Thursday, February 24, 2011

ಇವರ ಸಾಧನೆಗೆ ಸಾಟಿ ಯಾರು??

ಕಾಲಿಲ್ಲದ ರಾಘವೇಂದ್ರ ಸಮುದ್ರ ನದಿಗಳನ್ನು ಗೆದ್ದ...

ನಮ್ಮ ಸಮಾಜದಲ್ಲಿ, ನಮ್ಮ ನಡುವೆ ನೂರಾರು ಅಂಗವಿಕಲ ವ್ಯಕ್ತಿಗಳನ್ನು ಕಾಣುತ್ತಿರುತ್ತೇವೆ. ಯಾವುದೋ ಒಂದು ರೀತಿಯಲ್ಲಿ ಅಂಗವೈಕಲ್ಯವನ್ನು ಹೊಂದಿರುವ ಇವರಿಗೆ ಜನ್ಮಜಾತವಾಗಿ ಕೆಲವು ಪ್ರತಿಭೆಗಳು ಬಂದಿರುತ್ತವೆ. ಮತ್ತೆ ಕೆಲವರು ತಮ್ಮ ಅಂಗವೈಕಲ್ಯ ಮರೆತು ಹೋಗುವಂತೆ ಕಷ್ಟಪಟ್ಟು ಸಾಧನೆ ಮಾಡುತ್ತಾರೆ. ವಿಶ್ವದಾದ್ಯಂತ ಹೆಸರುವಾಸಿಯಾಗುತ್ತಾರೆ. ಅಂತವರ ಸಾಲಿಗೆ ಸೇರುವ ಓರ್ವ ಸಾಧಕ ನಮ್ಮ ಕನ್ನಡ ನಾಡಿನಲ್ಲಿಯೇ ಇರುವ ರಾಘವೇಂದ್ರ ಅಣ್ವೇಕರ್. ನಮ್ಮ ನಾಡಿನಲ್ಲೇ ಇದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ ವ್ಯಕ್ತಿ ಈತ.
ರಾಘವೇಂದ್ರ ಅಣ್ವೇಕರ್ ತನ್ನ ಅಂಗವೈಕಲ್ಯವನ್ನೂ ಮೀರಿ ನಿಂತ ಛಲಗಾರ. ಹುಟ್ಟಿದ ಕೆಲವೇ ದಿನಗಳಲ್ಲಿ ಕಾಡಿದ್ದು ಪೋಲಿಯೋ. ಅದರಿಂದಾಗಿ ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡರೂ ಎದೆಗುಂದದೇ ಅಂತರಾಷ್ಟ್ರೀಯ ಈಜುಪಟುವಾಗಿ ರಾಘವೇಂದ್ರ ಬೆಳೆದುನಿಂತಿದ್ದಾನೆ. ದೈಹಿಕ ದೌರ್ಬಲ್ಯಗಳನ್ನು ಲೆಕ್ಕಿಸದೇ ಭಾರತಕ್ಕೆ ಕೀರ್ತಿ ತಂದುಕೊಟ್ಟ ಸಾಧಕ.
ಈಜಲಿಕ್ಕೆ ಕಾಲುಗಳೇಕೆ ಬೇಕು? ನಾನು ಕೈಗಳ ಮೂಲಕವೇ ಈಜಿ ತೋರಿಸಬಲ್ಲೆ ಎಂಬ ಛಲತೊಟ್ಟು ಅದನ್ನು ಮಾಡಿ ತೋರಿಸಿದ ಅಪರೂಪದ ಸಾಧಕ ರಾಘವೇಂದ್ರ. ಇವರ ಸಾಧನೆಗಳು ಬಹಳಷ್ಟು. ತಾವು ಪ್ರತಿನಿಧಿಸಿದ ಮೊಟ್ಟ ಮೊದಲ ರಾಷ್ಟ್ರೀಯ ವಿಶೇಷ ಚೇತನರ ಕ್ರೀಡಾಕೂಟದಲ್ಲಿ ಪದಕ ಗೆದ್ದು ತಮ್ಮ ಗೆಲುವಿನ ಅಭಿಯಾನ ಸಾಧಿಸಿದ ಇವರು ಇದುವರೆಗೂ ಹಿಮ್ಮೆಟ್ಟಿದ್ದೇ ಇಲ್ಲ. ಎದೆಗುಂದಿದ್ದಂತೂ ಇಲ್ಲವೇ ಇಲ್ಲ. ತಾವು ಭಾಗವಹಿಸಿದ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ 42 ಪದಕಗಳನ್ನು ಗೆಲ್ಲುವ ಮೂಲಕ ಯಾರೂ ಮಾಡದಂತಹ ಸಾಧನೆ ಮಾಡಿ ನಾಡಿಗೆ ಕೀರ್ತಿ ಕಲಶವಾಗಿದ್ದಾರೆ ರಾಘವೇಂದ್ರ.
ಈ ವಿಶಿಷ್ಟ ಈಜು ಪಟುವಿನ ಸಾಧನೆಗೆ ಕೊನೆಯಿಲ್ಲ. 2003ರಲ್ಲಿ ಹಾಂಕಾಂಗ್ನಲ್ಲಿ ನಡೆದಿದ್ದ ಅಂತರಾಷ್ಟ್ರೀಯ ಈಜು ಸ್ಫರ್ಧೆಯಲ್ಲಿ ಮೊಟ್ಟಮೊದಲ ಬಾರಿಗೆ ಭಾಗವಹಿಸಿ ಭಾರತವನ್ನು ಪ್ರತಿನಿಧಿಸಿ, ಚೊಚ್ಚಲ ಪ್ರಯತ್ನದಲ್ಲಿಯೇ 3 ಬೆಳ್ಳಿ ಹಾಗೂ 3 ಕಂಚುಗಳನ್ನು ಗೆದ್ದು ರಾಷ್ಟ್ರಕ್ಕೆ ಗೌರವ ತಂದಿದ್ದಾರೆ. ಅಲ್ಲದೆ ಕನ್ನಡ ನಾಡಿನ ಗೌರವವನ್ನು ವಿಶ್ವದ ಎಲ್ಲಡೆ ಪ್ರಚುರಪಡಿಸಿದ್ದರು.
ಇವರ ಸಾಧನೆಗೆ ಕೊನೆಯೇ ಇಲ್ಲ. ಇದುವರೆಗೆ 6 ಬಾರಿ ಅಂತರಾಷ್ಟ್ರೀಯ ಈಹು ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿರುವ ರಾಘವೇಂದ್ರ ಅಣ್ವೇಕರ್ 20ಕ್ಕೂ ಹೆಚ್ಚಿನ ಪದಕಗಳನ್ನು ಗೆದ್ದಿದ್ದಾರೆ. ಇವಷ್ಟೇ ಅಲ್ಲ. ಸಮುದ್ರದಲ್ಲಿ ಈಜುವ ಕಷ್ಟಕರ ಸಾಹಸಕ್ಕೂ ಕೈಹಾಕಿ ಅದರಲ್ಲೂ ಜಯಗಳಿಸಿದ್ದಾರೆ. ಅರಬ್ಬೀ ಸಮುದ್ರದಲ್ಲಿ 38 ಕಿಲೋಮೀಟರ್ ದೂರದವರೆಗೆ ಈಜುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ದೂರವನ್ನು ಇವರು 5 ಗಂಟೆ56 ನಿಮಿಷಗಳಲ್ಲಿ ಕ್ರಮಿಸಿ ಸಾಧನೆ ಮಾಡಿದ್ದಾರೆ. ಅಷ್ಟೇ ಏಕೆ ಭಾಗೀರತಿ ನದಿಯಲ್ಲಿ 81 ಕಿಲೋಮೀಟರ್ ದೂರವನ್ನು ಸತತ 11 ಗಂಟೆ 50 ನಿಮಿಷಗಳಕಾಲ ಈಜಿ ಗುರಿ ತಲುಪಿದ ಸಾಧನೆ ಮಾಡಿದ್ದಾರೆ. ಈಜುವುದರಲ್ಲಿ ಇನ್ನೂ ಹಲವೆಂಟು ಸಾಧನೆಗಳನ್ನು ಕೈಗೊಂಡಿರುವ ಇವರು ಸತತ 12 ಗಂಟೆಗಳ ಕಾಲ ಹಿಮ್ಮುಖವಾಗಿ ಈಜುವ ಹಾಗೂ ತೇಲುವ ಸಾಧನೆಯನ್ನು ಕೈಗೊಂಡಿದ್ದಾರೆ. ಇವರ ಈ ಸಾಧನೆಗೆ, ಶ್ರಮಕ್ಕೆ ನದಿ, ಸಮುದ್ರಗಳೇ ಹೆದರಿ ನಿಂತು ಬಿಟ್ಟಿವೆ.
ದೈಹಿಕ ದೌರ್ಬಲ್ಯವನ್ನು ಹೊಂದಿದ್ದರೂ ಅದಕ್ಕೆ ಅಂಜದೇ. ಅಳುಕದೆ ಶ್ರಮ ಹಾಕಿ, ಸಾಧನೆ ಮಾಡಿ ಎಲ್ಲರ ಪಾಲಿಗೆ ಪ್ರೇರಣೆಯಾಗವಂತಹ ಈ ತ್ರಿವಿಕ್ರಮ ಈಜುಪಟು ರಾಘವೇಂದ್ರ ಅಣ್ವೇಕರ್ ವಿಶಿಷ್ಟ ಸಾಧಕ. ಎಲ್ಲ ಅಂಗಗಳೂ ಸರಿಯಾಗಿ ಇದ್ದೂ, ಯಾವುದಕ್ಕೂ ಬಾರದಂತಿರುವವರ ನಡುವೆ ಈತ ವಿಶಿಷ್ಟವಾಗಿ ಕಾಣುತ್ತಾನೆ. ಅಷ್ಟೇ ಅಲ್ಲ ಬದುಕಿನಲ್ಲಿ ಪದೆ ಪದೆ ಎಡವಿದವರಿಗೆ ಸ್ಫೂರ್ತಿಯಾಗುತ್ತಾರೆ.

ನಿಕ್ ವುಸಿಸಿಕ್
ಬದುಕಿನಲ್ಲಿ ಎಲ್ಲವನ್ನೂ ಕಳೆದುಕೊಂಡು ನಿರಾಶರಾದವರಿಗೆ, ಅನೇಕ ಕಷ್ಟಗಳನ್ನು ಎದುರಿಸಿ ಹತಾಶೆ ಹೊಂದಿದವರಿಗೆ ಬದುಕಿನ ಬಗ್ಗೆ ಛಲ ಮೂಡಲು ಸ್ಫೂರ್ತಿಯಾಗುವಂತಹ ವ್ಯಕ್ತಿ ನಿಕ್ ವುಸಿಸಿಕ್.
ಆಸ್ಟ್ರೇಲಿಯಾದ ಬ್ರಿಸ್ಬೇನ್ನಲ್ಲಿ ಹುಟ್ಟಿದ ನಿಕನ  ಕಥೆ ಕೇಳಿದರೆ ಎಂತಹ ಕಲ್ಲೆದೆಯ ವ್ಯಕ್ತಿಗಳೂ ಒಮ್ಮೆ ಕಣ್ಣೀರಾಗುತ್ತಾರೆ. ಈ ವಿಶಿಷ್ಟ ವ್ಯಕ್ತಿಗೆ ಹುಟ್ಟಿನಿಂದಲೇ ಕೈಗಳಿಲ್ಲ, ಕಾಲುಗಳೂ ಇಲ್ಲ. ಅವೆರಡರ ಬದಲಿಗೆ ಆ ಜಾಗದಲ್ಲಿ ಒಮದೆರಡು ಚಿಕ್ಕ ಚಿಕ್ಕ ಮಾಂಸದ ತುಂಡುಗಳಿವೆ ಅಷ್ಟೇ.
ಈತ ಹುಟ್ಟಿದ ತಕ್ಷಣ ನಿಕ್ನ ತಾಯಿ ಈತನನ್ನು ನೋಡಿ ಒಮ್ಮ ಮೂರ್ಛೆ ಬಿದ್ದಿದ್ದಳಂತೆ. ನೋಡಿದ ವೈದ್ಯರೂ ಹೌಹಾರಿ ಈತ ಬದುಕುವವನಲ್ಲ ಎಂದಿದ್ದರಂತೆ. ಆದರೆ ನಿಕ್ ಬದುಕಿ ಬಿಟ್ಟ. ಆತನ ತಾಯಿ ಆತನನ್ನು ಸಾಧಕನನ್ನಾಗಿ ಮಾಡಲು ಪಣ ತೊಟ್ಟಳು. ಆತನಿಗೆ ಚಿಕ್ಕಂದಿನಿಂದಲೇ ಈಜುವುದನ್ನು ಕಲಿಸಿದಳು. ಓದಲು ಕಲಿಸಿದಳು, ಬಾಯಿಯ ಮೂಲಕ ಬರೆಯಲು ಕಲಿಸಿದಳು. ತಾಯಿಯ ಒತ್ತಾಸೆಯಂತೆ ನಿಕ್ ಬಹು ಬೇಗನೆ ಅವೆಲ್ಲವನ್ನೂ ಕಲಿತ. ಕಷ್ಟಪಟ್ಟು ಈಜುವುದನ್ನು ಕಲಿತ. ಎಲ್ಲ ಕ್ಲಾಸುಗಳನ್ನೂ ಉತ್ತಮ ದರ್ಜೆಯಲ್ಲಿ ಪಾಸುಮಾಡುತ್ತ ಕಳೆದ. ಅಷ್ಟೇ ಅಲ್ಲ ಆತ ಗಾಲ್ಫ್ ಆಡುವುದನ್ನೂ ಕಲಿತ.
ಅಯ್ಯೋ ಹೀಗಾಯಿತಲ್ಲ, ಎಂದು ಆತ ಎಂದಿಗೂ ಹೇಳಲಿಲ್ಲ. ತನ್ನ ವೈಕಲ್ಯಗಳನ್ನೇ ತನ್ನ ಸಾಧನೆಗೆ ಮೆಟ್ಟಿಲನ್ನಾಗಿ ಮಾಡಿಕೊಂಡ ನಿಕ್ ನಮ್ಮೆಲ್ಲರಿಗಿಂತ ಮೇಲ್ಮಟ್ಟಕ್ಕೇರಿದ. ಈಗ ನಿಕ್ಗೆ 28 ವರ್ಷ ವಯಸ್ಸು. ವಿಶ್ವದಾದ್ಯಂತ ಪ್ರವಾಸ ಮಾಡುವ ಈತ ಅಲ್ಲಿನ ಜನರಿಗೆ ತನ್ನ ಸಾಧನೆಯ ಚಿತ್ರಣಗಳನ್ನು ತೋರಿಸಿ ಅವರಲ್ಲಿ ಆಶಾವಾದ ಹುಟ್ಟಿಸುವ ಕಾರ್ಯ ಮಾಡುತ್ತಿದ್ದಾನೆ. ಬದುಕಿನಲ್ಲಿ ಸೋತವರಿಗೆ ಬದುಕಿನ ಕಡೆಗೆ ಉತ್ಸಾಹ ಮೂಡಿಸುವ ಕೆಲಸವನ್ನು ನಿಕ್ ಯಾವಾಗಲೂ ಕೈಗೊಳ್ಳುತ್ತಿರುತ್ತಾನೆ. ಈತ ಮಾತಾಡಿರುವ ಸಿಡಿಗಳು ವಿಶ್ವದಲ್ಲಿ ಅದೆಸ್ಸ್ಟಾ ಸಂಖ್ಯೆಯಲ್ಲಿ ಮಾರಾಟವಾಗಿವೆ. ಆತನ ಸಾಧನೆಯ ವೀಡಿಯೋ ತುಣುಕುಗಳಿಗೆ ವಿಶ್ವದಾದ್ಯಂತ ಬೇಡಿಕೆ ಇವೆ. ಪಾಶ್ಚಾತ್ಯ ರಾಷ್ಟ್ರಗಳ ಅದೆಷ್ಟೋ ಯುವಕರು ನಿಕ್ನ ಮಾತಿಗೆ ಮರುಳಾಗಿ ಬದುಕಿನೆಡೆಗೆ ಪ್ರೀತಿ ಬೆಳೆಸಿಕೊಂಡಿದ್ದಾರೆ. ಅದೆಷ್ಟೋ ಜನ ನಿಕ್ನ ಅಭಿಮಾನಿಗಳಾಗಿದ್ದಾರೆ. ಕೈಕಾಲುಗಳಿಲ್ಲದಿದ್ದರೂ ಸಾಧಿಸಬಲ್ಲೆ ಎಂಬುದಕ್ಕೆ ನಿಕ್ನೇ ಸ್ಫೂರ್ತಿ.
ಇಂತಹ ಸಾಧಕರ ನಡುವೆ ನಾವು ಅದೆಷ್ಟು ಕುಬ್ಜರಾಗುತ್ತೇವೆ ಅಲ್ಲವೇ. ನಮಗೆ ಇಂತಹ ವ್ಯಕ್ತಿಗಳು ಅದೆಷ್ಟು ಸ್ಫೂರ್ತಿಯನ್ನು ನೀಡುತ್ತಾರೆ ಅಲ್ಲವೇ?


Monday, February 21, 2011

ಕರ್ನಾಟಕದ ಅಣೆಕಟ್ಟುಗಳು


ಅಣೆಕಟ್ಟುಗಳು ಎಂದರೆ ‘ಭವ್ಯ ಭಾರತ ನಿರ್ಮಾಣದ ದೇಗುಲಗಳಿದ್ದಂತೆ ಎಂದು ‘ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ ಲಾಲ್ ನೆಹರೂ ಹೇಳಿದ್ದರು. ಅವರ ಮಾತಿನಂತೆ ‘ಭಾರತದಲ್ಲಿ ಅದೆಷ್ಟೋ ಅಣೆಕಟ್ಟುಗಳು ನಿರ್ಮಾಣವಾಗಿವೆ. ಕರ್ನಾಟಕದಲ್ಲಿಯೂ ‘ಭಾರಿ ಸಂಖ್ಯೆಯಲ್ಲಿಯೇ  ಅಣೆಕಟ್ಟುಗಳು ನಿರ್ಮಿಸಲಾಗಿದೆ. ಕರ್ನಾಟಕದಲ್ಲಿ ಇರುವ ದೊಡ್ಡ ಅಣೆಕಟ್ಟುಗಳ ಸಂಖ್ಯೆ 23. ಅವುಗಳಲ್ಲದೇ ಚಿಕ್ಕಪುಟ್ಟ ಅಣೆಕಟ್ಟುಗಳ ಸಂಖ್ಯೆಗಲೂ ಹಲವಷ್ಟಿವೆ. ಅವುಗಳಲ್ಲಿ ಕೆಲವು ಅಣೆಕಟ್ಟುಗಳ ಬಗ್ಗೆ ಕಿರು ನೋಟ.

ಕೃಷ್ಣರಾಜ ಸಾಗರ ಅಣೆಕಟ್ಟು
‘ಭಾರತದ, ಏಷ್ಯಾದ ಅತ್ಯಂತ ಹಳೆಯ ಅಣೆಕಟ್ಟುಗಳಲ್ಲಿ ಒಂದಾಗಿರುವ ಇದು ‘ಭಾರತ ರತ್ನ ಸರ್. ಎಂ. ವಿಶ್ವೇಶ್ವರಯ್ಯನವರ ಕನಸಿನ ಕೂಸು. ಕಾವೇರಿ ನದಿಗೆ ಶ್ರೀರಂಗಪಟ್ಟಣದಿಂದ ಕೇವಲ 12 ಕಿಲೋಮೀಟರ್ ದೂರದಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು 130 ಅಡಿ ಎತ್ತರವಾಗಿದೆ. ಕೆಆರ್ಎಸ್ ಎಂದೇ ಹೆಸರಾಗಿರುವ ಈ ಅಣೆಕಟ್ಟು ಮಂಡ್ಯ, ಮೈಸೂರು ಜಿಲ್ಲೆಗಳ ಸಾವಿರಾರು ಎಕರೆಗೆ ನೀರುಣ್ಣಿಸುತ್ತದೆ. ‘ಭಾರತ ಸ್ವತಂತ್ರವಾಗುವ ಮೊದಲೇ ನಿರ್ಮಾಣಗೊಂಡಿರುವ ಈ ಅಣೆಕಟ್ಟು ಹಿಂದಿನ ತಲೆಮಾರಿನ ತಂತ್ರಕ್ಞರ ಯಶಸ್ವಿ ತಂತ್ರಜ್ಞಾನಕ್ಕೆ ಸಾಕ್ಷಿ. ಈ ಅಣೆಕಟ್ಟಿನ ಕೆಳ‘ಾಗದಲ್ಲಿ ನಿರ್ಮಿಸಲಾಗಿರುವ ಬೃಂದಾವನ ಉದ್ಯಾನವನವೂ ಅಷ್ಟೇ ಪ್ರಸಿದ್ಧಿ ಹೊಂದಿದ್ದು ವಿಶ್ವ ವಿಖ್ಯಾತಿ ಗಳಿಸಿದೆ.

ಲಿಂಗನ ಮಕ್ಕಿ ಅಣೆಕಟ್ಟು.
ಶರಾವತಿ ನದಿಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಎಂಬಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು 1819 ಅಡಿ ಎತ್ತರವಾಗಿದೆ. 1964ರಲ್ಲಿ ಉದ್ಘಾಟನೆಯಾದ ಈ ಅಣೆಕಟ್ಟಿನಿಂದ ಸುಮಾರು 300 ಕಿಲೋಮೀಟರ್ಗಳಷ್ಟು  ‘ಭಾಗ ನೀರಿನಲ್ಲಿ ಮುಳುಗಡೆಯಾಗಿದೆ. ಕರ್ನಾಟಕಕ್ಕೆ ಅಗತ್ಯವಿರುವ ವಿದ್ಯುತ್ತಿನಲ್ಲಿ ಹೆಚ್ಚಿನ ಪ್ರಮಾಣದ ವಿದ್ಯುತ್ ಲಿಂಗನಮಕ್ಕಿಯಲ್ಲೇ ಉತ್ಪಾದನೆಯಾಗುತ್ತದೆ. ಈ ಅಣೇಕಟ್ಟಿನಲ್ಲಿ 4368 ಮುಲಿಯನ್ ಕ್ಯೂಬಿಕ್ ಮೀಟರ್ನಷ್ಟು ನೀರನ್ನು ಸಂಗ್ರಹಿಸಿ ಇಡಬಹುದಾಗಿದೆ.

ಸುಪಾ ಅಣೆಕಟ್ಟು
ಕಾಳಿ ನದಿಗೆ ನಿರ್ಮಿಸಲಾಗಿರುವ ಸುಪಾ ಅಣೆಕಟ್ಟು ಕರ್ನಾಟಕದ ಅತ್ಯಂತ ಎಲ್ಲರವಾದ ಅಣೆಕಟ್ಟು ಎಂಬ ಖ್ಯಾತಿ ಗಳಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸುಪಾದಲ್ಲಿ ನಿರ್ಮಿಸಲಾಗಿರುವ ಈ ಅಣೆಕಟ್ಟು ವಿದ್ಯುತ್ ಉತ್ಪಾದನೆಯ ಕಾರಣಕ್ಕಾಗಿಯೇ ನಿರ್ಮಾಣಗೊಂಡಿದೆ. 1101 ಮೀಟರ್ ಎತ್ತರ ಇರುವ ಸುಪಾ ಅಣೆಕಟ್ಟು 332 ಮೀಟರ್ ಉದ್ದವಾಗಿದೆ. ಅಣೆಕಟ್ಟನ್ನು 1985ರಂದು ಉದ್ಘಾಟಿಸಲಾಗಿದೆ. ಇದು ಕರ್ನಾಟಕದ ಎರಡನೇ ಅತಿದೊಡ್ಡ ಅಣೆಕಟ್ಟು ಎಂಬ ಖ್ಯಾತಿಯನ್ನೂ ಗಳಿಸಿಕೊಂಡಿದೆ. ಕಾಳಿನದಿಗೆ ಕಟ್ಟಲಾಗಿರುವ ಹಲವಾಸು ದೊಡ್ಡ ಅಣೆಕಟ್ಟುಗಳಲ್ಲಿ ಇದೂ ಒಂದು.

ತುಂಗಭದ್ರಾ ಅಣೆಕಟ್ಟು
2441ಮೀಟರ್ ಉದ್ದ ಹಾಗೂ 49.38 ಮೀಟರ್ ಎತ್ತರ ಹೊಂದಿರುವ ತುಂಗಭದ್ರಾ ಅಣೆಕಟ್ಟು ನೀರಾವರಿ ಉದ್ದೇಶದಿಂದ ನಿರ್ಮಾಣಗೊಂಡಿದೆ. ಇದು ಹೊಸಪೇಟೆಯಿಂದ ಕೇವಲ 5 ಕಿಲೋಮೀಟರ್ ದೂರದಲ್ಲಿದೆ. 33 ಬಹುದೊಡ್ಡ ಗೇಟುಗಳನ್ನು ಹೊಂದಿರುವ ತುಂಗ‘ದ್ರಾ ಅಣೆಕಟ್ಟು ಬಹುದೊಡ್ಡ ಗಾತ್ರವನ್ನು ಹೊಂದಿದೆ. ಈ ಅಣೆಕಟ್ಟಿನಿಂದ ಸಂಗ್ರಹಿಸಲಾದ ನೀರನ್ನು ಕಾಲುವೆಗಳ ಮೂಲಕ ಕರ್ನಾಟಕದ ಚಿಕ್ಕಮಂಗಳೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ ಹಾಗೂ ಆಂದ್ರಪ್ರದೇಶದ ಕರ್ನೂಲು, ಮೆಹಬೂಬ್ ನಗರ ಮುಂತಾದ ಜಿಲ್ಲೆಗಳಿಗೆ ನಿರಾವರಿ ಉದ್ದೇಶಕ್ಕಾಗಿ ಬಳಸಲಾಗುತ್ತದೆ.

ಕೊಡಸಳ್ಳಿ ಅಣೆಕಟ್ಟು.
ಕಾಳಿನದಿಗೆ ಯಲ್ಲಾಪುರ ತಾಲೂಕಿನ ಕೊಡಸಳ್ಳಿ ಬಳಿ ನಿರ್ಮಿಸಲಾಗಿರುವ ಈ ಅಣೆಕಟ್ಟನ್ನು 1997ರಲ್ಲಿ ಉದ್ಘಾಟಿಸಲಾಯಿತು. ವಿದ್ಯುತ್ ಉತ್ಪಾದನೆಯ ಉದ್ದೇಶದಿಂದಲೇ ನಿರ್ಮಾಣಗೊಂಡ ಅಣೆಕಟ್ಟು ಇದಾಗಿದೆ. ಪಶ್ಚಿಮ ಘಟ್ಟಗಳ ನಡುವೆ ಇರುವ ಈ ಅಣೆಕಟ್ಟು ನಿರ್ಮಾದ ಸಮಯದಲ್ಲಿ ಕಾಡಿನ ನಾಶದ ವಿರುದ್ಧ ಹಲವು ಹೋರಾಟಗಳು ನಡೆದಿದ್ದವು.

ಆಲಮಟ್ಟಿ ಅಣೆಕಟ್ಟು
ಜುಲೈ2005ರಲ್ಲಿ ಉದ್ಘಾಟನೆಯಾದ ಆಲಮಟ್ಟಿ ಅಣೆಕಟ್ಟು 509 ಮಿಟರ್ ಎತ್ತರವಾಗಿದೆ. ಇದನ್ನು ಈಗ ಸುಪ್ರಿಂ ಕೋರ್ಟಿನ ಆದೇಶದ ಮೇರೆಗೆ 519 ಮೀಟರ್ಗೆ ಏರಿಸಲಾಗುತ್ತಿದೆ. ಕೃಷ್ಣಾ ನದಿಗೆ ನಿರ್ಮಿಸಲಾಗಿರುವ ಈ ಅಣೆಕಟ್ಟು ನಿರಾವರಿ ಹಾಗೂ ವಿದ್ಯುತ್ ಉತ್ಪಾದನೆ ಈ ಎರಡೂ ಉದ್ದೇಶ ಹೊಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಿರಮಿಸಲಾಗಿರುವ ಈ ಅಣೆಕಟ್ಟು 1565.15 ಮೀಟರ್ ಉದ್ದವಾಗಿದೆ. 42.19 ಟಿಎಂಸಿ ನೀರನ್ನು ಹಿಡಿದಿಡುವ ಸಾಮರ್ಥ್ಯವನ್ನು ಈ ಅಣೆಕಟ್ಟು ಹೊಂದಿದೆ.

ಇವು ಕರ್ನಾಟಕದ ಪ್ರಮುಖ ಅನೆಕಟ್ಟುಗಳು. ಇವಲ್ಲದೆ ಕದ್ರಾ ಅಣೆಕಟ್ಟು, ನಾರಾಯಣಪುರ, ಕಬಿನಿ, ಹಾರಂಗಿ, ಗಾಜನೂರು, ಕದ್ರಾ, ಬಾಚಣಕಿ, ಗೋರೂರು, ಬಸವಸಾಗರ, ಹಿಡಕಲ್, ಕಣ್ವ, ಲಕ್ಕವಳ್ಳಿ, ಮಾರ್ಕೋನಹಳ್ಳಿ, ಸಾತನೂರು, ವಾಣಿವಿಲಾಸ ಸಾಗರ ಮುಂತಾದ ಹಲವು ಮಧ್ಯಮ ಗಾತ್ರದ ಅಣೆಕಟ್ಟುಗಳಿವೆ. ಅದಲ್ಲದೆ ನೂರಕ್ಕೂ ಹೆಚ್ಚಿನ ಚಿಕ್ಕಪುಟ್ಟ ಅಣೆಕಟ್ಟುಗಳಿವೆ. ಇವುಗಳ ಜೊತೆಗೆ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನೂರಾರು ಚಿಕ್ಕ ಪುಟ್ಟ ಅಣೆಕಟ್ಟುಗಳ ನಿರ್ಮಾಣಕ್ಕೆ ಸಮೀಕ್ಷೆ ನಡೆಸಲಾಗಿದೆ. ಇವುಗಳ ವಿರುದ್ಧ ಪರಿಸರವಾದಿಗಳು ಹೋರಾಟ ಪ್ರಾರಂಭಿಸಿದ್ದಾರೆ.
ಕನ್ನಡ ನಾಡಿಗೆ ವಿದ್ಯುತ್ತಿನ ಜೊತೆಗೆ ಬೆಳೆಗಳಿಗೆ ನೀರನ್ನೂ ನೀಡುತ್ತಿರುವ ಈ ಅಣೆಕಟ್ಟುಗಳು ಭವ್ಯ ಭಾರತದ ದೇಗುಲಗಳೇ ಹೌದು






Thursday, February 3, 2011

ತಾ ತಾ ಗುಬ್ಬಿ ತಾವನ ಗುಬ್ಬಿ.. ಮುಚ್ಚಳ ತೆಗೆದರೆ ಮುನ್ನೂರು ಗುಬ್ಬಿ


ಮನೆಯ  ಮಾಳಿಗೆಯ ಮೇಲೆ ಅತ್ತ ಇತ್ತ ಹಾರಾಡುತ್ತಾ, ಚಿಂವ್ ಚಿಂವ್ ಎನ್ನುವ ಕೂಗು ಹಾಕುತ್ತಾ ಮನುಷ್ಯ ವಾಸಸ್ಥಾನದ ಸುತ್ತಮುತ್ತ ಅಡ್ಡಾಡುವ ಗುಬ್ಬಿಗಳು ಮಾನವನ ಪ್ರಾಚೀನ ಒಡನಾಡಿ. ಗುಬ್ಬಿಯನ್ನು ಇಂಗ್ಲೀಷಿನಲ್ಲಿ ಸ್ಪಾರೋ ಎಂದು ಕರೆಯುತ್ತಾರೆ. 
ಎನಿಮೇಲಿಯಾ ಪ್ರಬೇ‘ಕ್ಕೆ ಸೇರಿದ ಇದು ಪೆಸ್ಸಿರೈಡೆ ಕುಟುಂಬದ ಜೀವಿ.

ಆಹಾರ-ವಿಹಾರ-ವೈವಿಧ್ಯ 
ಗುಬ್ಬಿಗಳಲ್ಲಿ ಮುಖ್ಯವಾಗಿ ಎರಡು ವಿಧ. ಮನೆ ಗುಬ್ಬಿ ಹಾಗೂ ಕಾಡಿನ ಗುಬ್ಬಿ ಎಂಬ ಎರಡು ವಿಧವಿರುವ ಗುಬ್ಬಿಗಳಲ್ಲಿ ಒಂದು ವರ್ಗ ಸದಾ ಮಾನವನ ಇರುವಿಕೆಯನ್ನು ಬಯಸುತ್ತದೆ. ಮತ್ತೊಂದು ವರ್ಗ ಕಾಡಿನಲ್ಲಿಯೇ ವಾಸಿಸುತ್ತದೆ.
ಇವು ಯಾವಾಗಲೂ ಗುಂಪು ಗುಂಪಾಗಿಯೇ ವಾಸಿಸುತ್ತವೆ. ನೂರಕ್ಕೂ ಹೆಚ್ಚಿನ ಸಂಖ್ಯೆಯ ಗುಂಪುಗುಂಪುಗಳನ್ನು ರಚಿಕೊಂಡಿರುವ ಗುಬ್ಬಿಗಳು ಬಹಳ ಚಿಕ್ಕ ಪಕ್ಷಿಗಳು. ಇವುಗಳ ಗಾತ್ರ 11 ಸೆಂಟೀಮೀಟರರ್ನಿಂದ 15 ಸೆಂಟಿಮೀಟರ್ಗಳು. ಕೆಲವೊಂದು ಗುಬ್ಬಿಗಳು 18 ಸೆಂಟೀಮೀಟರ್ಗಳಷ್ಟು ದೊಡ್ಡದಾಗಿ ಬೆಳೆಯುವುದೂ ಉಂಟು. 
ಗುಬ್ಬಿ ವಿಶ್ವವ್ಯಾಪಿ ಪಕ್ಷಿ. ಗುಬ್ಬಿಗಳಿಲ್ಲದ ಪ್ರದೇಶವೇ ಇಲ್ಲ. ಏಷ್ಯಾ, ಅಮೇರಿಕಾ, ಆಫ್ರಿಕಾ, ಆಸ್ಟ್ರೇಲಿಯಾಗಳಲ್ಲಿ ಗುಬ್ಬಿಗಳು ಕಾಣಸಿಗುತ್ತವೆಯಾದರೂ ಅವುಗಳ ಗಾತ್ರದಲ್ಲಿ ಬದಲಾವಣೆಯಿರುತ್ತವೆ.ಗುಬ್ಬಿಗಳು ಹೆಚ್ಚಾಗಿ ಹಣ್ಣುಗಳು, ಬೀಜಗಳು, ಕಾಳುಗಳು ಹಾಗೂ ಚಿಕ್ಕ ಚಿಕ್ಕ ಕೀಟಗಳನ್ನು ತಿನ್ನುತ್ತವೆ. ಸೀಬೆ ಹಣ್ಣುಗಳೆಂದರೆ ಇವಕ್ಕೆ ಅಚ್ಚುಮೆಚ್ಚು. ಆದ್ದರಿಂದಲೇ ಸೀಬೆ ಮರದ ಸುತ್ತ ಇವುಗಳು ದಂಡುಕಟ್ಟಿಕೊಂಡು ವಾಸಿಸುತ್ತವೆ.ಬಣ್ಣ-ಅಂದ-ಚೆಂದಸಾಮಾನ್ಯವಾಗಿ ಮಾಸಲು ಬಣ್ಣ ಹೊಂದಿರುವ ಈ ಗುಬ್ಬಿಯ ದೇಹದ ಮೆಲೆ ಅಲ್ಲಲ್ಲಿ ಬಿಳಿ ಬಣ್ಣದ ರೋಮಗಳಿರುತ್ತವೆ. ಉದ್ದನೆಯ ಪುಕ್ಕ ಹೊಂದಿರುವ ಇವು ರೆಕ್ಕೆ ಬಡಿಯುವ ವೇಗ ಬಹಳ ಜೋರು.ಹೆಣ್ಣು ಗುಬ್ಬಿಯನ್ನು ಆಕರ್ಷಿಸಲು ಗಂಡು ಗುಬ್ಬಿ ತನ್ನ ದೇಹ ಸೌಂದರ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತದೆ. ಅಲ್ಲದೆ ತನ್ನ ದೇಹವನ್ನು ವಿಶಿಷ್ಟವಾಗಿ ಬಾಗಿಸಿ ಬಳುಕಿಸುವ ಮೂಲಕ ಅದು ಎಲ್ಲರನ್ನೂ ಆಕರ್ಷಿಸುತ್ತದೆ.

ಗೌರವದ ಭಾವನೆ
ಕರ್ನಾಟಕದಲ್ಲಿ ಸುಗ್ಗಿ ಕಾಲದಲ್ಲಿ ಗುಬ್ಬಿಗಳು ಹೆಚ್ಚಳವಾಗುತ್ತವೆ. ಆದ್ದರಿಂದಲೇ ಕರ್ನಾಟಕದ ಹಳ್ಳಿಗರು ಗುಬ್ಬಿಯನ್ನು ಸುಗ್ಗಿಯ ದೂತರು ಎಂದೇ ಕರೆಯುತ್ತಾರೆ. ಹಳ್ಳಿಗರಿಗೆ ಗುಬ್ಬಿ ಎಂದರೆ ಪವಿತ್ರ ಭಾವನೆ. ಅದನ್ನು ಬಹಳ ಗೌರವದಿಂದ ಕಾಣುತ್ತಾರೆ. ಕೆಲವೊಮ್ಮೆ ಇವು ಭತ್ತದ ಬೆಳೆಯನ್ನು ತಿಂದರೂ ಹೆಚ್ಚಿನ ವೇಳೆ ಇವು ಭತ್ತಕ್ಕೆ ಕಾಟ ಕೊದುವ ಕೀಟಗಳನ್ನು ತಿನ್ನುತ್ತವೆ. ಆದ್ದರಿಂದ ಇವುಗಳೂ ರೈತನ  ಮಿತ್ರನಾಗಿಯೇ ಹೆಸರುವಾಸಿ.

ಮೊಟ್ಟೆ-ಮರಿ
ಮನೆಯ ಮಾಡಿನ ಮೇಲೆ, ತಾರಸಿ ಮೇಲೆ ಗೂಡು ಕಟ್ಟುವ ಗುಬ್ಬಿಗಳು ಒಮ್ಮೆಲೆ 2-3 ಮೊಟ್ಟೆಗಳನ್ನು ಇಡುತ್ತವೆ. ಮೊಟ್ಟೆಗೆ ಗಂಡು ಹಾಗೂ ಹೆಣ್ಣು ಗುಬ್ಬಿಗಳು ಸರದಿ ಪ್ರಕಾರ ಕಾವು ಕೂರುತ್ತವೆ. ಮೊಟ್ಟೆಯೊಡೆದು ಹೊರ ಬರುಬ ಮರಿ ದೊಡ್ಡದಾಗಿ, ರೆಕ್ಕೆ ಬಲಿತು ಹಾರಲು ಪ್ರಾರಂಭಿಸುವವರೆಗೂ ಅದರ ಆರೈಕೆ ಈ ಎರಡೂ ಗುಬ್ಬಿಗಳದ್ದು. ಇವು ಹೆಚ್ಚು ಸಂಘ ಜೀವಿಗಳು. ಜೊತೆ ಜೊತೆಯಾಗಿ ಜೀವಿಸುವ ಇವು ಬಹಳ ಚೊಕ್ಕಟ ಪ್ರಾಣಿಗಳು. ತಮ್ಮ ದೇಹವನ್ನು ಶುಚಿಯಾಗಿಡಲು ಹೆಚ್ಚಿನ ಮಹತ್ವ ನೀಡುವ ಇವು ನೀರಿನಲ್ಲಿ ಆಗಾಗ ಸ್ನಾನ ಮಾಡುತ್ತವೆ. ಅಲ್ಲದೆ ಆಗಾಗ ತಮ್ಮ ದೇಹವನ್ನು ಶುಚಿಯಾಗಿಡಲು ಅಗತ್ಯವಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತವೆ.
ಈ ಗುಬ್ಬಿಗಿಗೂ ಮಕ್ಕಳೆಂದರೆ ಪ್ರೀತಿ. ಪುಟ್ಟ ಪುಟ್ಟ ಮಕ್ಕಳು ಬಯಲಿನಲ್ಲಿ ಕೈಯಲ್ಲಿ ಏನಾದರೂ ತಿಂಡಿಗಳನ್ನು ಹಿಡಿದುಕೊಂಡಿದ್ದರೆ ಇವು ತುಸು ಹೆಚ್ಚು ಸಲಿಗೆ ತೆಗೆದುಕೊಂಡು ಯಾವುದೇ ಭಯವಿಲ್ಲದೆ ಮಕ್ಕಳ ಕೈಯಲ್ಲಿನ ತಿಂಡಿಗಳಿಗೆ ಬಾಯಿ ಹಾಕುತ್ತವೆ. ಬೆಕ್ಕುಗಳು, ಕಾಗೆಗಳು, ಗೂಬೆಗಳು, ಈ ಮುಂತಾದ ಪ್ರಾಣಿಗಳು ಗುಬ್ಬಿ ಪಾಲಿಗೆ ಯಮದೂತರು. ತಮ್ಮ ಆಹಾರಕ್ಕಾಗಿ ಗುಬ್ಬಿಗಳನ್ನಿವು ಬೇಟೆಯಾಡಿ ತಿನ್ನುತ್ತವೆ.

ಅಳಿವಿನ ಅಂಚಿನಲ್ಲಿ..
ಸುಮಾರು 10 ಸಾವಿರ ವರ್ಷಗಳಿಗಿಂತ ಹಿಂದಿನಿಂದಲೂ ಮಾನವ ಹಾಗೂ ಗುಬ್ಬಿಯ ಒಡನಾಟ ಸಾಗಿ ಬಂದಿದೆ. ನಮ್ಮ ಜನಪದದ ಕಥೆಗಳಲ್ಲೂ ಗುಬ್ಬಿಗಳು ಹಾಸು ಹೊಕ್ಕಾಗಿವೆ. ಮಕ್ಕಳ ಪ್ರೀತಿಯ ಕಾಕಣ್ಣ ಗುಬ್ಬಣ್ಣ ಕಥೆಯಲ್ಲಿಯೂ ಇವುಗಳಿಗೆ ಬಹು ಮುಖ್ಯ ಸ್ಥಾನ. ಆಸೆ ಬುರುಕ ಕಾಗೆಗೆ ಪುಟಾಣಿ ಗುಬ್ಬಿ ಬಿದ್ಧಿಕಲಿಸುವ ಬಗೆಯಂತೂ ಮಕ್ಕಳನ್ನು ಆಧುನಿಕ ಕಾರ್ಟೂನುಗಳಿಗಿಂತ ಹೆಚ್ಚಾಗಿ ಸೆಳೆಯುತ್ತವೆ. ಇಂತಹ ಗುಬ್ಬಿಗಳು ಇದೀಗ ಅಳಿವಿನ ಅಂಚಿನಲ್ಲಿವೆ. ಮಾನವ ಆಧುನಿಕತೆಯತ್ತ ಸಾಗಿದಂತೆಲ್ಲ ಗುಬ್ಬಿ ಅವನತಿಯತ್ತ ಸಾಗುತ್ತಿದೆ. 
5-10 ವರಷಳ ಹಿಂದೆ ಲಕ್ಷಾಂತರ ಗುಬ್ಬಿಗಳು ಕಾಣಸಿಗುತ್ತಿದ್ದವು. ಆದರೆ ಈಗ ಒಂದೆರಡು ಗುಬ್ಬಿಯನ್ನು ನೋಡಬೇಕಾದರೂ ಕಷ್ಟ ಪಡಬೇಕು. ಮಾನವ ತೀವ್ರಗತಿಯಲ್ಲಿ ಯಾಂತ್ರೀಕೃತನಾಗುತ್ತಿದ್ದಾನೆ. ಇದರ ಪರಿಣಾಮ ಇಂತಹ ಮುಗ್ಧ ಪ್ರಾಣಿ ಹಾಗೂ ಪಕ್ಷಿಗಳ ಮೇಲಾಗುತ್ತಿದೆ. ಮೊಬೈಲ್ ತರಂಗಾಂತರಗಳು ಗುಬ್ಬಿಗಳ ಆರೋಗ್ಯಕ್ಕೆ ಮಾರಕ ಎಂಬ ಸಂಶೋಧನೆಯೊಂದು ಹೊರಬಿದ್ದಿದೆ. ಅದಕ್ಕೆ ತಕ್ಕಂತೆ ಗುಬ್ಬಿಗಳೂ ಕಣ್ಮರೆಯಾಗುತ್ತಿವೆ. ಗುಬ್ಬಿಗಳನ್ನು ರಕ್ಷಿಸಿ ಅವುಗಳ ಜೀವನಕ್ಕೆ ಬದುಕಿಗೆ ನೆರವಾಗದಿದ್ದಲ್ಲಿ ಮುಂದೊಮ್ಮೆ ಕಾಕಣ್ಣ ಗುಬ್ಬಣ್ಣ ಕಥೆಗಳಲ್ಲಿ ಮಾತ್ರ ಇವು ಉಳಿದುಕೊಳ್ಳುವ ಸಾಧ್ಯತೆಗಳಿವೆ. ಮಕ್ಕಳ ಪ್ರೀತಿಯ ಗುಬ್ಬಿಗಳು ಕಣ್ಮರೆಯಾಗುವ ಸಾಧ್ಯತೆಗಳು ಹೆಚ್ಚಿವೆ.

ವಿ ಸು...
ಪತ್ರಿಕೆಯೊಂದಕ್ಕೆ ಬರೆದ ಬರಹದ ಯಥಾವತ್ ಪ್ರತಿ..

Sunday, September 26, 2010

ಕೆಲವು ಹನಿಗಳು

ಕರ್ಮವೀರ ವಿಶೇಷಾಂಕ ಕ್ಕೆ ನೀಡಿರುವ ಕೆಲವು ಚುಟುಕಗಳು..
ನಿಮ್ಮ ಓದಿಗಾಗಿ.
ಅನಿಸಿಕೆ ತಿಳಿಸಿ..

11) ಹೃದಯದ ಸ್ಥಿತಿ
ನಲ್ಲೆ ನೀನು ಒಪ್ಪಿದರೆ
ಈ ಹೃದಯ ನಿನದು
ಆದರೆ ನೀನು ಒಪ್ಪದಿದ್ದರೆ
ಇದರ ಸ್ಥಿತಿ ಬರ್ಬಾದು !
       
12) ತಾಳಿ
ಹರೆಯಕ್ಕೆ,
ಯವ್ವನದೊಡಲಿಗೆ
ಸಿಕ್ಕ ಒಂದು
ಕಡಿವಾಣ.
ಗಂಡಿನ ಲಗಾಮು.

13) ಸೂರ್ಯ
ಭೂಮಿಯೊಡಲ
ಸಂಪತ್ತು ಹುಡುಕಲು
ದೇವರು ಬಿಡುವ
ಟಾರ್ಚು !

14)ಸ್ವಾತಂತ್ರ್ಯ ದಿನ
ದೇಶ
ಬ್ರಿಟೀಷರ ಕೈತಪ್ಪಿ
ರಾಜಕಾರಣಿಗಳ ಕೈ
ಅಪ್ಪಿದ ದಿನ !

15)ಚಂದ್ರ
ರಾತ್ರಿ ಭೂಮಿಗೆ
ನಿದ್ರೆಯ ಕೊಡದೇ,
ಕಾವಲು ನಿಂತು
ಲೈನ್ ಹೊಡೆಯುತ್ತಿರುವ ಭೂಪ !!

16)ಹನಿಗವಿ
ಯುವ ಕವಿಯಾದ ನಾನು
ಅವಳನ್ನು ಕಂಡಾಗಲೆಲ್ಲಾ
ಆಗುತ್ತೇನೆ ಠಟಿಜಥಿ ಕವಿ
ಹನಿ ಕವಿ ಹಾಗೂ `ಹನಿ' ಕವಿ !!

17).ಮದುವೆ
ಮದುವೆಯೆಂದರೆ
ಎರಡು ನಿಷ್ಪಾಪಿ
ಜೀವಿಗಳನ್ನು
ನರಕಕ್ಕೆ ಕಳಿಸುವ
ದಾರಿ!

18)ದೀಪಾವಳಿ
ಬಾಳನ್ನು ಬೆಳಗಿದೆ
ದೀಪಾವಳಿ!
ಸಂತಸ ಪಡುವವನ
ಕಿಸೆಯೊಳಗಣ ಹಣವಾಗಿದೆ
ದಿವಾಳಿ!!

19)ಕಾರಣ
ವಿಶ್ವಕ್ಕೆಲ್ಲ ಜಾಗತೀಕರಣ,
ಔದ್ಯೋಗೀಕರಣ, ಖಾಸಗೀಕರಣ,
ಸಾಮಾಜೀಕರಣ, ಆಧುನೀಕರಣ
ಹೀಗೆಲ್ಲ ಇದ್ದರೆ, ಭಾರತಕ್ಕೆ
ಒಂದೇ ಕಾರಣ, ರಾಜಕಾರಣ !!

20)ಗೋರ್ಮೆಟ್ ನೌಕರ
ಜನರ ಸೇವೆಯನ್ನು
ದನದ ಸೇವೆ
ಎಂದು ತಿಳಿದವ
ಸರಕಾರಿ ನೌಕರ!!

21)ಹುಚ್ಚು
ಭೂಮಿಯ ಮೇಲೆ
ಎಲ್ಲರಿಗೂ ಹಿಡಿದಿದೆ ಹುಚ್ಚು !
ಅದರಲ್ಲೂ ಮೆಗಾ
ಸೀರಿಯಲ್ ನೋಡುವವರಿಗೆ
ತುಸು ಹೆಚ್ಚು !!

22)ಚಂದ್ರನಲ್ಲಿ ಬಾವುಟ
ನಮ್ಮ ಜನ
ಚಂದ್ರನಿಗೂ ಕೊಟ್ಟರು ಕಾಟ!
ನೆಟ್ಟರು ಗೂಟ, ಜೊತೆಗೆ
ಅಮೆರಿಕೆಯ ಬಾವುಟ !!

23)ನಾಕ-ನರಕ
ನಾಕ ನಾಕ ಎನ್ನುತ್ತಿದ್ದ
ಜನರಿಗೆ ಅರ್ಥವಾಗಲಿಲ್ಲ,
ಜಗತ್ತಿನ ಅತಿದೊಡ್ಡ ನರಕವೆಂದರೆ
ಅದು ಅಮೆರಿಕ !!

24)(ವಾ)ನರ
ನರ, ನಾಗರಿಕತೆಯಲ್ಲಿ
ಸಿಲುಕಿ, ಆಧುನೀಕತೆಯಲ್ಲಿ
ಮುಂದುವರಿದು ಆಗುತ್ತಿದ್ದಾನೆ
ವಾನರ !!

25)ವಾಸ್ತವ
ದೂರದ ಗುಡ್ಡ
ಕಣ್ಣಿಗೆ ನುಣುಪು!
ಗೆಳತೀ ಹಾಗೇ ನಿನ್ನ
ಮುಖವೂ ಕೂಡ !!
ದೂರವಿದ್ದರಷ್ಟೇ
ಕಾಣುವುದು ನುಣುಪು !!!

26)ಮೊಡವೆ
ಮದುವೆಗೆ ಮುನ್ನ
ಹುಡುಗಿಯರ ಕಾಡುವ
ಅವರ ಸೊಕ್ಕನ್ನು ಮುರಿಯುವ
ಏಕೈಕ ಸಾಧನ ಮೊಡವೆ !!

27)ಜಮ್ಮು-ಕಾಶ್ಮೀರ
ಭಾರತದ ಅತ್ಯಂತ ಚೆಂದದ ಭಾಗ
ಜಮ್ಮು ಕಾಶ್ಮೀರ !
ಆದರೆ ಅಲ್ಲಿದೆ ಪ್ರತಿದಿನ ಗುಂಡಿನ
ನೆಗಡಿ, ಕೆಮ್ಮು, ದಮ್ಮು, ಜ್ವರ !!

Monday, September 13, 2010

ಏಕ ರೇಖಾ ಗಣಪ ಬಲು ಅಪರೂಪ

ವಿಘ್ನನಿವಾರಕ ಗಣೇಶನ ಚಿತ್ರವನ್ನು ಬಿಡಿಸುವವರು, ಮೂರ್ತಿ ಕೆತ್ತುವವರು ಬಹಳ ಮಂದಿ ಇದ್ದಾರೆ. ಆದರೆ ಕೇವಲ ಒಂದೇ ಸಾಲಿನ ಮೂಲಕ ಗಣೇಶನನ್ನು ಮೂಡಿಸುವ ಚಿತ್ರಕಾರರು ಸ್ವಲ್ಪ ವಿರಳವೆಂದೇ ಹೇಳಬಹುದು. ಈ ರೀತಿಯ ಅಪರೂಪದ ಚಿತ್ರ ಬಿಡಿಸುವುದು ಸವಾಲಿನ ಕೆಲಸವೇ ಸರಿ. ಇಂತಹ ಬಹು ಕಠಿಣ ಕಲೆಯನ್ನು ಒಲಿಸಿಕೊಂಡು ಚಿತ್ರವನ್ನು ರಚಿಸುವ ಕಲಾವಿದರೊಬ್ಬರಿದ್ದಾರೆ. ಅವರೇ ಸೈಯದ್ ಹುಸೈನಿ.
ಲಲಿತಕಲೆಯಲ್ಲಿ ಡಿಪ್ಲೊಮಾ ಮುಗಿಸಿರುವ ಇವರು ಏಕ ರೇಖೆಯಲ್ಲಿ ಗಣೇಶನನ್ನು ಚಿತ್ರಿಸುತ್ತಾರೆ. ಇವರ ಚಿತ್ರದಲ್ಲಿ ಗಣೇಶನ ಕಿರೀಟದಿಂದ ಇಲಿಯ ಬಾಲದವರೆಗೂ ಕೇವಲ ಒಂದೇ ರೇಖೆ ಇರುವುದು ವಿಶೇಷ. ಇದುವರೆಗೆ ಸುಮಾರು 100ಕ್ಕೂ ಹೆಚ್ಚು ಏಕರೇಖಾ ಗಣೇಶನ ಚಿತ್ರ ಬಿಡಿಸಿದ್ದಾರೆ.
ಹುಸೈನಿ ಮೊದಲ ಸಾರಿ ಚಿತ್ರ ಬಿಡಿಸಿದ್ದು ಮೂರನೇ ತರಗತಿಯಲ್ಲಿದ್ದಾಗ. ಆ ನಂತರ ಅವರು ಇದುವರೆಗೂ ಬಹಳಷ್ಟು ಚಿತ್ರಗಳನ್ನು ಬಿಡಿಸಿದ್ದಾರೆ. ಕನರ್ಾಟಕ ವಿಶ್ವವಿದ್ಯಾಲಯದಲ್ಲಿ ಲಲಿತಕಲೆಯಲ್ಲಿ ಪದವಿ ಮುಗಿಸಿರುವ ಇವರಿಗೆ ಚಿತ್ರ ಬಿಡಿಸುವುದು ನೀರು ಕುಡಿದಷ್ಟು ಸುಲಭ.
ಇವರು ಸುಮಾರು 3000ಕ್ಕೂ ಹೆಚ್ಚು ಏಕರೇಖಾ ಚಿತ್ರವನ್ನು ಬಿಡಿಸಿದ್ದಾರೆ. ಕೇವಲ ಗಣೇಶನ ಚಿತ್ರವನ್ನಷ್ಟೇ ಅಲ್ಲ, ಕುದುರೆ ಮುಂತಾದ ಹಲವು ಚಿತ್ರಗಳನ್ನು, ಹಲವು ವ್ಯಕ್ತಿಗಳ ಭಾವ ಚಿತ್ರಗಳನ್ನೂ ರಚಿಸಿದ್ದಾರೆ.
ಏಳೆಂಟು ವರ್ಷಗಳ ಹಿಂದೆ ಗಣೇಶನ ಚಿತ್ರ ಬಿಡಿಸಲು ಪ್ರಾರಂಭಿಸಿದ ಇವರಿಗೆ ಇಂದು ಏಕರೇಖಾ ಗಣೇಶನ ಚಿತ್ರ ಬಿಡಿಸಲು ಕನಿಷ್ಟ ಅರ್ಧ ಗಂಟೆ ಸಾಕು. ಕೆಲವೊಮ್ಮೆ ಕೆಲವು ಚಿತ್ರ ಬಿಡಿಸಲು ದಿನಗಟ್ಟಲೆ ಸಮಯವನ್ನು ತೆಗೆದುಕೊಂಡಿದ್ದೂ ಇದೆ. ಹುಸೈನಿ ಪ್ರಾರಂಭದಲ್ಲಿ ಗಣೇಶನ ಆಯಿಲ್ ಪೇಂಟ್ ಹಾಗೂ ಇತರೆ ಚಿತ್ರಗಳನ್ನು ಬಿಡಿಸುತ್ತಿದ್ದರು. ಆ ನಂತರ ಒಂದು ದಿನ ಗಣೇಶನ ಚಿತ್ರವನ್ನು ಏಕರೇಖೆಯಲ್ಲಿ ಬಿಡಿಸುವ ಆಲೋಚನೆ ಮೂಡಿತು. ಆ ನಂತರ ಕೆಲವು ದಿನಗಳು ಪ್ರಯತ್ನಿಸಿ ಚಿತ್ರ ಬಿಡಿಸಲು ಪ್ರಾರಂಭಿಸಿದರು.
ಚಿಕ್ಕಂದಿನಲ್ಲಿ ಹುಸೈನಿ ಅವರ ತಾಯಿ ಉಲ್ಲನ್ನಿನ ಸ್ವೆಟರ್ ಹಾಕುವ ವೇಳೆ ಇವರು ಆ ಉಲ್ಲನ್ನಿನ ಉಂಡೆಯ ಜೊತೆ ಆಟವಾಡುತ್ತಿದ್ದರು. ಅಷ್ಟೇ ಅಲ್ಲದೆ ಅದರಿಂದ ವಿವಿಧ ಚಿತ್ರಗಳನ್ನು ನೆಲದ ಮೇಲೆ ಮೂಡಿಸುತ್ತಿದ್ದರು. ಇದೇ ಅವರ ಏಕ ರೇಖಾ ಚಿತ್ರಕ್ಕೆ ಸ್ಫೂರ್ತಿ ನೀಡಿತು. ನಂತರ ಅವರ ತಾಯಿ ಹುಸೈನಿ ಅವರ ಕಲೆಗೆ ನೀರೆರೆದು ಪೋಷಿಸಿದರು.
ಚಿಕ್ಕಂದಿನಿಂದಲೆ ಒಲಿದುಬಂದ ಕಲೆಯನ್ನು ಬೆಳೆಸಿಕೊಂಡ ಇವರು ಹಲವು ರೀತಿಯ ಚಿತ್ರಗಳನ್ನು ಬಿಡಿಸಿದ್ದರೂ ಹೆಸರು ಗಳಿಸಿದ್ದು ಏಕರೇಖೆಯ ಗಣಪನ ಚಿತ್ರಗಳ ಮೂಲಕ. ಕಷ್ಟದ ಕಲೆಯಲ್ಲೂ ವಿಭಿನ್ನತೆ ಮೆರೆದ ಇವರು, ನಿಂತಿರುವ ಗಣೇಶ, ಕುಳಿತ ಏಕದಂತ, ಇಲಿಯ ಮೇಲೆ ಗಣೇಶನ ಸವಾರಿ, ನೃತ್ಯ ಮಾಡುತ್ತಿರುವ ಗಣಪ-ಹೀಗೆ ಹಲವು ಬಗೆಯ ಗಣಪನ ಚಿತ್ರಗಳನ್ನು ಬಿಡಿಸಿದ್ದಾರೆ.
ಚಿತ್ರ ಬಿಡಿಸುವುದೇ ಇವರ ವೃತ್ತಿ. ಅವರು ಬಿಡಿಸಿರುವ ಅದೆಷ್ಟೋ ಚಿತ್ರಗಳು ಉತ್ತಮ ಬೆಲೆಗೆ ಮಾರಾಟವಾಗಿವೆ.
ಕೇವಲ ಚಿತ್ರ ಬಿಡಿಸುವುದು ಮಾತ್ರ ಇವರ ಕೆಲಸವಲ್ಲ. ಪೇಪರ್ ಕಟಿಂಗ್ನಲ್ಲೂ ಇವರದ್ದು ಎತ್ತಿದ ಕೈ. ಬಗೆಬಗೆಯ ನಮೂನೆ ಗಳು, ಹಲವು ಆಕಾರಗಳು ಇವರ ಕೈಯಲ್ಲಿ ಅರಳಿವೆ. ಇವರ ಕೈಗೆ ಕುಂಚ ಸಿಕ್ಕರೆ ಹೇಗೆ ಗೆರೆಗಳು ಮಾತನಾಡುತ್ತವೆಯೋ ಹಾಗೆಯೆ ಖಾಲಿ ಪೇಪರ್ ಹಾಗೂ ಕತ್ತರಿ ಸಿಕ್ಕರೆ ಸಾಕು ಅವು ಜೀವ ತಳೆಯುತ್ತವೆ.
ಬೆಂಗಳೂರಿನ ಜಯನಗರದಲ್ಲಿ ವಾಸ ಮಾಡುತ್ತಿರುವ ಹುಸೈನಿ ಏಕರೇಖೆಯ ಚಿತ್ರಕಲೆ ಹಾಗೂ ಪೇಪರ್ ಕ್ರಾಫ್ಟ್ ಬಗ್ಗೆ ಹಲವು ಕಡೆ ತರಬೇತಿ, ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳನ್ನು ನೀಡಿದ್ದಾರೆ. 34 ವರ್ಷದ ಹುಸೈನಿ ಮೂಲತಃ ಮಂಡ್ಯ ಜಿಲ್ಲೆಯ ಶಿವನಸಮುದ್ರದವರು.
ಅಂಚೆಕುಂಚ ಪ್ರಶಸ್ತಿಯನ್ನು ನಾಲ್ಕು ಸಾರಿ ಮುಡಿಗೇರಿಸಿ ಕೊಂಡಿರುವ ಹುಸೈನಿ 2009ರಲ್ಲಿ ಜಪಾನ್ ಹಬ್ಬದಲ್ಲೂ ಭಾಗವಹಿಸಿ ಬಂದಿದ್ದಾರೆ. ಬೆಂಗಳೂರು, ಮೈಸೂರು, ಉಡುಪಿ, ಧಾರವಾಡ ಮುಂತಾದ ಕಡೆಗೆಲ್ಲ ಇವರು ಏಕವ್ಯಕ್ತಿ ಪ್ರದರ್ಶನ ಗಳನ್ನು ನೀಡಿದ್ದಾರೆ. ಹುಸೈನಿ ಅವರನ್ನು 9845153277. ಈ ಸಂಖ್ಯೆ ಮೂಲಕ ಸಂಪರ್ಕಿಸಬಹುದು.