್ಲಿ ನಾಯಕ ಸಾಯುತ್ತಾನೆ. ಖಳನಾಯಕ ವಿಜ್ರಂಭಿಸುತ್ತಾನೆ. ಪ್ರಸ್ತುತ ಜಗತ್ತಿನ ಕುತಂತ್ರಿ ರಾಜಕಾರಣಿಗಳನ್ನು ನಾಟಕ ತೋರಿಸುತ್ತದೆ. ಈ ರಾಜಕಾರಣಿಗಳು ಜನರ ನಡುವೆಯೆ ಇದ್ದು, ಪರಿಸ್ಥಿತಿಯನ್ನು ಹೇಗೆ ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಾರೆ ಎಂಬುದನ್ನು ಈ ನಾಟಕ ವಿವರಿಸಿದ್ದರಿಂದ ಬಹಳ ಪ್ರಸಿದ್ಧಿಯನ್ನು ಪಡೆಯಿತು.
ಈ ಗಿಮಿಕ್ಗೆ ಅಗತ್ಯವಿದ್ದ ಅಮೋಘ ಅಭಿನಯವನ್ನು ರಾಘವ್, ಗಣೇಶ್, ನಾಗರಾಜ್ ಹಾಗೂ ಇತರರು ನೀಡಿದ್ದರಿಂದ ನಾಟಕ ಸುಂದರವಾಗಿ ಮೂಡಿ ಬಂದಿತು.
`ಅಣೆಕಟ್ಟು' ಇದೊಂದು ಏಕಾಂಕ ನಾಟಕ. ಈ ನಾಟಕಕ್ಕೆ ನಾಗರಾಜ್ ವಿಶೇಷವಾದ ಬಿದಿರಿನ ಮನೆಯೊಂದನ್ನು ತಯಾರಿಸಿದ್ದ. ಸುಪ್ರಿತಾ ಶಿರೂರ್ ಅವರ ಕೈಚಳಕದಲ್ಲಿ ರಂಗದ ಮೇಲಿನ ವಸ್ತುಗಳಿಗೆ ಜೀವಕಳೆ ಬಂದಿತ್ತು. ಅವರ ಕೈಚಳಕದಲ್ಲಿ ತಯಾರಾಗಿದ್ದ ಮರದ ಕಲಾಕೃತಿಗಳು ಪ್ರೇಕ್ಷಕರನ್ನು ವಿಶೇಷವಾಗಿ ಸೆಳೆದವು.

ಹಾಡು-ಸಂಗೀತ
ನಾಟಕಕ್ಕೆ ನಾಗರಾಜ್ ಜೋಗಿ ಸುಂದರ ಸಂಗೀತವನ್ನು ನೀಡಿದ್ದರು. ನಾಟಕದಲ್ಲಿ ಮೂರು ಹಾಡುಗಳನ್ನು ಬಳಸಲಾಗಿತ್ತು. ಹಸಿರು ಗ್ರಾಮವೊಂದರ ಎಲ್ಲ ಗುಣಗಳನ್ನು ಸಾರುವ ನಾಲ್ಕು ಸಾಲಿನ ಚಿಕ್ಕ ಪದ್ಯ, ಅಣೆಕಟ್ಟಿನ ಬಗ್ಗೆ ಜನರು ತಮ್ಮ ತಮ್ಮಲ್ಲಿಯೇ ಹಾಡಿಕೊಳ್ಳುವ ಚಿಕ್ಕ ಹಾಡನ್ನು ಮೊದಲು ಬಳಸಿದ್ದೆವು. ನಾಟಕದ ಕೊನೆಯಲ್ಲಿ ಸಮಾಜದ ವಿವಿಧ ಕ್ರೂರತೆಯನ್ನು ಸಾರುವ ರೂಪಕ ಅಂಶಗಳನ್ನು ಹೊಂದಿರುವ `ಸಾವು...' ಎಂಬ ಹಾಡನ್ನೂ ಬಳಸಿಕೊಂಡಿದ್ದೆವು.
ಸಾವು, ಸಾವು.. ಭೃಷ್ಟಾಚಾರಕ್ಕೆ ಬಂದಂತ ಗೆಲುವು
ಆಸೆಯ ಕನಸಿನ ಸಾವು...
ಎಂಬ ಸಾಲನ್ನು ಹೊಂದಿದ್ದ ಈ ಹಾಡು ಅತ್ಯಂತ ಪರಿಣಾಮಕಾರಿಯಾಯಿತು ಅಲ್ಲದೆ ಜನಮನ ಸೂರೆಗೊಂಡಿತು.

ಪ್ರಶಸ್ತಿ
ಈ ನಾಟಕಕ್ಕೆ ಜಿಲ್ಲಾಮಟ್ಟದಲ್ಲಿ ಮೊದಲ ಪ್ರಶಸ್ತಿ ದೊರಕಿತು. ಅಲ್ಲದೆ ಕನರ್ಾಟಕ ವಿಶ್ವವಿದ್ಯಾಲಯದಲ್ಲಿ ನಡೆದ ಯುವಜನ ಮೇಳದಲ್ಲಿ ಮೂರನೆ ಸ್ಥಾನ ಗಳಿಸಿತು. ನಾಯಕನ ಸಾವು, ಖಳನಾಯಕನ ಜಯವನ್ನು ಬಿಂಬಿಸಿದ ಅಣೆಕಟ್ಟು ನಾಟಕ ಜನಮನ ಸೂರೆಗೊಂಡಿತು.

ವಿನಯ್ ದಂಟಕಲ್

Tuesday, August 3, 2010

ಬೀದಿ ಬದಿ ಸೃಷ್ಟಿಯಾಗುವ ಕಲಾಕೃತಿಗಳು


ಅವರು ರಸ್ತೆ ಬದಿಯ ಕಲಾಕಾರರು. ಬೆಂಗಳೂರಿನ ಹಲವು ಪ್ರದೇಶಗಳ ಬೀದಿ ಬದಿಗಳಲ್ಲಿ ಟೆಂಟು ಕಟ್ಟಿಕೊಂಡು ತಾವು ತಯಾರಿಸಿದ ಅಚ್ಚಿನ ಸುಂದರ ಮೂತರ್ಿಗಳನ್ನು, ಕಲಾಕೃತಿಗಳನ್ನು ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿರುವ ಉತ್ತರ ಭಾರತೀಯ ಮೂಲದ ಈ ವ್ಯಕ್ತಿಗಳ ಕೈಯಲ್ಲಿ ಮಣ್ಣುಗಳು ಒಂದು ರೂಪ ತಳೆಯುತ್ತವೆ, ಭಾವವನ್ನು ಹೊರಸೂಸುತ್ತವೆ.  
ಈ ಬೀದಿ ಬದಿಯ ವಿಶಿಷ್ಟ ಕಲಾವಿದರ ಕೈಯಲ್ಲರಳಿದ ಕಲಾಕೃತಿಗಳನ್ನು ಬಳಸಿ ಮನೆಯನ್ನು ಸುಂದರಗೊಳಿಸಿಕೊಂಡಿರುವವರು ಹಲವರು. ಹೊಸ ಮನೆ ಕಟ್ಟಿಸುವವರು, ಮನೆ ಅಲಂಕಾರ ಮಾಡುವವರು, ಮನೆಯೊಳಗಿನ ಶೋಕೇಸ್ನ್ನು ಅಂದಗೊಳಿಸುವವರು, ಗಾರ್ಡನಿಂಗ್ನಲ್ಲಿ ಆಸಕ್ತಿ ಇರೋರು ಹೀಗೆ ಕಲಾರಸಿಕರು ಈ ಬೀದಿ ಬದಿಯ ಕಲಾಕಾರರು ತಯಾರಿಸುವ ಮೂತರ್ಿಗಳನ್ನು ತೆಗೆದುಕೊಂಡು ಹೋಗಿ ಮನೆಯನ್ನು ಅಂದ-ಚಂದಗೊಳಿಸಿಕೊಳ್ಳುತ್ತಾರೆ.
ಬೀದಿ ಬದಿಯಲ್ಲಿ ದೊರೆಯುವ ಮಣ್ಣಿನ ಕಲಾಕೃತಿಗಳು ತುಂಬ ಆಕರ್ಷಕ ಹಾಗೂ ಸುಂದರವಾದವುಗಳು. ನಿಮರ್ಾಣಗೊಳ್ಳುತ್ತಿರುವ ಮನೆಗೆ ದೃಷ್ಟಿ ಬೀಳಬಾರದೆಂದು ಕಟ್ಟುವ ದೃಷ್ಟಿ ಬೊಂಬೆಯಿಂದ ಹಿಡಿದು ವಿವಿಧ ರೀತಿಯ ಮನಸೆಳೆಯುವ ವಸ್ತುಗಳು ಅಂದರೆ ಹೂದಾನಿಗಳು, ಬೊಂಬೆಗಳು, ಸಾಯಿಬಾಬಾ, ರಾಧಾಕೃಷ್ಣ ಮುಂತಾದ ದೇವರ ಮೂತರ್ಿಗಳು, ಮನೆಯ ಸಿಂಗಾರಕ್ಕೆ ಬಳಸುವ ನವಿಲು, ಗಿಳಿ ಇತ್ಯಾದಿ ಪಕ್ಷಿಗಳ ಮಾದರಿಗಳು, ಗೋಡೆಗಳ ಸಿಂಗಾರಕ್ಕೆ ಬಳಸುವಂತವುಗಳು ಹೀಗೆ ವಿವಿಧ ರೀತಿಯ ಮೋಹಕ ವಸ್ತುಗಳು  ಅಲ್ಲಿ ಮೈದಳೆಯುತ್ತವೆ, ಮಾರಾಟವಾಗುತ್ತವೆ.
ಇಲ್ಲಿನ ಕಲಾಕೃತಿಗಳಿಗೆ ಕೊಡಲಾಗುವ ಬಣ್ಣಗಳೂ ತುಂಬ ವಿಶಿಷ್ಟವಾದದ್ದು. ಈ ಬೀದಿ ಬದಿಯ ಕಲಾಕಾರರು ಬಣ್ಣವನ್ನು ಮಿಶ್ರಣ ಮಾಡಿ ಈ ಮಣ್ಣಿನ ಕಲಾಕೃತಿಗಳಿಗೆ ಲೇಪಿಸಿದರೆ ಅವುಗಳನ್ನು ನೋಡಲು ಸುಂದರ ಅನುಭವವಾಗುತ್ತದೆ. ಅವರ ಕೈಚಳಕದಲ್ಲಿ ಆಕೃತಿ ಪಡೆದ ಬಣ್ಣವನ್ನು ಧರಿಸಿ ಹೊರಬರುವ ವಿಶಿಷ್ಟ ಕಲಾಕೃತಿಗಳು ನೋಡುಗರನ್ನು ಥಟ್ಟನೆ ಸೆಳೆಯುತ್ತವೆ.
ತಮ್ಮ ಕಲಾ ಸೊಬಗನ್ನು ಪ್ರದಶರ್ಿಸುವ ಈ ಬೀದಿ ಬದಿಯ ಕಲಾಕಾರರು ಉತ್ತರ ಭಾರತದವರಾದರು ಇವರಲ್ಲಿ ಅನೇಕರು ರಾಜಾಸ್ತಾನಕ್ಕೆ ಸೇರಿದವರು. ಸಾಮಾನ್ಯವಾಗಿ  ಹತ್ತಕ್ಕಿಂತ ಹೆಚ್ಚಿನ ಸಂಖ್ಯೆಯ ಸದಸ್ಯರಿರುವ ಇವರ ಕುಟುಂಬದಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ವಿವಿಧ ರೀತಿಯ ಕರುಕುಶಲ ವಸ್ತುಗಳನ್ನು ತಯಾರಿಸುತ್ತಾರೆ. ರಾಜಧಾನಿಯ ಸುಂಕದಕಟ್ಟೆ, ಕೊಟ್ಟಿಗೆಪಾಳ್ಯ, ಕೆ.ಆರ್. ಪುರಂ, ಬಾಣಸವಾಡಿ, ಯಶವಂತಪುರ ಮುಂತಾದ ಕಡೆಗಳಲ್ಲಿ ಬೀದಿ ಬದಿಯಲ್ಲಿ ಟೆಂಟು ಕಟ್ಟಿಕೊಂಡು ತಾವು ತಯಾರಿಸುವ ಮಣ್ಣಿನ ವಿಶಿಷ್ಟ ಕಲಾಕೃತಿಗಳನ್ನು ಮಾರಾಟ ಮಾಡುತ್ತಾರೆ. 50 ರೂ.ಗಳಿಂದ 500 ರೂಪಾಯಿಗಳವರೆಗೆ ಬೆಲೆ ಇದೆ. ಚೆಂದದ ಮೂತರ್ಿಗಳನ್ನು ಕೆಲವರು ಕೊಂಡುಕೊಂಡರೂ ಹಲವರು ಅದನ್ನು ನೋಡಿ ರೇಟು ಕೇಳಿ ಚೌಕಾಸಿ ಮಾಡಿ ಖರೀದಿಸುವವರೂ ಇದ್ದರೆ, ಮತ್ತೆ ಕೆಲವರು ವಸ್ತುಗಳ ವೀಕ್ಷಣೆ ಮಾಡಿ, ಏನೂ ಖರೀದಿಸದೆ ಹೋಗುತ್ತಾರೆ.
ಮಣ್ಣಿನಿಂದ ತಮ್ಮ ಬದುಕನ್ನು ಕಟ್ಟಿಕೊಂಡು ಜೀವನ ನಡೆಸುತ್ತಿರುವ ಈ ಬಡ ಕಲಾಕಾರರು ಎದುರಿಸುವ ಸಮಸ್ಯೆಗಳು ಹಲವಾರು. ಗೊತ್ತಿರುವ ಕಲೆಯೊಂದಿಗೆ ಗೊತ್ತಿರದ ಪ್ರದೇಶಕ್ಕೆ ಧೈರ್ಯಮಾಡಿ ಬಂದಿರುವ ಈ ಮಂದಿಗೆ ಈ ವೃತ್ತಿ ಹೆಚ್ಚಿನ ಲಾಭ ತರದಿದ್ದರೂ ಜೀವನ ನಿರ್ವಹಣೆಯಾದರೆ ಸಾಕು ಎಂಬ ಭಾವನೆಯೂ ಇಟ್ಟುಕೊಂಡೇ ದಿನ ನೂಕುತ್ತಿದ್ದಾರೆ. ತಾವು ತಯಾರಿಸಿದ ವಸ್ತುಗಳು ಮಾರಾಟವಾದರೆ ಆದೀತು, ಇಲ್ಲದಿದ್ದರೆ ಇಲ್ಲ. ಇಂತಹ ಮಣ್ಣಿನ ಮೂತರ್ಿ, ಇತರ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಿ ಬದುಕು ನಿರ್ವಹಣೆ ಮಾಡುತ್ತಿರುವ ರಾಜಸ್ತಾನ ಮೂಲದ ವ್ಯಕ್ತಿ ಸುಂಕದಕಟ್ಟೆಯಲ್ಲಿ ಮಾತಿಗೆ ಸಿಕ್ಕಾಗ ಹೇಳಿದ್ದು: `ದೊಡ್ಡ ದೊಡ್ಡ ಮಾಲ್ಗಳಲ್ಲಿ ಕೇಳಿದ ಬೆಲೆಗೆ ಖರೀದಿಸುವ ಗ್ರಾಹಕರು ನಮ್ಮ ವಸ್ತುಗಳಿಗೆ ಬಹಳ ಚೌಕಾಸಿ ಮಾಡುತ್ತಾರೆ. ಅವರು ಹೇಳುವ ರೇಟು ನಮಗೆ ಹೊಂದುವುದಿಲ್ಲ. ಈ ವೃತ್ತಿ ಲಾಭದಾಯಕ ಅಲ್ಲ. ಈ ಮೂತರ್ಿಗಳ ಮಾರಾಟದಿಂದ ನಮ್ಮ ಜೀವನ ನಡೆಯಬೇಕು. ತಂತ್ರಜ್ಞಾನ ಮುಂದುವರಿದಂತೆ ನಮ್ಮ ಬದುಕು ದುಸ್ತರವಾಗುತ್ತಿದೆಯೇನೋ ಎಂಬ ಶಂಕೆಯೂ ಬರುತ್ತದೆ'.
ಮನೆಯ ಅಂದಕ್ಕೆ ತಮ್ಮದೇ ಆದ ಹೊಳಪು ನೀಡುವ ಈ ಕಲಾಕೃತಿಗಳು ಅದರ ತಯಾರಕರ ಬದುಕನ್ನೂ ಕಟ್ಟಿಕೊಡುವ ಕಾರ್ಯ ಮಾಡುತ್ತವೆ. ಈ ಬೀದಿಬದಿಯ ಕಲಾಕಾರರ ಭಾವನೆಗೆ ಸೂಕ್ತ ಬೆಲೆ ದೊರೆತರೆ ಇವರ ಕಾರ್ಯಕ್ಕೆ ಅದು ಒತ್ತಾಸೆಯಾದಂತೆ.
ವಿನಯ್ ದಂಟಕಲ್

Friday, July 9, 2010

ನೀನು

ಎದೆಯ ಬೃಂದಾವನದ
ಹಸಿರು ಹೂಗಿಡ ನೀನು,
ನನ್ನೊಳಗೆ ನೀನಿರಲು
ಬಾಳಿಗದು ಶೋಭೆ ||


ನನ್ನ ಬಯಕೆಯ ಮನದ
ಕಣ್ಣರೆಪ್ಪೆಯು ನೀನು,
ನನ್ನುಳಿಸೆ ನೀನಿರಲು
ಬಾಳಿಗದು ರಕ್ಷೆ ||


ನನ್ನ ಅಕ್ಷಿ ಆಳದೊಳು
ಕಿಡಿ ಕಾಂತಿ ನೀನು,
ಬದುಕೊಳಗೆ ನೀನಿರಲು
ಕಡೆಗೋಲು ಛಲ ||

ಒಡಲ ತಿಳಿ ನೀರಿನಲಿ
ಹಸಿರು ಹಾವಸೆ ನೀನು,
ನೀರೊಳಗೆ ನೀನಿರಲು
ಅಲ್ಲಹುದು ಸೃಷ್ಟಿ ||


-ವಿನಯ್ ದಂಟಕಲ್

Monday, July 5, 2010

ಕನ್ನಡದ ಕ್ಲಾಸಿಕ್ `ಭೂತಯ್ಯನ ಮಗ ಅಯ್ಯು'

ನಿರ್ದೆಶಕ : ಸಿದ್ಧಲಿಂಗಯ್ಯ
ಕಥೆ : ಗೋರೂರು ರಾಮಸ್ವಾಮಿ ಅಯ್ಯಂಗಾರ್

ನಿರ್ಮಾಪಕ : ಜೈನ್ ಕಂಬೈನ್ಸ್
ಛಾಯಾಗ್ರಹಣ : ಡಿ. ವಿ. ರಾಜಾರಾಂ
ಚಿತ್ರ ಬಿಡುಗಡೆ : 1974
ಸಂಗೀತ : ಜಿ. ಕೆ. ವೆಂಕಟೇಶ್
ತಾರಾಗಣದಲ್ಲಿ : ವಿಷ್ಣುವರ್ಧನ್, ಲೋಕೇಶ್, ಎಂ. ಪಿ. ಶಂಕರ್, ಬಾಲಕೃಷ್ಣ, ಲೋಕನಾಥ್ ಮುಂತಾದವರು.

ಕನ್ನಡದ ಕ್ಲಾಸಿಕ್ ಚಿತ್ರಗಳ ಬಗ್ಗೆ ಕಣ್ಣಾಡಿಸಿದಾಗ ಎಲ್ಲಕ್ಕಿಂತ ಮೊದಲು ಕಂಡುಬರುವ ಚಿತ್ರ `ಭೂತಯ್ಯನ ಮಗ ಅಯ್ಯು'. ಸಾಹಿತ್ಯ ಆಕಾಡಮಿ ಪ್ರಶಸ್ತಿ ವಿಜೇತ ಗೋರೂರು ರಾಮಸ್ವಾಮಿ ಅಯ್ಯಂಗಾರರ ಕಾದಂಬರಿ ಆಧಾರಿತ ಭೂತಯ್ಯನ ಮಗ ಅಯ್ಯು, ಚಿತ್ರರಂಗದಲ್ಲಿ ವಿಷ್ಣುವರ್ಧನ್ಗೆ ಭದ್ರವಾದ ನೆಲೆ ನೀಡಿದ ಚಿತ್ರ.
ಜಮೀನ್ದಾರ ಭೂತಯ್ಯ(ಎಂ.ಪಿ. ಶಂಕರ್) ಭಾರಿ ಜುಗ್ಗ. ಇನ್ನೊಬ್ಬರ ತಲೆಒಡೆದು ದುಡ್ಡುಮಾಡುವ ವ್ಯಕ್ತಿ. ಸುಳ್ಳು ದಾಖಲೆಗಳ ಮೂಲಕ ಇನ್ನೊಬ್ಬರ ಜಮೀನು ಕಬಳಿಸುವಾತ. ಊರಿನ ಜನರಿಗೆ ಆತನೆಂದರೆ ತಿರಸ್ಕಾರ. ಆತನ ಹಾದಿಯಲ್ಲೇ ಸಾಗುವ ಮಗ ಅಯ್ಯು(ಲೋಕೇಶ್). ಊರ ಮಂದಿಗೆ ಮೋಸ ಮಾಡಿ ತನ್ನ ಬದುಕು ಕಟ್ಟಿಕೊಳ್ಳುವ ಭೂತಯ್ಯ ಮೋಸ ಮಾಡುತ್ತಲೆ ಜೀವ ಬಿಡುತ್ತಾನೆ. ಆತನ ನಂತರ ಮಗ ಅಯ್ಯು ಸಹ ಅದೇ ರೀತಿ ನಡವಳಿಕೆ ಪ್ರದರ್ಶಿಸುತ್ತಾನೆ. ನಡುವೆ ಊರಿನ ವ್ಯಕ್ತಿಯೊಬ್ಬನ ಮಗ ಗುಳ್ಳ (ವಿಷ್ಣುವರ್ಧನ್)ನೊಂದಿಗೆ ಹಗೆ ಬೆಳೆಯುತ್ತದೆ. ಅಯ್ಯುವಿನ ವಿರುದ್ಧ ಗುಳ್ಳ ತಿರುಗಿ ಬೀಳುತ್ತಾನೆ. ಇಬ್ಬರ ನಡುವೆ ಆಸ್ತಿ ಪತ್ರಕ್ಕಾಗಿ ಗಲಾಟೆ ಆಗುತ್ತದೆ. ಇಬ್ಬರೂ ಕೋರ್ಟ್  ಮೆಟ್ಟಿಲನ್ನು ಏರುತ್ತಾರೆ. ಅಲ್ಲಿ ಗುಳ್ಳ ಸೋಲುತ್ತಾನೆ. ಆ ನಂತರ ಚಿತ್ರ ಅನೇಕ ತಿರುವುಗಳನ್ನು ಕಾಣುತ್ತದೆ.
ಪರಸ್ಪರ ವಿರೋಧಿಗಳಾದ ಅಯ್ಯು ಹಾಗೂ ಗುಳ್ಳ ಕೊನೆಯಲ್ಲಿ ಮಿತ್ರರಾಗುತ್ತಾರೆ. ತಂದೆ ಭೂತಯ್ಯನಂತೆ ದುರ್ಗುಣವನ್ನು ಪ್ರದರ್ಶಿಸುತ್ತಿದ್ದ ಅಯ್ಯು ಒಳ್ಳೆಯವನಾಗುತ್ತಾನೆ ಇದು ಚಿತ್ರದ ತಿರುಳು. ಸಂಪೂರ್ಣ ಚಿತ್ರ ಚಿಕ್ಕಮಂಗಳೂರಿನ ಕಳಸಾಪುರದಲ್ಲಿ ಚಿತ್ರೀಕರಣಗೊಂಡಿದೆ.
ಚಿತ್ರದಲ್ಲಿ ವಿಷ್ಣು, ಲೋಕೇಶ್, ಎಂ. ಪಿ ಶಂಕರ್, ಬಾಲಕೃಷ್ಣ, ಲೋಕೇಶ್, ದಿನೇಶ್ ಸೇರಿದಂತೆ ಹಲವರು ಅಮೋಘ ಅಭಿನಯ ನೀಡಿದ್ದಾರೆ. ಚಿತ್ರಕ್ಕೆ ಸಂಗೀತ ನೀಡಿದ್ದು ಜಿ. ಕೆ. ವೆಂಕಟೇಶ್. ಪಿ. ಬಿ ಶ್ರೀನಿವಾಸ್ ಹಾಗೂ ಎಸ್. ಜಾನಕಿ ಅವರ ಸ್ವರಗಳಲ್ಲಿ ಮೂಡಿಬಂದ `ಮಲೆನಾಡ ಹೆಣ್ಣ ಮೈಬಣ್ಣ' ಹಾಡನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.
ಚಿತ್ರದಲ್ಲಿ ಅನೇಕ ಮರೆಯಲಾರದ ಸನ್ನಿವೇಶಗಳಿವೆ. ಕೋರ್ಟ್ ಪ್ರಕರಣ ಮುಗಿಸಿ ವಾಪಸ್ ಬರುವ ಗುಳ್ಳನ ಮಿತ್ರರು ಹೊಟೆಲಲ್ಲಿ ಊಟ ಮಾಡುವುದು, ಲೋಕನಾಥ್ ಉಪ್ಪಿನಕಾಯಿಗಾಗಿ ಹಾತೊರೆಯುವುದು, ಭೂತಯ್ಯ ಸಿದ್ದಿಯ ಎತ್ತುಗಳನ್ನು ಕದ್ದು ಮಾರಾಟ ಮಾಡುವುದು, ಮಾವ ಬಾಲಕೃಷ್ಣ ಅಯ್ಯುವಿಗೆ ಬುದ್ಧಿಕಲಿಸಲು ಪ್ರಯತ್ನಿಸುವುದು, ಮಳೆಯಿಂದ ಅಣೆಕಟ್ಟು ಒಡೆದು ಅಯ್ಯುವಿನ ಮನೆ ಮುಳುಗುವುದು, ಗುಳ್ಳ ಅಯ್ಯುವಿನ ಹೆಂಡತಿ ಮಕ್ಕಳನ್ನು ಕಾಪುಡುವ ಸನ್ನಿವೇಶಗಳನ್ನು ಎಂದಿಗೂ ಮರೆಯುವಂತಿಲ್ಲ.
ಭೂತಯ್ಯನ ಮಗ ಅಯ್ಯು ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಸಮಾಜಕ್ಕೆ ಉತ್ತಮ ಅಂಶಗಳನ್ನು ತಿಳಿಸುವ ಚಿತ್ರ ಕನ್ನಡದ ಅತ್ಯುತ್ತಮ ಚಿತ್ರಗಳಲ್ಲೊಂದು. ಕನ್ನಡ ನಾಡಿನ ಎಲ್ಲ ಉತ್ತಮ ಅಂಶಗಳನ್ನು ಸಾರುವ ಚಿತ್ರ ಇದು. ಮಲೆನಾಡು, ಬಯಲು ಸೀಮೆ ಮುಂತಾದ ವಿವಿಧ ಭಾಗಗಳ ಜನಜೀವನವನ್ನು ಸೂಕ್ಷ್ಮವಾಗಿ ವಿವರಿಸುತ್ತದೆ. ಎಲ್ಲ ವಯೋಮಾನದವರೂ ನೋಡಲೇ ಬೇಕಾದ ಚಿತ್ರ ಇದು.

ವಿನಯ್ ದಂಟಕಲ್

Tuesday, June 29, 2010

ಹೆಣ್ಣಿನ ಮಾನಸಿಕ ತುಮುಲದ ಅನಾವರಣ ಶರಪಂಜರ

 ಚಿತ್ರ ಬಿಡುಗಡೆ : ೧೯೭೧ 
ನಿರ್ದೇಶಕ : ಪುಟ್ಟಣ್ಣ ಕಣಗಾಲ್
ಚಿತ್ರಕಥೆ : ಪುಟ್ಟಣ್ಣ ಕಣಗಾಲ್
ಕಥೆ : ತ್ರಿವೇಣಿ
ನಿರ್ಮಾಪಕ : ಸಿ. ಎಸ್. ರಾಜಾ
ಸಂಗೀತ : ವಿಜಯಭಾಸ್ಕರ್
ಛಾಯಾಗ್ರಹಣ : ಡಿ. ವಿ. ರಾಜಾರಾಮ್
ತಾರಾಗಣದಲ್ಲಿ : ಕಲ್ಪನಾ, ಗಂಗಾಧರ್, ಶಿವರಾಮ್, ಲೀಲಾವತಿ ಮುಂತಾದವರು


ಪುಟ್ಟಣ್ಣನವರ ಮೇರು ನಿರ್ದೇಶನದಲ್ಲಿ ಮೂಡಿಬಂದ ಚಿತ್ರ ಶರಪಂಜರ. ಕಾದಂಬರಿಗಾರ್ತಿ  ತ್ರಿವೇಣಿ ಅವರ ಕಾದಂಬರಿ ಆಧಾರಿತ ಕಥೆಯೇ ಶರಪಂಜರ. ಕಥಾನಾಯಕ ಸತೀಶ್ (ಗಂಗಾಧರ್) ಹಾಗೂ ನಾಯಕಿ ಕಾವೇರಿ (ಕಲ್ಪನಾ) ದಂಪತಿಗಳ ಸುತ್ತ ಹೆಣೆಯಲ್ಪಟ್ಟ ಕಥೆಯೇ ಶರಪಂಜರ. ಪ್ರೇಮ ವಿವಾಹದ ನಂತರ ಕಾವೇರಿ ಬದುಕು ಯಾವ ರೀತಿಯ ತಿರುವುಗಳನ್ನು ಪಡೆಯುತ್ತದೆ ಎಂಬುದು ಕಥಾವಸ್ತು. ಮದುವೆಯ ನಂತರ ಎಲ್ಲರೀತಿಯ ಸುಖಗಳನ್ನೂ ಅನುಭವಿಸುತ್ತಿರುವ ಹೊತ್ತಿನಲ್ಲಿ ಮದುವೆಗೆ ಮುನ್ನ ನಡೆದ ಘಟನೆಯ ಕಾರಣದಿಂದ ಕಾವೇರಿ ತನ್ನ ಎರಡನೇ ಹೆರಿಗೆಯ ವೇಳೆ ಮಾನಸಿಕವಾಗಿ ಅಸ್ವಸ್ಥಳಾಗುತ್ತಾಳೆ. ಮಾನಸಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿ ಮನೆಗೆ ಮರಳುತ್ತಾಳೆ. ಆ ನಂತರ ಮನೆ, ಮಗ, ಸಮಾಜ ಆಕೆಯನ್ನು ಯಾವ ರೀತಿ ಕಾಣುತ್ತದೆ, ಆಕೆಯ ಜೊತೆ ಹೇಗೆ ನಡೆದುಕೊಳ್ಳುತ್ತದೆ ಎಂಬುದೇ ಕಥಾ ಹಂದರ. ಗಂಡ ಹಾಗೂ ಮನೆಯ ಸದಸ್ಯರ ಅಸಡ್ಡೆ, ಹಳೆಯ ಘಟನೆ ನೀಡುವ ಮಾನಸಿಕ ತುಮುಲ ಕಾವೇರಿಯನ್ನು ಕಾಡುತ್ತವೆ. ಕೊನೆಯಲ್ಲಿ ಆಕೆ ಈ ಎಲ್ಲ ತೊಂದರೆಗಳಿಂದ ಬಿಡುಗಡೆ ಹೊಂದುತ್ತಾಳೆಯೆ? ಅಸಡ್ಡೆಯಿಂದ ಕಾಣುವ ಗಂಡ ಆಕೆಯನ್ನು ಮತ್ತೆ ಒಪ್ಪಿಕೊಳ್ಳುತ್ತಾನೆಯೆ ಎಂಬುದು ಚಿತ್ರದ ಕ್ಲೈಮ್ಯಾಕ್ಸ್.
ಕಲ್ಪನಾ ಅಭಿನಯದ ಸರ್ವಶ್ರೇಷ್ಠ ಪ್ರದರ್ಶನವನ್ನು ಚಿತ್ರದಲ್ಲಿ ಕಾಣಬಹುದು. ಮಾನಸಿಕ ವೇದನೆಯನ್ನು ಕಲ್ಪನಾ ಎಂದೂ ಮರೆಯಲು ಸಾಧ್ಯವೇ ಇಲ್ಲದಂತೆ ಕಟ್ಟಿಕೊಡುತ್ತಾಳೆ. ಚಿತ್ರದಲ್ಲಿ ಆಕೆಯ ನಟನೆ ಎಲ್ಲರ ಕಣ್ಣಿನಲ್ಲಿಯೂ ನೀರು ತರಿಸುವಂತಿದೆ. ಮತ್ತೆ ಮತ್ತೆ ಈಕೆ ಬಿಡದೇ ಕಾಡುತ್ತಾಳೆ. ಇಂತಹ ಶ್ರೇಷ್ಠ ಅಭಿನಯ ಆಕೆಗೆ ರಾಜ್ಯ ಪ್ರಶಸ್ತಿಯನ್ನೂ ತಂದುಕೊಟ್ಟಿದೆ. ಸತೀಶನ ಪಾತ್ರದಾರಿ ಗಂಗಾಧರ್, ಅಡುಗೆ ಭಟ್ಟ ಶಿವರಾಂ ಸಹ ಚಿತ್ರದಲ್ಲಿ ಅತ್ಯುತ್ತಮವಾಗಿ ಅಭಿನಯಿಸಿದ್ದಾರೆ.
ಚಿತ್ರದ ಹಾಡುಗಳೂ ಅಷ್ಟೆ ಮಧುರವಾದವುಗಳು. ವಿಜಯ್ ಭಾಸ್ಕರ್ ಸಂಗೀತದಲ್ಲಿ ಅತ್ಯುತ್ತಮವಾಗಿ ಮೂಡಿಬಂದಿವೆ. `ಕೊಡಗಿನ ಕಾವೇರಿ', `ಹದಿನಾಲ್ಕು ವರ್ಷ ವನವಾಸದಿಂದ..', `ಬಿಳಿಗಿರಿ ರಂಗಯ್ಯ..' `ಸಂದೇಶ ಮೇಘ ಸಂದೇಶ..' ವರಕವಿ ಬೇಂದ್ರೆ ವಿರಚಿತ `ಉತ್ತರ ಧ್ರುವದಿಂ ದಕ್ಷಿಣ ಧ್ರುವಕೂ...' ಈ ಹಾಡುಗಳು ಮತ್ತೆ ಮತ್ತೆ ಕೇಳಬೇಕೆನಿಸುತ್ತವೆ. ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುತ್ತವೆ.
ಈ ಚಿತ್ರದ ನಂತರ ನಟಿ ಕಲ್ಪನಾ ಕನ್ನಡದಲ್ಲಿ ಬಿಡುವಿಲ್ಲದ ನಟಿಯಾದರೆ ನಿದರ್ೇಶಕ ಪುಟ್ಟಣ್ಣ ಕಣಗಾಲ್ ಅತ್ಯುತ್ತಮ ನಿದರ್ೇಶಕ ರಾಜ್ಯ ಪ್ರಶಸ್ತಿ ಲಭಿಸಿತು. ಇಂದಿನ ನಟಿಯರೂ ತಾವು ಶರಪಂಜರದ ಕಲ್ಪನಾರಂತೆ ನಟಿಸಬೇಕು ಎಂದು ಬಯಸುವುದು ಈ ಚಿತ್ರದಲ್ಲಿ ಅವರ ನಟನೆಗೆ ನಿದರ್ಶನ. ಈ ಚಿತ್ರದ ನಂತರ ಕನ್ನಡದಲ್ಲಿ ಅದೆಷ್ಟೋ ಮಾನಸಿಕ ತುಮುಲಗಳನ್ನು ಬಿಂಬಿಸುವ ಚಿತ್ರಗಳು ಬಂದವು. ಆದರೆ ಅವ್ಯಾವವೂ ಈ ಚಿತ್ರದಷ್ಟು ಯಶಸ್ವಿಯಾಗಲಿಲ್ಲ.
ಪುಟ್ಟಣ್ಣ, ಕಲ್ಪನಾ, ವಿಜಯ್ ಭಾಸ್ಕರ್ ಮುಂತಾದ ಮೇರು ಕಲಾವಿದರು, ತಂತ್ರಜ್ಞರ ಶ್ರಮದ ಪರಿಣಾಮ ಶರಪಂಜರ ಮೂರು ದಶಕಗಳ ನಂತರವೂ ಕ್ಲಾಸಿಕ್ ಚಿತ್ರಗಳ, ಕನ್ನಡದ ಅತ್ಯುತ್ತಮ ಚಿತ್ರಗಳ ಸಾಲಿನಲ್ಲಿ ಒಂದೆನಿಸಿಕೊಂಡಿದೆ.

Monday, June 21, 2010

ಸಕಲಕಾಲಕ್ಕೂ ಸಲ್ಲುವ `ಕಸ್ತೂರಿ ನಿವಾಸ'


ನಿರದೆಶಕರು : ದೊರೈ-ಭಗವಾನ್
ಸಂಗೀತ : ಜಿ. ಕೆ. ವೆಂಕಟೇಶ್
ಚಿತ್ರ ಬಿಡುಗಡೆ : 1971
ಚಿತ್ರಕಥೆ, ಸಂಭಾಷಣೆ : ಚಿ. ಉದಯ್ಶಂಕರ್
ಮೂಲ ಕಥೆ : ಜಿ. ಬಾಲಸುಬ್ರಮಣ್ಯಂ (ತಮಿಳು)
ತಾರಾಗಣದಲ್ಲಿ : ಡಾ. ರಾಜ್ಕುಮಾರ್, ಜಯಂತಿ, ಕೆ. ಎಸ್. ಅಶ್ವಥ್, ಆರತಿ ಮುಂತಾದವರು.

ಕಸ್ತೂರಿ ನಿವಾಸ ಕನ್ನಡ ಚಿತ್ರರಂಗದ ಎಂದೂ ಮರೆಯದ ಚಿತ್ರ. ಹಲವು ವಿಶಿಷ್ಟ ಕಾರಣಗಳಿಂದ ಇದು ಸೆಳೆಯಲ್ಪಡುತ್ತದೆ. ತಮಿಳಿನಲ್ಲಿ ಶಿವಾಜಿ ಗಣೇಶನ್ ಗಾಗಿ ರಚನೆಯಾದ ಕಥೆಯನ್ನು ಅಲ್ಪಸ್ವಲ್ಪ ಮಾರ್ಪಡಿಸಿ ಕನ್ನಡದಲ್ಲಿ ಚಿತ್ರ ನಿರ್ಮಿಸಲಾಗಿದೆ. ಬೆಂಕಿಪೊಟ್ಟಣ ನಿರ್ಮಾಣದ ಕಾರಖಾನೆಯ ಉದ್ಯಮಿಯ ವಿಫಲ ಪ್ರೇಮಕಥೆಯೇ ಕಸ್ತೂರಿ ನಿವಾಸ. ಈ ಕಥೆಗೆ ಶಿವಾಜಿ ಗಣೇಶನ್ ಒಪ್ಪಿಗೆ ನೀಡದ ಕಾರಣ ಕನ್ನಡದಲ್ಲಿ ಕ್ಲಾಸಿಕ್ ಚಿತ್ರವಾಗಿ ಮೂಡಿ ಬಂದಿತು. ಈ ಚಿತ್ರ ಕನ್ನಡದಲ್ಲಿ ತಯಾರಾಗಲು ಚಿತ್ರ ಸಂಭಾಷಣಕಾರ ಚಿ. ಉದಯ್ ಶಂಕರ್, ದೊರೈ ಭಗವಾನ್ ಹಾಗೂ ಡಾ. ರಾಜ್ ಅವರ ಪಾತ್ರ ಬಹಳ ದೊಡ್ಡದು.
ಕಥಾನಾಯಕ ರವಿ ಅಮೆರಿಕಾದಲ್ಲಿ ಬ್ಯುಸಿನೆಸ್ ಕೋರ್ಸ್  ಮುಗಿಸಿ ಭಾರತಕ್ಕೆ ಮರಳುವ ಉದ್ಯಮಿ. ಭಾರತದಲ್ಲಿ ಆತ ಬೆಂಕಿಪೊಟ್ಟಣ ಕಾರಖಾನೆ ಪ್ರಾರಂಭಿಸುತ್ತಾನೆ. ನಡುವೆಯೇ ತನ್ನ ಕಾರ್ಯದರಷಿ  ಲೀಲಾ(ಜಯಂತಿ)ಳ ಪ್ರೇಮಪಾಶದಲ್ಲಿ ಬೀಳುತ್ತಾನೆ. ಆದರೆ ಆಕೆ ರವಿಯ ಮಿತ್ರ ಚಂದ್ರೂನನ್ನು ಕಾರಣಾಂತರಗಳಿಂದ ಮದುವೆಯಾಗುತ್ತಾಳೆ. ರವಿ ಸಹ ಬೇರೊಬ್ಬಳನ್ನು ಮದುವೆಯಾಗುತ್ತಾನೆ. ಅಲ್ಲದೆ ಅಪಘಾತವೊಂದರಲ್ಲಿ ಹೆಂಡತಿ ಹಾಗೂ ತನ್ನ ಮಗಳನ್ನು ಕಳೆದುಕೊಳ್ಳುತ್ತಾನೆ. ಈ ನಡುವೆ ಲಾಭದ ಹಾದಿಯಲ್ಲಿದ್ದ ಆತನ ಕಾಖರ್ಾನೆ ನಷ್ಟದೆಡೆಗೆ ಮುಖಮಾಡುತ್ತದೆ. ಅದಕ್ಕೆ ಮಿತ್ರ ಚಂದ್ರು ಸಹ ಕಾರಣನಾಗಿರುತ್ತಾನೆ. ಈ ಹಂತದಲ್ಲಿ ಲೀಲಾ ಮತ್ತೊಮ್ಮೆ ಆತನ ಬದುಕಿನಲ್ಲಿ ಬರುತ್ತಾಳೆ. ಲೀಲಾಳ ಮಗಳನ್ನು ರವಿ ಹಚ್ಚಿಕೊಳ್ಳುತ್ತಾನೆ. ಹೀಗೆ ಏರಿಳಿತದ ಬದುಕನ್ನು ಕಾಣುವ ರವಿ ಕೊನೆಯಲ್ಲಿ ಏನಾಗುತ್ತಾನೆ ಎಂಬುದು ಚಿತ್ರದ ಕಥಾ ಹಂದರ.
ರವಿ ಪಾತ್ರಧಾರಿ ರಾಜ್ಕುಮಾರ್ ಮನೋಜ್ಞವಾಗಿ ನಟಿಸಿ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುತ್ತಾರೆ. ಮನೆಯ ಕೆಲಸಗಾರನ ಪಾತ್ರದಲ್ಲಿ ನಟಿಸಿರುವ ಅಶ್ವಥ್ರಂತೂ ಪರಕಾಯ ಪ್ರವೇಶ ಮಾಡಿದಂತೆ ನಟಿಸಿದ್ದಾರೆ. ಜಯಂತಿ, ಆರತಿ ತಕ್ಕಮಟ್ಟಿಗೆ ನಟಿಸಿದ್ದಾರೆ.
ಚಿತ್ರದಲ್ಲಿನ ಎಲ್ಲಾ ಹಾಡುಗಳೂ ಅತ್ಯಂತ ಸುಂದರವಾಗಿವೆ. ಮತ್ತೆ ಮತ್ತೆ ಕೇಳಬೇಕೆನಿಸುವ ಈ ಹಾಡುಗಳು ಜೀವನ ತತ್ವವನ್ನು ಸಾರುವಂತವುಗಳು. ಚಿತ್ರಕ್ಕೆ ಸಂಗೀತ ನೀಡಿದ್ದು ಜಿ. ಕೆ. ವೆಂಕಟೇಶ್. `ಆಡಿಸಿ ನೋಡು ಬೀಳಿಸಿನೋಡು',`ಆಡಿಸಿದಾತಾ ಬೇಸರಮೂಡಿ', `ಎಲ್ಲೇ ಇರು ಹೇಗೇ ಇರು', `ಆಡೋಣ ನೀನು ನಾನು', `ನೀ ಬಂದು ನಿಂತಾಗ' ಮುಂತಾದ ಹಾಡುಗಳು ಮತ್ತೆ ಮತ್ತೆ ಕೇಳುವಂತಿವೆ. `ಆಡಿಸಿ ನೋಡು ಬೀಳಿಸಿ ನೋಡು' ಹಾಗೂ `ಆಡಿಸಿದಾತಾ ಬೇಸರ ಮೂಡಿ' ಈ ಗೀತೆಗಳು ಜೀವನ ತತ್ವವನ್ನು ಸಾರುತ್ತವೆ.
ಕನ್ನಡದ ಎವರ್ಗ್ರೀನ್ ಚಿತ್ರ ಕಸ್ತೂರಿ ನಿವಾಸವನ್ನು ನೋಡದಿದ್ದರೆ ಏನನ್ನೋ ಕಳೆದುಕೊಂಡಂತಹ ಅನುಭವ. ಎರಡೂ ಮುಕ್ಕಾಲು ತಾಸುಗಳ ಈ ಚಿತ್ರ ವೀಕ್ಷಿಸಿದವರಿಗೆ ನೀಡುವ ಅನುಭವವೇ ಬೇರೆ. `ಕಸ್ತೂರಿ ನಿವಾಸ' ಕನ್ನಡದ ಕಂಪನ್ನು ಕಸ್ತೂರಿಯಂತೆ ಬೀರಿದ ಚಿತ್ರ.

Monday, June 14, 2010

ಬಡ ಕವಿಯ ಭಾವಗೀತೆ ಪ್ಯಾಸಾ

ನಿರದೆಶಕ : ಗುರುದತ್
ನಿರಮಾಪಕ : ಗುರುದತ್
ಕಥೆ : ಅಬ್ರಾರ್ ಅಲ್ವಿ
ಛಾಯಾಗ್ರಹಣ : ವಿ.ಕೆ. ಮೂರ್ತಿ 
ಸಂಗೀತ : ಎಸ್. ಡಿ. ಬರ್ಮನ್
ಚಿತ್ರ ಬಿಡುಗಡೆ : ಫೆಬ್ರವರಿ 19, 1957
ತಾರಾಗಣದಲ್ಲಿ : ಗುರುದತ್, ವಹೀದಾ ರೆಹಮಾನ್, ಮಾಲಾ ಸಿನ್ಹ, ಜಾನಿ ವಾಕರ್, ರೆಹಮಾನ್ ಮುಂತಾದವರು.

ಬಡ ಕವಿಯೊಬ್ಬನ ವಿಫಲ ಪ್ರೇಮ, ಪ್ರೇಮವನ್ನು ಪಡೆಯಲು ಆ ಕವಿ ತೊಳಲಾಡುವುದು, ಪ್ರೇಯಸಿಯ ಮೋಸ ಈ ಮುಂತಾದ ಕಥಾ ಹಂದರವನ್ನಿಟ್ಟುಕೊಂಡು ಸುಂದರ ಚಿತ್ರವನ್ನು ತಯಾರಿಸಿದ್ದಾರೆ ಗುರುದತ್. ಬದುಕಿನಲ್ಲಿ ನೆಲೆ ನಿಲ್ಲಲಾಗದೇ, ಬರೆದ ಕವಿತೆಗಳನ್ನು ಪ್ರಕಟಿಸಲು ಹಣವಿಲ್ಲದೆ ಪರಿತಪಿಸುವ ಕವಿ ವಿಜಯ್ನ ಪಾತ್ರದಲ್ಲಿ ಮೋಹಕ ಅಭಿನಯ ನೀಡಿದ್ದು ಗುರುದತ್. ಈ ಕವಿಯ ಕಾಲೇಜು ದಿನಗಳ ಪ್ರೇಯಸಿಯಾಗಿ ಗುರುದತ್ಗೆ ಮೋಸಮಾಡುವ ಪಾತ್ರ ನಿರ್ವಹಿಸಿದ್ದು ಮಾಲಾ ಸಿನ್ಹಾ. ಈಕೆ ಮಾಡುವ ಮೋಸ ನೋಡುಗರ ಕಣ್ಣಿನಲ್ಲಿ ನೀರು ತರಿಸುತ್ತದೆ.
ಈ ಚಿತ್ರದ ಮುಖ್ಯ ಆಕರ್ಷಣೆ ವಹೀದಾ ರೆಹಮಾನ್. ಈ ಚಿತ್ರ ವಹೀದಾಗೆ ಪಾದಾರ್ಪಣೆಯ ಚಿತ್ರ. ತನ್ನ ಮನೋಜ್ಞ ಅಭಿನಯದಿಂದ ಎಲ್ಲರ ಮನಸ್ಸನ್ನು ಸೂರೆಗೊಳ್ಳುವ ಈಕೆ ಚಿತ್ರ ರಸಿಕರ ಹೃದಯದಲ್ಲಿ ಶಾಶ್ವತ ಸ್ಥಾನ ಗಳಿಸಿಕೊಂಡುಬಿಡುತ್ತಾಳೆ. ಚಿತ್ರದಲ್ಲಿ ಈಕೆಯದು ಗುಲಾಬೂ ಎಂಬ ವೇಶ್ಯೆಯ ಪಾತ್ರ. ವೇಶ್ಯೆಯಾದರೂ ಈಕೆಗೆ ವಿಜಯ್ನ ಕವನಗಳನ್ನು ಕೇಳುವ ಆಸೆ. ಆತನ ಕವನಗಳನ್ನು ಆಲಿಸುತ್ತಲೇ ವಿಜಯ್ನ ಪ್ರೇಮದಲ್ಲಿ ಬೀಳುತ್ತಾಳೆ. ಆತನ ಕವನಗಳನ್ನು ಪ್ರಕಟಿಸುತ್ತಾಳೆ. ಈ ಸಂದರ್ಭದಲ್ಲಿ ಆತನ ಬದುಕು ವಿಚಿತ್ರ ತಿರುವುಗಳನ್ನು ಪಡೆಯುತ್ತದೆ. ಶ್ರೀಮಂತ ಉದ್ಯಮಿ (ಮಾಲಾ ಸಿನ್ಹಾಳ ಪತಿ) ವಿಜಯ್ನ ಕೊಲೆಗೆ ಪ್ರಯತ್ನಿಸುತ್ತಾನೆ. ಈ ನಡುವೆ ವಿಜಯ್ ಬದುಕಿರುವಂತೆಯೇ ಸತ್ತುಹೋಗಿದ್ದಾನೆಂದು ಘೋಷಿಸಲ್ಪಡುತ್ತಾನೆ. ಇದು ಚಿತ್ರದ ಸಾರಾಂಶ. ಚಿತ್ರದ ಕ್ಲೈಮ್ಯಾಕ್ಸ್ ಅತ್ಯುತ್ತಮವಾಗಿ ಮೂಡಿಬಂದಿದೆ.
ಚಿತ್ರದಲ್ಲಿ ಗುರುದತ್ರದ್ದು ಅಮೋಘ ನಟನೆ. ವಿಜಯ್ ಪಾತ್ರವನ್ನು ನಿರ್ವಹಿಸಲು ಇನ್ಯಾರಿಂದಲೂ ಸಾಧ್ಯವಿಲ್ಲ ಎಂಬಂತಹ ನಟನೆ ಅವರದ್ದು. ವಹೀದಾ ರೆಹಮಾನ್ ನೋಡುಗರನ್ನು ಸೆಳೆಯುತ್ತಾರೆ. ಗುರುದತ್ನ ಮಿತ್ರನ ಪಾತ್ರದಲ್ಲಿ ನಟಿಸಿರುವ ಜಾನಿವಾಕರ್ ತಮ್ಮ ಕಾಮಿಡಿಯಿಂದ ನಗೆ ಉಕ್ಕಿಸುತ್ತಾರೆ.
`ಜಾನೆ ಕ್ಯಾ ತೂನೆ ಕಹಿ ಭಿ',`ಹಮ್ ಆಪ್ ಕಿ ಆಂಖೋ ಮೇ',`ಜಾನೆ ವೋ ಕೈಸೆ ಲೋಗ್' ಮುಂತಾದ ಹಾಡುಗಳು ಮತ್ತೆ ಮತ್ತೆ ಕೇಳುವಂತಿದೆ. ಚಿತ್ರಕ್ಕೆ ಸಂಗೀತ ನೀಡಿದ್ದು ಎಸ್. ಡಿ. ಬರ್ಮನ್. ಮೊಹಮ್ಮದ್ ರಫಿ ಹಾಗೂ ಗುರುದತ್ ಅವರಿಂದ ಒಳ್ಳೊಳ್ಳೆಯ ಹಾಡುಗಳನ್ನು ಹಾಡಿಸಿದ ಖ್ಯಾತಿ ಬರ್ಮನ್ಗೆ ಸಲ್ಲುತ್ತದೆ.
ಬಾಲಿವುಡ್ನ ಎಂದೂ ಮರೆಯದ ಚಿತ್ರ ಪ್ಯಾಸಾ. ಎಲ್ಲ ಕಾಲದ ಜನರನ್ನು ಇದು ಸೆಳೆಯುತ್ತದೆ.
 

Thursday, June 10, 2010

ಶಹಬ್ಬಾಸ್ ತಮನ್ನಾ


ಈಯಮ್ಮ ಪರದೆ ಮೇಲೆ ಬಂದರೆ ಸಾಕು ಪಡ್ಡೆ ಹುಡುಗರು ಹುಚ್ಚೆದ್ದು ಕುಣಿಯುತ್ತಾರೆ. ಈಕೆಯ ಸ್ನಿಗ್ಧ ಕಣ್ಣಿಗೆ ಮರುಳಾಗುತ್ತಾರೆ. ಈಕೆಯೂ ಅಷ್ಟೆ ಹುಡುಗರ ಹುಚ್ಚಿಗೆ ಮತ್ತಷ್ಟು ತುಪ್ಪ ಸುರಿದು ಹಾಯ್ ಹೇಳಿ ಹೊರಟು ಬಿಡುತ್ತಾಳೆ.
ಇವಳೇ ತಮನ್ನಾ. ತಮಿಳು, ತೆಲಗು ಮುಂತಾದ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗಗಳೂ ಬಯಸುವ ಹುಡುಗಿ. ನಿಮರ್ಾಪಕರು ಈಕೆಯ ಮನೆಯ ಮುಂದೆ ಕಾಲ್ಶೀಟ್ಗಾಗಿ ಕಾದುಕುಳಿತು ಬಿಡುತ್ತಾರೆ. ಇಂತಹ ತಮನ್ನಾ ವಲಸೆ ಹುಡುಗಿ ಎಂದರೆ ನಂಬಲೇ ಬೇಕು.
ಅಹುದು, ತಮನ್ನಾ ಹುಟ್ಟಿದ್ದು ದೂರದ ಸಿಂಧ್ ಪ್ರಾಂತ್ಯದಲ್ಲಿ. ಈಕೆಯ ತಂದೆ ತಾಯಿಗಳು ಸಿಂಧಿಗಳು. ಹಾಗೆಯೇ ಈಕೆ ಬೆಳೆದಿದ್ದು, ಓದಿದ್ದು, ಅಕ್ಷರಾಭ್ಯಾಸ ಮಾಡಿದ್ದು ಮುಂಬಯಿಯಲ್ಲ. ಆದರೆ ಈಗ ಈಕೆಯ ಪಾಲಿಗೆ ಸಿನಿಮಾ ಜಗತ್ತಿನ ಬಾಗಿಲು ತೆರೆದಿದ್ದು ಹೈದರಾಬಾದ್ ಹಾಗೂ ಚೆನ್ನೈ.
ಸಿಂಧಿಯಾಗಿ, ಹಿಂದಿಯಾಗಿ ಬೆಳೆದ ತಮನ್ನಾ ಈಗ ಪಕ್ಕಾ ತಮಿಳರ ಪೊಣ್ಣು, ತೆಲುಗರ ಪಿಲ್ಲಾ ಆಗಿಬಿಟ್ಟಿದ್ದಾಳೆ. ತೆಲುಗಿನ ಹಾಲಿಡೇಸ್, ತಮಿಳಿನ ಆಯನ್ ಚಿತ್ರಗಳಲ್ಲಿ ನಟಿಸಿ ಭಾರಿ ಹೆಸರು ಮಾಡಿದ ಈಕೆ ಈಗ ತಮಿಳು, ತೆಲಗು ಚಿತ್ರರಂಗದಲ್ಲಿ ತುಂಬಾ ಬ್ಯೂಸಿ. ಆದರೆ ಈ ನಡುವೆ ಈಕೆ ತಮಿಳು ಭಾಷೆಯನ್ನು ಅದು ಹೆಂಗೋ ಕಲಿತು ಬಿಟ್ಟಿದ್ದಾಳೆ.
ಇದರಿಂದ ತಮಿಳು ಮಂದಿಗಳು ಬಹಳ ದಿಲ್ಖುಷ್ ಆಗಿಬಿಟ್ಟಿದ್ದಾರಂತೆ. ತಮನ್ನಾ ತಮಿಳು ಕಲಿತಿರುವುದು ಹಿರಿಯ ನಟಿ ಖುಷ್ಬೂಗಂತೂ ಬಹಳ ಖುಷಿ ಕೊಟ್ಟಿದೆಯಂತೆ. ಇದ್ದರೆ ತಮನ್ನಾ ಹಾಗೆ ಇರಬೇಕು ಎಂದು ಬೆನ್ನು ತಟ್ಟಿರುವ ಖುಷ್ಬೂ ತಮಿಳು ಕಲಿಯದ ಹೀರೊಯಿನ್ಗಳ ಬಗ್ಗೆ ಸಖತ್ ಸಿಟ್ಟಾಗಿದ್ದಾರಂತೆ.
ಇನ್ನೂ ಒಂದು ವಿಶೇಷ ಸುದ್ದಿ ಏನೆಂದರೆ ತಮನ್ನಾ ಇದೀಗ ತೆಲುಗು ಭಾಷೆಯನ್ನೂ ಕಲಿಯಲು ಪ್ರಾರಂಭಿಸಿದ್ದಾಳಂತೆ. ತಮ್ಮದೇ ನಾಡಿನಲ್ಲಿ ಜನಿಸಿ ಮಾತ್ರಭಾಷೆ ಬಂದರೂ ಅದನ್ನು ಮರೆತು ಟಸ್ ಪುಸ್ ಅಂತ ಇಂಗ್ಲೀಷ್ನಲ್ಲಿ ಹರಟೆಕೊಚ್ಚುವ ನಟಿಯರಿಗಿಂತ ಭಿನ್ನ ಈ ತಮನ್ನಾ. ಶಹಬ್ಬಾಸ್ ತಮನ್ನಾ.